ಕೆಪಿಎಲ್‌: ಬೆಂಗಳೂರು ಕಳಪೆ ಬ್ಯಾಟಿಂಗ್‌


Team Udayavani, Sep 12, 2017, 7:20 AM IST

Ban12091712Medn.jpg

ಮೈಸೂರು: ಅನುಭವಿ ಆಟಗಾರ ಪವನ್‌ ದೇಶಪಾಂಡೆ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಬೆಂಗಳೂರು ಬ್ಲಾಸ್ಟರ್
6ನೇ ಕೆಪಿಎಲ್‌ನ ಮೈಸೂರು ಚರಣದಲ್ಲಿ ನಮ್ಮ ಶಿವಮೊಗ್ಗ ತಂಡಕ್ಕೆ 143 ರನ್‌ ಗುರಿ ನೀಡಿದೆ. ಇಲ್ಲಿನ ಮಾನಸಗಂಗೋತ್ರಿಯ ನರಸಿಂಹರಾಜ ಒಡೆಯರ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬೆಂಗಳೂರು ಸ್ಪರ್ಧಾತ್ಮಕ
ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾಯಿತು.

ಆರಂಭಿಕ ಆಘಾತ: ಆರಂಭಿಕ ಆಟಗಾರರಾದ ಆರ್‌. ಸಮರ್ಥ್ ಮತ್ತು ವಿಶ್ವನಾಥನ್‌ ಜೋಡಿ ಹೆಚ್ಚು ಹೊತ್ತು ನಿಲ್ಲಲಿಲ್ಲ. ತಂಡದ ಮೊತ್ತ 2 ರನ್‌ ಆಗುತ್ತಿದ್ದಂತೆ ಪ್ರದೀಪ್‌ ಎಸೆತದಲ್ಲಿ ಸಮರ್ಥ್(1) ವಿಕೆಟ್‌ ಕಳೆದುಕೊಂಡರು. 2ನೇ ಓವರ್‌ನಲ್ಲಿ ವಿಶ್ವನಾಥನ್‌ ಪೆವಿಲಿಯನ್‌ ಸೇರಿದರು. ಹೀಗಾಗಿ ತಂಡ ಆರಂಭದಲ್ಲಿಯೇ ಆಘಾತಕ್ಕೆ ತುತ್ತಾಯಿತು.

ನಂತರ ಬಂದ ಶಿಶಿರ್‌ ಭವಾನೆ (10) ಕೂಡ ಹೆಚ್ಚು ಹೊತ್ತ ನಿಲ್ಲಲಿಲ್ಲ. ಆದರೆ 4ನೇ ವಿಕೆಟ್‌ಗೆ ಜತೆಯಾದ ಮಂಜೇಶ್‌ ರೆಡ್ಡಿ ಮತ್ತು ಪವನ್‌ ದೇಶಪಾಂಡೆ ತಂಡಕ್ಕೆ ಆಸರೆಯಾದರು. ಈ ಜೋಡಿ ನಾಲ್ಕನೇ ವಿಕೆಟ್‌ಗೆ ತಂಡದ ಮೊತ್ತವನ್ನು 81 ರನ್‌ಗೆ ತೆಗೆದುಕೊಂಡು ಹೋದರು. ಈ ಹಂತದಲ್ಲಿ ಸೋಮಣ್ಣ ಎಸೆತದಲ್ಲಿ ಮಂಜೇಶ್‌ ಎಲ್‌ಬಿ ಬಲೆಗೆ ಬಿದ್ದರು. ಮಂಜೇಶ್‌ 43 ಎಸೆತದಲ್ಲಿ 2 ಬೌಂಡರಿ, 1 ಸಿಕ್ಸರ್‌ ಸೇರಿದಂತೆ 37 ರನ್‌ ಬಾರಿಸಿದರು. ನಂತರ ಪವನ್‌ ದೇಶಪಾಂಡೆ ತಂಡದ ಮೊತ್ತವನ್ನು ಏರಿಸುತ್ತಿದ್ದರು. ಆದರೆ ಸೋಮಣ್ಣ ಎಸೆತದಲ್ಲಿಯೇ ಲಿಯಾನ್‌ಗೆ ಕ್ಯಾಚ್‌ ನೀಡಿ ಪೆವಿಲಿಯನ್‌
ಸೇರಿದರು. ಈ ಸಂದರ್ಭದಲ್ಲಿ ತಂಡ 18.3 ಓವರ್‌ಗೆ 119 ರನ್‌ ಮಾಡಿತ್ತು. ಪವನ್‌ 36 ಎಸೆತದಲ್ಲಿ 47 ರನ್‌
ಬಾರಿಸಿದರು. ಅವರ ಆಟದಲ್ಲಿ 3 ಬೌಂಡರಿ, 2 ಸಿಕ್ಸರ್‌ ಸೇರಿತ್ತು.

ಒಂದು ವೇಳೆ ಪವನ್‌ ಮತ್ತು ಮಂಜೇಶ್‌ ಜೋಡಿ ಇನ್ನಷ್ಟು ಸಮಯ ಕ್ರೀಸ್‌ನಲ್ಲಿದ್ದರೆ ಇನ್ನಷ್ಟು ರನ್‌ ಹರಿದುಬರುವ
ಸಾಧ್ಯತೆ ಇತ್ತು. ಆದರೆ ಈ ಎರಡೂ ವಿಕೆಟ್‌ ಅನ್ನು ಸೋಮಣ್ಣ ಪಡೆದು ಬೆಂಗಳೂರಿಗೆ ಆಘಾತ ನೀಡಿದರು. ಕೊನೆಯ
ಹಂತದಲ್ಲಿ ಸ್ಫೋಟಕ ಬ್ಯಾಟಿಂಗ್‌ ನಡೆಸಿದ ರಾಜು ಭಟ್ಕಳ್‌ ತಂಡದ ಮೊತ್ತವನ್ನು ಏರಿಸುವಲ್ಲಿ ನೆರವಾದರು. ರಾಜು 14
ಎಸೆತದಲ್ಲಿ ಅಜೇಯ 28 ರನ್‌ ಬಾರಿಸಿದರು. ಇವರ ಆಟದಲ್ಲಿ 3 ಭರ್ಜರಿ ಸಿಕ್ಸರ್‌ ಸೇರಿತ್ತು. ಆದರೆ ಉಳಿದ ಆಟಗಾರರು ಸ್ಫೋಟಕ ಬ್ಯಾಟಿಂಗ್‌ ನಡೆಸಲು ವಿಫ‌ಲರಾದರು. ಹೀಗಾಗಿ ತಂಡ ದೊಡ್ಡ ಮೊತ್ತ ದಾಖಲಿಸಲು ಸಾಧ್ಯವಾಗಲಿಲ್ಲ. ನಮ್ಮ ಶಿವಮೊಗ್ಗ ತಂಡದ ಪರ ಬೌಲರ್‌ಗಳು ಚುರುಕಿನ ದಾಳಿ ನಡೆಸಿದರು. ಆದಿತ್ಯ ಶರ್ಮ 21ಕ್ಕೆ 3 ವಿಕೆಟ್‌ ಪಡೆದರು.

ಪ್ರದೀಪ್‌ 2 ವಿಕೆಟ್‌ ಪಡೆದರು. ಎಲ್ಲಾ ವಿಕೆಟ್‌ ಪಡೆಯಲು ಸಾಧ್ಯವಾಗದಿದ್ದರೂ ಎದುರಾಳಿಗಳನ್ನು ಕಡಿಮೆ ಮೊತ್ತಕ್ಕೆ
ನಿಯಂತ್ರಿಸುವಲ್ಲಿ ಯಶಸ್ವಿಯಾದರು.

ಸಂಕ್ಷಿಪ್ತ ಸ್ಕೋರ್‌: ಬೆಂಗಳೂರು ಬ್ಲಾಸ್ಟರ್ 20 ಓವರ್‌ಗೆ 142/6 (ಪವನ್‌ ದೇಶಪಾಂಡೆ 47, ಮಂಜೇಶ್‌ ರೆಡ್ಡಿ 37,
ಆದಿತ್ಯ ಸೋಮಣ್ಣ 21ಕ್ಕೆ 3).

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.