ಕೆಪಿಎಲ್ ಮ್ಯಾಚ್ ಫಿಕ್ಸಿಂಗ್: ಬಳ್ಳಾರಿ ಮಾಲಕ, ಆಟಗಾರರಿಗೆ ಜಾಮೀನು
Team Udayavani, Dec 11, 2019, 11:49 PM IST
ಬೆಂಗಳೂರು: ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಬಳ್ಳಾರಿ ಟಸ್ಕರ್ ತಂಡದ ನಾಯಕ ಸಿ.ಎಂ. ಗೌತಮ್ ಮತ್ತು ಆಟಗಾರ ಅಬ್ರಾರ್ ಖಾಜಿ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಇದೇ ವೇಳೆ ಬಂಧನ ಭೀತಿ ಎದುರಿಸುತ್ತಿದ್ದ ಬಳ್ಳಾರಿ ಟಸ್ಕರ್ ತಂಡದ ಮಾಲಕ ಅರವಿಂದ ರೆಡ್ಡಿಗೂ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಸಿ.ಎಂ. ಗೌತಮ್ ಮತ್ತು ಅಬ್ರಾರ್ ಖಾಜಿ ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಣ ಕೆ.ಎನ್. ಫಣೀಂದ್ರ ಅವರಿದ್ದ ಏಕಸದಸ್ಯ ನ್ಯಾಯಪೀಠ, ಇಬ್ಬರೂ ಆರೋಪಿಗಳು ತಲಾ 2 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್, ಇಬ್ಬರ ಶ್ಯೂರಿಟಿ ನೀಡಬೇಕು ಮತ್ತು ಸಾಕ್ಷ್ಯಾಧಾರ ನಾಶಪಡಿಸಬಾರದು ಎಂಬ ಷರತ್ತುಗಳೊಂದಿಗೆ ಜಾಮೀನು ನೀಡಿತು.