ಕೆಪಿಎಲ್‌: ಪೊಲೀಸರಿಗೆ ಲಭಿಸಿತು 2018ರ ಮ್ಯಾಚ್‌ ಫಿಕ್ಸಿಂಗ್‌ ಸುಳಿವು


Team Udayavani, Oct 26, 2019, 5:10 AM IST

KPL-DD

ಬೆಂಗಳೂರು: ಕರ್ನಾಟಕ ಕ್ರಿಕೆಟ್‌ ಲೀಗ್‌ ( ಕೆಪಿಎಲ್‌) ಮ್ಯಾಚ್‌ ಫಿಕ್ಸಿಂಗ್‌ ಅಕ್ರಮ ಬಗೆದಷ್ಟೂ ಬಯ ಲಾಗುತ್ತಿದೆ. 2018ರ ಆವೃತ್ತಿಯಲ್ಲೂ ಮ್ಯಾಚ್‌ಫಿಕ್ಸಿಂಗ್‌ ನಡೆದಿರುವುದನ್ನು ಕೇಂದ್ರ ಅಪರಾಧ ವಿಭಾಗ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ.

2019ರ ಪ್ರಕರಣದ ಬೆನ್ನತ್ತಿ ಹೊರಟ ಪೊಲೀಸರಿಗೆ, ಅನಿರೀಕ್ಷಿತ ವೆಂಬಂತೆ 2018ರ ಆವೃತ್ತಿಯಲ್ಲಿ ನಡೆದಿದೆ ಎನ್ನಲಾದ ಫಿಕ್ಸಿಂಗ್‌ ಪ್ರಕರಣಗಳ ಸುಳಿವು ಸಿಕ್ಕಿದೆ. ಈ ಹಿನ್ನೆಲೆ ಬೆಂಗಳೂರು ಬ್ಲಾಸ್ಟರ್ಸ್‌ ತಂಡದ ಬೌಲಿಂಗ್‌ ತರಬೇತುದಾರರಾಗಿದ್ದ ವಿನೂಪ್ರಸಾದ್‌ ಹಾಗೂ ಬ್ಯಾಟ್ಸ್‌ಮನ್‌ ಎಂ. ವಿಶ್ವನಾಥನ್‌ ಅವರನ್ನು ಬಂಧಿಸಲಾಗಿದೆ.

ಇಬ್ಬರು ಆರೋಪಿಗಳು ಶಾಮೀಲು
ಕೆಪಿಎಲ್‌ 2018ರ ಆವೃತ್ತಿಯಲ್ಲಿ ಬೆಂಗಳೂರು ಬ್ಲಾಸ್ಟರ್ಸ್‌ ಹಾಗೂ ಬೆಳಗಾವಿ ಪ್ಯಾಂಥರ್ಸ್‌ ನಡುವಿನ ಪಂದ್ಯದಲ್ಲಿ ಬುಕ್ಕಿಗಳೊಂದಿಗೆ ಇಬ್ಬರು ಆರೋಪಿಗಳು ಕೈಜೋಡಿಸಿದ್ದರು. ನಿಧಾನಗತಿಯ ಬ್ಯಾಟಿಂಗ್‌ ಮಾಡುವ ಸಲುವಾಗಿ ವಿಶ್ವನಾಥನ್‌ ಬುಕ್ಕಿಗಳಿಂದ 5 ಲಕ್ಷ ರೂ. ಪಡೆದುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬೌಲಿಂಗ್‌ ಕೋಚ್‌ ವಿನೂಪ್ರಸಾದ್‌, ಬುಕ್ಕಿಗಳೊಂದಿಗೆ ನೇರ ಸಂಪರ್ಕ ಹೊಂದಿದ್ದರು. ಬುಕ್ಕಿಗಳಾದ ಮುಖೇಶ್‌, ಖಾನ್‌, ವೆಂಕಿ ಅವರನ್ನು ಸಂಪರ್ಕಿಸಿದ್ದರು. ಬಳಿಕ, ಬ್ಯಾಟ್ಸ್‌ಮನ್‌ ವಿಶ್ವನಾಥನ್‌ ಅವರನ್ನು ಫಿಕ್ಸಿಂಗ್‌ಗೆ ಒಪ್ಪಿಸಿದ್ದರು.

ಬುಕ್ಕಿಗಳಾದ ಮುಖೇಶ್‌ ಮತ್ತಿತರರು ತಲೆಮರೆಸಿ ಕೊಂಡಿದ್ದಾರೆ. ಇನ್ನೂ ಹಲವು ಆಟಗಾರರು ಹಾಗೂ ಇತರ ತಂಡಗಳ ಸಿಬಂದಿ ಜತೆ ಶಾಮೀಲಾಗಿ ಮ್ಯಾಚ್‌ಫಿಕ್ಸಿಂಗ್‌ ನಡೆಸಿರುವ ಸಾಧ್ಯತೆಯಿದೆ, ಈ ನಿಟ್ಟಿನಲ್ಲಿ ತನಿಖೆ ಮುಂದುವರಿಸಲಾಗಿದೆ ಎಂದು ಹಿರಿಯ ಅಧಿಕಾರಿ ಯೊಬ್ಬರು ತಿಳಿಸಿದ್ದಾರೆ.

2019ರ ಕೆಪಿಎಲ್‌ ಮ್ಯಾಚ್‌ ಫಿಕ್ಸಿಂಗ್‌ ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಹಲವು ಆಟಗಾರರನ್ನು, ಮಾಲಕರನ್ನು ವಿಚಾರ ಣೆಗೊಳಪಡಿಸಲಾಗಿದೆ. ಈ ಪ್ರಕರಣದ ವಿಸ್ತೃತ ತನಿಖೆಯಲ್ಲಿ 2018ರಲ್ಲಿಯೂ ಮ್ಯಾಚ್‌ಫಿಕ್ಸಿಂಗ್‌ ನಡೆದಿರುವುದು ಪತ್ತೆಯಾಯಿತು. ಈ ಹಿನ್ನೆಲೆಯಲ್ಲಿ ಸಿಸಿಬಿ 2018ರ ಮ್ಯಾಚ್‌ಫಿಕ್ಸಿಂಗ್‌ ಕುರಿತು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದರು.

2019ರ ಫಿಕ್ಸಿಂಗ್‌ ಪ್ರಕರಣ
2019ರ ಕೆಪಿಎಲ್‌ ಟೂರ್ನಿಯಲ್ಲಿ ಮ್ಯಾಚ್‌ ಫಿಕ್ಸಿಂಗ್‌ ಪ್ರಕರಣ ಸಂಬಂಧ ಬಳ್ಳಾರಿ ಟಸ್ಕರ್ಸ್‌ ತಂಡದ ಬೌಲರ್‌ ನೀಡಿದ ದೂರಿನ ಅನ್ವಯ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಈಗಾಗಲೇ ಬೆಳಗಾವಿ ಪ್ಯಾಂಥರ್ಸ್‌ ತಂಡದ ಮಾಲಕ ಅಲಿ ಅಶ್ಫಾಕ್‌ ತಹ್ರಾ, ಬುಕ್ಕಿ ಬೆಂಗಳೂರಿನ ಭವೇಶ್‌ ಬಫಾ°ನನ್ನು ಬಂಧಿಸಿದೆ. ತಲೆಮರೆಸಿಕೊಂಡಿರುವ ದೆಹಲಿ ಮೂಲದ ಸನ್ಯಾಮ್‌ ಹೆಸರಿನ ಬುಕ್ಕಿ ಬಂಧನಕ್ಕೆ ಬಲೆಬೀಸಿದೆ.

ಬೌಲರ್‌ ಭವೇಶ್‌ ಗುಲ್ಚಾ ಅವರನ್ನು ಸಂಪರ್ಕಿಸಿದ್ದ ಭವೇಶ್‌ ಬಫಾ° ಹಾಗೂ ಇತರ ಬುಕ್ಕಿಗಳು ಒಂದು ಓವರ್‌ನಲ್ಲಿ 10ಕ್ಕೂ ಹೆಚ್ಚು ರನ್‌ ನೀಡಿದರೆ 2 ಲಕ್ಷ ರೂ. ನೀಡುವುದಾಗಿ ಆಮಿಷವೊಡ್ಡಿದ್ದರು. ಇದಕ್ಕೆ ಗುಲ್ಚಾ ಒಪ್ಪಿರಲಿಲ್ಲ ಎಂದು ಅಧಿಕಾರಿ ಹೇಳಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.