ಸೆ.1ರಿಂದ ಕೆಪಿಎಲ್‌ ಟಿ20 ಆರಂಭ


Team Udayavani, Aug 15, 2017, 2:18 PM IST

15-SPORTS-3.jpg

ಬೆಂಗಳೂರು: ಆರನೇ ಆವೃತ್ತಿಯ ಕರ್ನಾಟಕ ಪ್ರೀಮಿಯರ್‌ ಲೀಗ್‌ (ಕೆಪಿಎಲ್‌) ಟಿ20 ಕ್ರಿಕೆಟ್‌ ಕೂಟಕ್ಕೆ ಸೆಪ್ಟಂಬರ್‌ 1 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ದೊರೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ ತಂಡವನ್ನು ಬೆಳಗಾವಿ ಪ್ಯಾಂಥರ್ ಎದುರಿಸಲಿದೆ. ಕೆಪಿಎಲ್‌ ಒಟ್ಟು 24 ಪಂದ್ಯ,  19 ದಿನ, 3 ಕ್ರೀಡಾಂಗಣದಲ್ಲಿ ನಡೆಯಲಿದೆ.

ಸೆ.2ಕ್ಕೆ ಬೆಂಗಳೂರಿಗೆ ಮೊದಲ ಪಂದ್ಯ: ಪ್ರಸ್ತುತ ಕೆಪಿಎಲ್‌ಗೆ ಹೊಸ ತಂಡವಾಗಿ ಆಗಮಿಸಿರುವ ಬೆಂಗಳೂರು ಬ್ಲಾಸ್ಟರ್ ತಂಡ ಸೆ. 2ರಂದು ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಮೈಸೂರು ವಾರಿಯರ್ ತಂಡವನ್ನು ಎದುರಿಸಲಿದೆ. ಇದಾದ ಬಳಿಕ  ಸೆ. 3ರಂದು ಹಾಲಿ ಚಾಂಪಿಯನ್‌ ಬಳ್ಳಾರಿ ಟಸ್ಕರ್ ತಂಡ ನಮ್ಮ ಶಿವಮೊಗ್ಗ ತಂಡವನ್ನು ಎದುರಿಸಲಿದೆ. ಸೆ. 4ರಂದು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ್‌ ಒಡೆಯರ್‌ ಕ್ರೀಡಾಂಗಣದಲ್ಲಿ ಮೈಸೂರು ಆವೃತ್ತಿಯ ಮೊದಲ ಪಂದ್ಯಕ್ಕೆ ಚಾಲನೆ ಸಿಗಲಿದೆ. ಆತಿಥೇಯ ಮೈಸೂರು ತಂಡ ಮೊದಲ  ಪಂದ್ಯದಲ್ಲಿ ಬಿಜಾಪುರ ಬುಲ್ಸ್‌ ತಂಡವನ್ನು ಎದುರಿಸಲಿದೆ. ಪ್ರಸ್ತುತ ನಡೆಯುತ್ತಿರುವ ಭಾರತ – ಲಂಕಾ, ಮುಂಬರುವ ಭಾರತ – ಆಸ್ಟ್ರೇಲಿಯ ಸರಣಿಯನ್ನು ಗಮನದಲ್ಲಿಟ್ಟುಕೊಂಡು ಕೆಪಿಎಲ್‌ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಪ್ರಕಟನೆಯಲ್ಲಿ ಕೂಟದ ಸಂಘಟಕ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ತಿಳಿಸಿದೆ.

ಸೆಪ್ಟಂಬರ್‌ 23ಕ್ಕೆ ಫೈನಲ್‌: ಹುಬ್ಬಳ್ಳಿಯಲ್ಲಿ ಸೆಮಿಫೈನಲ್‌ ಹಾಗೂ ಫೈನಲ್‌ ಪಂದ್ಯ ನಡೆಯಲಿದೆ. ಫೈನಲ್‌ ಸೆಪ್ಟಂಬರ್‌ 23ಕ್ಕೆ ನಡೆಯಲಿದೆ. ಇದಕ್ಕೂ ಮೊದಲು ಸೆಪ್ಟಂಬರ್‌ 20ಕ್ಕೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡ ಹಾಗೂ ಅಂಕಪಟ್ಟಿಯ 4ನೇ ಸ್ಥಾನಿ ತಂಡದ ನಡುವೆ ಮೊದಲ ಸೆಮಿಫೈನಲ್‌ ಹಣಾಹಣಿ ನಡೆಯಲಿದೆ. ಸೆಪ್ಟಂಬರ್‌ 22ಕ್ಕೆ ಲೀಗ್‌ನಲ್ಲಿ 2 ಮತ್ತು 3ನೇ ಸ್ಥಾನ ಪಡೆದ ತಂಡಗಳು ಮುಖಾಮುಖೀ ನಡೆಸಲಿವೆ. ಗೆದ್ದ ತಂಡಗಳು ಪ‌Åಶಸ್ತಿಗಾಗಿ ಸೆಣಸಾಟ ನಡೆಸಲಿವೆ.

ಟಾಪ್ ನ್ಯೂಸ್

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.