ಪ್ಯಾರಾಲಂಪಿಕ್ಸ್ ನಲ್ಲಿ ಭಾರತಕ್ಕೆ ಐದನೇ ಚಿನ್ನ: ಬ್ಯಾಡ್ಮಿಂಟನ್ ನಲ್ಲಿ ಬಂಗಾರ ಗೆದ್ದ ಕೃಷ್ಣ
Team Udayavani, Sep 5, 2021, 10:25 AM IST
ಟೋಕಿಯೊ: ಈ ಬಾರಿಯ ಪ್ಯಾರಾಲಂಪಿಕ್ಸ್ ನಲ್ಲಿ ಭಾರತದ ಕ್ರೀಡಾ ಪಟುಗಳು ಇತಿಹಾಸ ನಿರ್ಮಿಸುತ್ತಿದ್ದಾರೆ. ಕೂಟದ ಕೊನೆಯ ದಿನವಾದ ಇಂದು ಭಾರತಕ್ಕೆ ಬಂಗಾರ ಬೇಟೆ ಮುಂದುವರೆದಿದೆ.
ಬ್ಯಾಡ್ಮಿಂಟನ್ ಸ್ಪರ್ಧೆಯ ಎಸ್ ಎಚ್ 6 ವಿಭಾಗದಲ್ಲಿ ಭಾರತದ ಕೃಷ್ಣ ನಾಗರ್ ಅವರು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ಹಾಂಗ್ ಕಾಂಗ್ ನ ಚು ಮನ್ ಕೈ ಅವರನ್ನು ಸೋಲಿಸಿದ ಕೃಷ್ಣ ನಾಗರ್ ಭಾರತಕ್ಕೆ ಐದನೇ ಚಿನ್ನದ ಪದಕ ತಂದಿತ್ತರು.
ಇದನ್ನೂ ಓದಿ:ಪ್ಯಾರಾಲಂಪಿಕ್ಸ್ ನಲ್ಲಿ ಪದಕ ಗೆದ್ದ ಜಿಲ್ಲಾಧಿಕಾರಿ: ಹಾಸನದ ಸುಹಾಸ್ ಕಥೆಯೇ ರೋಚಕ
43 ನಿಮಷಗಳ ಕಾಲ ನಡೆದ ಫೈನಲ್ ಪಂದ್ಯದಲ್ಲಿ ಕೃಷ್ಣ ಅವರು ಎದುರಾಳಿಯ ವಿರುದ್ಧ 21-17, 16-21, 21-17 ಸೆಟ್ ಗಳ ಅಂತರದಿಂದ ಗೆಲುವು ಸಾಧಿಸಿದರು.
ಇಂದು ಮುಂಜಾನೆ ನಡೆದ ಪುರುಷರ ಬ್ಯಾಡ್ಮಿಂಟನ್ ಸ್ಪರ್ಧೆಯ ಎಸ್ಎಲ್ 4 ವಿಭಾಗದ ಫೈನಲ್ ಪಂದ್ಯದಲ್ಲಿ ಕನ್ನಡಿಗ ಸುಹಾಸ್ ಯತಿರಾಜ್ ಸೋತರೂ ಬೆಳ್ಳಿ ಪದಕ ಗೆದ್ದರು. ಹಾಸನದ ಸುಹಾಸ್ ಅವರು ನೋಯ್ಡಾದಲ್ಲಿ ಜಿಲ್ಲಾಧಿಕಾರಿಯಾಗಿದ್ದು, ಪ್ಯಾರಾಲಂಪಿಕ್ಸ್ ಪದಕ ಗೆದ್ದ ಮೊದಲ ಐಎಎಸ್ ಅಧಿಕಾರಿ ಎಂಬ ದಾಖಲೆ ಬರೆದರು.
Congratulations Krishna Nagar
Tokyo Paralympics, Badminton Men’s Singles SH6: #KrishnaNagar beats Kai Man Chu to win Gold .#badminton #IND #praise4para #Cheer4India #TeamIndia #Tokyo2020 pic.twitter.com/jLgcpxTAk4
— Pratap Simha (@mepratap) September 5, 2021
ಇದರೊಂದಿಗೆ ಭಾರತ ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ 19ನೇ ಪದಕ ಗೆದ್ದುಕೊಂಡಿತು. ಐದು ಚಿನ್ನ, ಎಂಟು ಬೆಳ್ಳಿ ಮತ್ತು ಆರು ಕಂಚಿನ ಪದಕಗಳನ್ನು ಭಾರತದ ಕ್ರೀಡಾಪುಟಗಳು ಗೆದ್ದುಕೊಂಡಿದ್ದಾರೆ. ಸದ್ಯ ಭಾರತ ಪದಕ ಪಟ್ಟಿಯಲ್ಲಿ 24ನೇ ಸ್ಥಾನದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ