ರಾಜ್ಯ ಕ್ರಿಕೆಟಿಗರಿಗೆ ‘ಕೆಎಸ್‌ಸಿಎ ಸುರಕ್ಷಾ’ ಕವಚ


Team Udayavani, Mar 27, 2017, 3:59 PM IST

KSCA-27-3.jpg

ಬೆಂಗಳೂರು: ಕೆಎಸ್‌ಸಿಎ (ರಾಜ್ಯ ಕ್ರಿಕೆಟ್‌ ಸಂಸ್ಥೆ) ಇತ್ತೀಚೆಗೆ ಸಬ್‌ ಏರ್‌ ಸಿಸ್ಟಮ್‌ ಅಳವಡಿಸಿ ವಿಶ್ವಕ್ಕೆ ಮಾದರಿಯಾಗಿತ್ತು. ಈ ಬೆನ್ನಲ್ಲೇ ಕ್ರಿಕೆಟಿಗರ ಹಿತದೃಷ್ಟಿಯನ್ನು ಕಾಯುವ ‘ಕೆಎಸ್‌ಸಿಎ ಸುರಕ್ಷಾ’ ಎಂಬ ಮಹತ್ವದ ಯೋಜನೆಯನ್ನು ಘೋಷಿಸಿದೆ. ಈ ಯೋಜನೆ ಹೊಂದಿದ ದೇಶದ ಮೊದಲ ಕ್ರಿಕೆಟ್‌ ಸಂಸ್ಥೆ ಎಂಬ ಕೀರ್ತಿಗೆ ಕೆಎಸ್‌ಸಿಎ ಪಾತ್ರವಾಗಿದೆ. 

ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ  ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆಎಸ್‌ಸಿಎ ಈ ಯೋಜನೆಯನ್ನು ಘೋಷಿಸಿತು. ಈ ಯೋಜನೆಯಲ್ಲಿ ಆಟಗಾರರು ಅಪಘಾತಕ್ಕೆ ಈಡಾದ ಸಂದರ್ಭದಲ್ಲಿ ಆಟಗಾರರಿಗೆ ಪ್ರತ್ಯಕ್ಷವಾಗಿ ಅಥವಾ ಕುಟುಂಬಕ್ಕಾಗಿ ಸಿಗಲಿದೆ ಎಂದು ಕೆಎಸ್‌ಸಿಎ ಮಾಧ್ಯಮ ವಕ್ತಾರ ವಿನಯ್‌ ಮೃತ್ಯುಂಜಯ ತಿಳಿಸಿದರು.

ನ್ಯಾಷನಲ್‌ ಇನ್‌ಶೂರೆನ್ಸ್‌ ಸಂಸ್ಥೆ ಸಹಭಾಗಿತ್ವ 
ರಾಜ್ಯ ಕ್ರಿಕೆಟ್‌ ಸಂಸ್ಥೆ ಜತೆಗೆ ನ್ಯಾಷನಲ್‌ ಇನ್‌ಶೂರೆನ್ಸ್‌ ಕಂಪನಿ ಸಹಭಾಗಿತ್ವ ವಹಿಸಿದೆ. ‘ಕೆಎಸ್‌ಸಿಎ ಸುರಕ್ಷಾ’ ಯೋಜನೆ ಎ.1ರಿಂದ ಜಾರಿಯಾಗಲಿದೆ. ಬಿಸಿಸಿಐನಿಂದ ವಿಮೆಗೆ ಒಳಪಟ್ಟ ಆಟಗಾರರು ಹೊರತುಪಡಿಸಿದಂತೆ ಉಳಿದ ಆಟಗಾರರಿಗೆ ಮಾತ್ರ ಈ ವಿಮೆ ಅನ್ವಯವಾಗಲಿದೆ.

ಸುರಕ್ಷೆಯಿಂದ ಆಟಗಾರರಿಗೆ ಪ್ರಯೋಜನವೇನು?: 
ಕ್ರಿಕೆಟಿಗನೊಬ್ಬ ಕ್ರೀಡಾಂಗಣ ಅವಘಡ ಅಥವಾ ಅಪಘಾತದಿಂದ ಮೃತಪಟ್ಟರೆ ಆತನ ಕುಟುಂಬಕ್ಕೆ 1 ಲಕ್ಷ ರೂ. ನಗದು ದೊರೆಯಲಿದೆ. ಅಲ್ಲದೆ ಆಟಗಾರ ಮಕ್ಕಳನ್ನು ಹೊಂದಿದ್ದರೆ ಅವರ ಶಿಕ್ಷಣಕ್ಕೆ ಶೇ.50ರಷ್ಟು ಹಣದ ಸಹಾಯ ಸಿಗಲಿದೆ. ಶಾಶ್ವದ ಅಂಗವಿಕಲತೆ, ಅರೆ ಅಂಗವಿಕಲತೆಗೆ ಒಳಗಾದರೆ 1 ಲಕ್ಷ ರೂ. ವರೆಗೆ ನೆರವು ಸಿಗಲಿದೆ. ಅಲ್ಲದೆ ಹೊರರೋಗಿ ವಿಭಾಗದಲ್ಲೂ ದಾಖಲಾದರೆ 5 ಸಾವಿರ ರೂ.ವರೆಗೆ ನೆರವು ದೊರೆಯಲಿದೆ.

ಕೆಎಸ್‌ಸಿಎನಿಂದ ಮತ್ತೂಂದು ಪ್ರಥಮ
ರಾಜ್ಯ ಕ್ರಿಕೆಟ್‌ ಸಂಸ್ಥೆ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿದೆ. ಅದರಲ್ಲಿ ಕ್ರೀಡಾ ಪುನರ್ವಸತಿ ಕೇಂದ್ರ, ಸೋಲಾರ್‌ ಪವರ್‌ ಪ್ರೋಜೆಕ್ಟ್,  ಸಬ್‌ ಏರ್‌ ಸಿಸ್ಟಮ್‌, ಮಳೆ ನೀರು ಮತ್ತು ನೀರಿನ ಶುದ್ಧೀಕರಣ ಘಟಕ ಪ್ರಮುಖವಾದವು. ಇದೀಗ ಸುರಕ್ಷಾ ಯೋಜನೆಯನ್ನು ದೇಶದಲ್ಲೇ ರಾಜ್ಯ ಕ್ರಿಕೆಟ್‌ ಸಂಸ್ಥೆ ಮೊದಲ ಬಾರಿಗೆ ಪರಿಚಯಿಸಿ ಎಲ್ಲರ ಗಮನ ಸೆಳೆದಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.