ಕರ್ನಾಟಕ ಪ್ರೀಮಿಯರ್‌ ಲೀಗ್‌ ಬದಲು ಇನ್ನು ಕೆಎಸ್‌ಸಿಎ ಟಿ20 ಕೂಟ

ಫ್ರಾಂಚೈಸಿಗಳಿಗೆ ತಂಡಗಳ ಮಾಲಿಕತ್ವವಿಲ್ಲ, ಪ್ರಾಯೋಜಕತ್ವ ವಹಿಸುವುದಕ್ಕಷ್ಟೇ ಅವಕಾಶ

Team Udayavani, Jun 30, 2022, 3:39 PM IST

ಕರ್ನಾಟಕ ಪ್ರೀಮಿಯರ್‌ ಲೀಗ್‌ ಬದಲು ಇನ್ನು ಕೆಎಸ್‌ಸಿಎ ಟಿ20 ಕೂಟ

ಬೆಂಗಳೂರು: ರಾಜ್ಯ ಕ್ರಿಕೆಟ್‌ ಸಂಸ್ಥೆ “ಕೆಎಸ್‌ಸಿಎ ಟಿ20 ಕ್ರಿಕೆಟ್‌ ಕೂಟ’ವನ್ನು ಆ.15ರಿಂದ 31ರವರೆಗೆ ಆಯೋಜಿಸಲು ನಿರ್ಧರಿಸಿದೆ. ವಿಶೇಷವೇನು ಗೊತ್ತಾ? ಈ ಹಿಂದೆ ವರ್ಷವರ್ಷ ನಡೆಯುತ್ತಿದ್ದ ಕರ್ನಾಟಕ ಪ್ರೀಮಿಯರ್‌ ಲೀಗ್‌ ಕೂಟಕ್ಕೆ ಬದಲಿಯಾಗಿ ಈ ಕೂಟ ನಡೆಯಲಿದೆ. ಅರ್ಥಾತ್‌ ಕೆಎಸ್‌ಸಿಎ ನಡೆಸುತ್ತಿದ್ದ ಕೆಪಿಎಲ್‌ ಕೂಟ ಹೊಸ ಹೆಸರಿನೊಂದಿಗೆ ಬರಲಿದೆ, ಜೊತೆಗೆ ಹೊಸ ಬದಲಾವಣೆಗಳನ್ನೂ ಹೊಂದಿರಲಿದೆ.

ಮುಖ್ಯವಾಗಿ ಈ ಕೂಟ ಕೆಪಿಎಲ್‌ನಂತೆ ಫ್ರಾಂಚೈಸಿ ಆಧಾರಿತವಾಗಿರುವುದಿಲ್ಲ. ಅಂದರೆ ಫ್ರಾಂಚೈಸಿಗಳ ಬಳಿ ಮಾಲಿಕತ್ವವಿರುವುದಿಲ್ಲ, ಕಂಪನಿ ಗಳು ತಂಡದ ಪ್ರಾಯೋಜಕತ್ವವನ್ನು ಮಾತ್ರ ವಹಿಸುತ್ತವೆ. ಸದ್ಯದ ಪ್ರಕಾರ ತಂಡಗಳ ಮಾಲಿಕತ್ವವನ್ನು ಕೆಎಸ್‌ಸಿಎ ತಾನೇ ಉಳಿಸಿಕೊಳ್ಳಲಿದೆ. ಹೀಗಾಗಿ ಇಲ್ಲಿಯವರೆಗೆ ಕೆಪಿಎಲ್‌ ನಲ್ಲಿ ಆಡಿದ್ದ ತಂಡಗಳು ಇನ್ನು ಇರುವುದಿಲ್ಲ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಎಸ್‌ಸಿಎ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಿದೆ.

ಇಒಐಗೆ ಆಹ್ವಾನ: ಕೆಎಸ್‌ಸಿಎ ಕೂಟ ಬೆಂಗಳೂರು, ಹುಬ್ಬಳ್ಳಿ, ಮೈಸೂರಿನಲ್ಲಿ ನಡೆಯಲಿದೆ. ರಾಜ್ಯ ಕ್ರಿಕೆಟ್‌ ಸಂಸ್ಥೆ ಖ್ಯಾತ ಕಂಪನಿಗಳಿಂದ ಇಒಐಯನ್ನು (ಎಕ್ಸ್‌ಪ್ರೆಶನ್‌ ಆಫ್ ಇಂಟರೆಸ್ಟ್‌) ಆಹ್ವಾನಿಸಿದೆ. ಜೂ.29ರಿಂದ ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೆಎಸ್‌ಸಿಎ ಕಚೇರಿಯಲ್ಲಿ 11,800 ರೂ. ನೀಡಿ ಖರೀದಿಸಬಹುದು. ಜು.5, ಸಂಜೆ 4 ಗಂಟೆಗಳೊಳಗೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಇಒಐಯನ್ನು ಚಿನ್ನಸ್ವಾಮಿ ಮೈದಾನದಲ್ಲಿರುವ ಕೆಎಸ್‌ಸಿಎ ಕಚೇರಿಗೆ ಮತ್ತೆ ಸಲ್ಲಿಸಬೇಕಾಗುತ್ತದೆ.

ಇದನ್ನೂ ಓದಿ:ಲಂಕಾ-ಆಸೀಸ್ ಟೆಸ್ಟ್: ಭಾರೀ ಗಾಳಿಗೆ ಕುಸಿದು ಬಿದ್ದ ಪ್ರೇಕ್ಷಕರ ಗ್ಯಾಲರಿ; ತಪ್ಪಿದ ಅನಾಹುತ

ಬೆಂಗಳೂರು ನಗರ, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ-ಧಾರವಾಡ, ರಾಯಚೂರು, ಮಂಗಳೂರು ತಂಡಗಳ ಪ್ರಾಯೋಜಕತ್ವ ವಹಿಸಲು, ಅವುಗಳ ಹೆಸರಿನ ಮೇಲೆ ಅಧಿಕಾರ ಪಡೆಯಲು ಕಂಪನಿಗಳು ಯತ್ನಿಸಬಹುದು. ಆದರೆ ಈ ಪ್ರಕ್ರಿಯೆಯಲ್ಲಿ ಎಲ್ಲ ಪ್ರಕ್ರಿಯೆಗಳನ್ನು ಕೆಎಸ್‌ಸಿಎ ತಾನೇ ಉಳಿಸಿಕೊಂಡಿದೆ.

ಟಾಪ್ ನ್ಯೂಸ್

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.