ಲೇಡಿ ರಾಣಾ ಬ್ಯಾಟಿಂಗ್‌ ಪ್ರತಾಪ : ಚೊಚ್ಚಲ ಟೆಸ್ಟ್‌ನಲ್ಲೇ ಅಮೋಘ ಆಲ್‌ರೌಂಡ್‌ ಸಾಹಸ


Team Udayavani, Jun 20, 2021, 11:20 PM IST

ಲೇಡಿ ರಾಣಾ ಬ್ಯಾಟಿಂಗ್‌ ಪ್ರತಾಪ : ಚೊಚ್ಚಲ ಟೆಸ್ಟ್‌ನಲ್ಲೇ ಅಮೋಘ ಆಲ್‌ರೌಂಡ್‌ ಸಾಹಸ

ಬ್ರಿಸ್ಟಲ್‌: ಏಳು ವರ್ಷಗಳ ಬಳಿಕ ಟೆಸ್ಟ್‌ ಆಡಲಿಳಿದ ಭಾರತವನ್ನು ಇಬ್ಬರು “ಡೆಬ್ಯು’ ವನಿತಾ ಆಟಗಾರ್ತಿಯರು ಬಚಾಯಿಸಿದ್ದು ದೊಡ್ಡ ಸಾಧನೆಯಾಗಿ ದಾಖಲಾಗಿದೆ. ಆತಿಥೇಯ ಇಂಗ್ಲೆಂಡ್‌ ವಿರುದ್ಧ ಬ್ರಿಸ್ಟಲ್‌ನಲ್ಲಿ ಆಡಲಾದ ಈ ಟೆಸ್ಟ್‌ ಪಂದ್ಯದಲ್ಲಿ 17 ವರ್ಷದ ಡ್ಯಾಶಿಂಗ್‌ ಓಪನರ್‌ ಶಫಾಲಿ ವರ್ಮ ಮತ್ತು ಉತ್ತರಾಖಂಡದ ಆಲ್‌ರೌಂಡರ್‌ ಸ್ನೇಹ್‌ ರಾಣಾ ಭರವಸೆಯ ತಾರೆ ಗಳಾಗಿ ಮಿಂಚಿದರು.

ಯಾವ ಎಸೆತಗಳಿಗೂ ಕೇರ್‌ ಮಾಡದ ಶಫಾಲಿ ಥೇಟ್‌ ವೀರೇಂದ್ರ ಸೆಹವಾಗ್‌ ಶೈಲಿಯಲ್ಲಿ ಬ್ಯಾಟ್‌ ಬೀಸಿ 96 ಮತ್ತು 63 ರನ್‌ ಬಾರಿಸಿ ಅನೇಕ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಂಡದ್ದು ಈಗ ಇತಿಹಾಸ.

ಮ್ಯಾಚ್‌ ಸೇವಿಂಗ್‌ ನಾಕ್‌
ಇನ್ನೊಂದೆಡೆ ಸ್ನೇಹ್‌ ರಾಣಾ ಸಂಕಟದ ಸಮಯದಲ್ಲಿ ತಂಡದ ಕೈಹಿಡಿದರು. ಫಾಲೋಆನ್‌ಗೆ ಸಿಲುಕಿದ ಭಾರತ 199ಕ್ಕೆ 7 ವಿಕೆಟ್‌ ಕಳೆದುಕೊಂಡು ಸೋಲಿನತ್ತ ಮುಖ ಮಾಡಿದಾಗ “ಲೇಡಿ ರಾಣಾ’ ಅಜೇಯ 80 ರನ್‌ ಬಾರಿಸಿ ತಮ್ಮ ಬ್ಯಾಟಿಂಗ್‌ ಪ್ರತಾಪ ತೋರಿದರು. ಇದು ಫಾಲೋಆನ್‌ ಇನ್ನಿಂಗ್ಸ್‌ನಲ್ಲಿ ದಾಖಲಾದ 3ನೇ ಅತ್ಯಧಿಕ ವೈಯಕ್ತಿಕ ಗಳಿಕೆ.

ಶಿಖಾ ಪಾಂಡೆ (18), ತನಿಯಾ ಭಾಟಿಯ (ಅಜೇಯ 44) ನೆರವಿ ನಿಂದ ರಾಣಾ ತಂಡವನ್ನು ಸೋಲಿನಿಂದ ಪಾರುಮಾಡಿದರು. ಇಂಗ್ಲೆಂಡ್‌ ನೆಲದಲ್ಲಿ ಭಾರತ ಅಜೇಯವಾಗಿ ಉಳಿಯಿತು.

ಇದನ್ನೂ ಓದಿ : ಐಸಿಸಿ ವಿಶ್ವಕಪ್‌ ಟೆಸ್ಟ್‌ ಫೈನಲ್‌ : ಜಾಮೀಸನ್‌ ಜಬರ್ದಸ್ತ್ ದಾಳಿ; ಭಾರತ 217ಕ್ಕೆ ಆಲೌಟ್‌

8ನೇ ಕ್ರಮಾಂಕದಲ್ಲಿ ಆಡಲಿಳಿದ ಸ್ನೇಹ್‌ ರಾಣಾ 154 ಎಸೆತಗಳನ್ನು ಎದುರಿಸಿ 13 ಬೌಂಡರಿ ನೆರವಿನಿಂದ ತಮ್ಮ ಇನ್ನಿಂಗ್ಸ್‌ ಕಟ್ಟಿದರು. ಪಂದ್ಯ ವನ್ನು 12 ಓವರ್‌ಗಳಷ್ಟು ಬೇಗ ಮುಗಿಸಿ ಡ್ರಾ ಮುದ್ರೆ ಒತ್ತಿದಾಗ ಭಾರತ 8 ವಿಕೆಟಿಗೆ 344 ರನ್‌ ಗಳಿಸಿತ್ತು. ಇದು ಫಾಲೋಆನ್‌ಗೆ ತುತ್ತಾದ ತಂಡವೊಂದು ಪೇರಿಸಿದ ಎರಡನೇ ಅತ್ಯಧಿಕ ರನ್‌ ಆಗಿದೆ. ಪಂದ್ಯವನ್ನು ಇನ್ನೂ ಕೆಲವು ಓವರ್‌ ಮುಂದುವರಿಸಿದರೆ ರಾಣಾ ಶತಕ ಸಂಭ್ರಮವನ್ನು ಆಚರಿಸುವ ಎಲ್ಲ ಸಾಧ್ಯತೆ ಇತ್ತು.

ಭಾರತದ ಮೊದಲ ಸಾಧಕಿ
ಸ್ನೇಹ್‌ ರಾಣಾ ಚೊಚ್ಚಲ ಟೆಸ್ಟ್‌ ನಲ್ಲೇ 4 ವಿಕೆಟ್‌ ಉರುಳಿಸುವ ಜತೆಗೆ 4 ವಿಕೆಟ್‌ ಕಿತ್ತ ಭಾರತದ ಮೊದಲ ಹಾಗೂ ವಿಶ್ವದ 4ನೇ ಆಟಗಾರ್ತಿ ಎನಿಸಿದರು. ಏಕೈಕ ಬೌಲಿಂಗ್‌ ಅವಕಾಶದಲ್ಲಿ ಅವರು 131ಕ್ಕೆ 4 ವಿಕೆಟ್‌ ಉರುಳಿಸಿದ್ದರು.

ರಾಣಾ 6ನೇ ಹಾಗೂ ಇದಕ್ಕಿಂತ ಕೆಳ ಕ್ರಮಾಂಕದಲ್ಲಿ ಆಡಲಿಳಿದು ಅತ್ಯಧಿಕ ರನ್‌ ಹೊಡೆದ ಭಾರತೀಯ ಆಟಗಾರ್ತಿ ಎಂಬ ದಾಖಲೆಯನ್ನೂ ಸ್ಥಾಪಿಸಿದರು. ಹಿಂದಿನ ದಾಖಲೆ 72 ರನ್‌ ಆಗಿತ್ತು. ತನಿಯಾ ಭಾಟಿಯ ಜತೆಗೂಡಿ 104 ರನ್ನುಗಳ ಅಜೇಯ ಜತೆಯಾಟ ದಾಖಲಿಸಿದರು. ಇದು 9ನೇ ವಿಕೆಟಿಗೆ ಭಾರತದ ಜೋಡಿಯೊಂದು ಪೇರಿಸಿದ ಅತ್ಯಧಿಕ ರನ್‌ ಆಗಿದೆ.

ಸಂಕ್ಷಿಪ್ತ ಸ್ಕೋರ್‌: ಇಂಗ್ಲೆಂಡ್‌-9 ವಿಕೆಟಿಗೆ 396 ಡಿಕ್ಲೇರ್‌. ಭಾರತ-231 ಮತ್ತು 8 ವಿಕೆಟಿಗೆ 344 (ರಾಣಾ ಔಟಾಗದೆ 80, ಶಫಾಲಿ 63, ದೀಪ್ತಿ 54, ತನಿಯಾ ಔಟಾಗದೆ 44, ಪೂನಂ ರಾವತ್‌ 39).
ಪಂದ್ಯಶ್ರೇಷ್ಠ: ಶಫಾಲಿ ವರ್ಮ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.