ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಲಹಿರು ತಿರಿಮನ್ನೆ ವಿದಾಯ


Team Udayavani, Jul 24, 2023, 12:10 AM IST

1-ars

ಕೊಲಂಬೊ: ಶ್ರೀಲಂಕಾ ಪರ 44 ಟೆಸ್ಟ್‌, 127 ಏಕದಿನ ಹಾಗೂ 26 ಟಿ20 ಪಂದ್ಯಗಳನ್ನು ಆಡಿದ ಅಗ್ರ ಕ್ರಮಾಂಕದ ಬ್ಯಾಟರ್‌ ಲಹಿರು ತಿರಿಮನ್ನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದರು.

“ಕ್ರಿಕೆಟನ್ನು ನಾನು ಅತ್ಯಂತ ಪ್ರೀತಿಯಿಂದ ಆಡಿದ್ದೇನೆ. ಈ ಕ್ರೀಡೆಯನ್ನು ಗೌರವಿಸಿದ್ದೇನೆ. ತಾಯಿನೆಲಕ್ಕೆ ಪ್ರಾಮಾಣಿಕವಾಗಿ ಕರ್ತವ್ಯ ನಿಭಾಯಿಸಿದ್ದೇನೆ. ಆಟಗಾರನಾಗಿ ನಾನು ನನ್ನ ಅತ್ಯುತ್ತಮ ಪ್ರಯತ್ನವನ್ನೇ ಮಾಡಿದ್ದೇನೆ’ ಎಂದು ಲಹಿರು ತಿರಿಮನ್ನೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡು ವಿದಾಯ ಸಾರಿದ್ದಾರೆ.

“ಇದೊಂದು ಕಠಿನ ನಿರ್ಧಾರ. ಇದಕ್ಕೆ ಕೆಲವು ಅನಿರೀಕ್ಷಿತ ಹಾಗೂ ಅನಿವಾರ್ಯ ಕಾರಣಗಳೂ ಇದ್ದವು. ಅದನ್ನೆಲ್ಲ ಇಲ್ಲಿ ಉಲ್ಲೇಖೀಸಲಾರೆ. ಶ್ರೀಲಂಕಾ ಕ್ರಿಕೆಟ್‌ ಮಂಡಳಿ, ತರಬೇತುದಾರರು, ಸಹ ಆಟಗಾರರು, ಫಿಸಿಯೋ, ಆಡಳಿತ ಮಂಡಳಿ ನೀಡಿದ ಸಹಕಾರವನ್ನು ನಾನು ಮರೆಯುವುದಿಲ್ಲ. ಇವರೆಲ್ಲರಿಗೂ ಧನ್ಯವಾದಗಳು’ ಎಂಬುದಾಗಿ ತಿರಿಮನ್ನೆ ಹೇಳಿದ್ದಾರೆ.

ಭಾರತದೆದುರಿನ 2022ರ ಬೆಂಗ ಳೂರು ಟೆಸ್ಟ್‌ ಪಂದ್ಯವೇ ಇವರ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಿತ್ತು. ಇವರ ಅಂತಾರಾಷ್ಟ್ರೀಯ ಪದಾರ್ಪಣೆ ಕೂಡ ಭಾರತದ ವಿರುದ್ಧವೇ ಆಗಿತ್ತು. ಅದು ಮಿರ್ಪುರ್‌ನಲ್ಲಿ ನಡೆದ 2010ರ ಏಕದಿನ ಪಂದ್ಯವಾಗಿತ್ತು.

ತಿರಿಮನ್ನೆ ಸಾಧನೆ
44 ಟೆಸ್ಟ್‌ಗಳಿಂದ 2,088 ರನ್‌ (3 ಶತಕ), 127 ಏಕದಿನ ಪಂದ್ಯಗಳಿಂದ 3,194 ರನ್‌ (4 ಶತಕ) ಹಾಗೂ 26 ಟಿ20 ಪಂದ್ಯಗಳಿಂದ 291 ರನ್‌ ಬಾರಿಸಿದ್ದು ತಿರಿಮನ್ನೆ ಸಾಧನೆಯಾಗಿದೆ. ಕೆಲವು ಏಕದಿನ ಪಂದ್ಯಗಳಲ್ಲಿ ತಂಡದ ನಾಯಕತ್ವ ವಹಿಸುವ ಅವಕಾಶವೂ ಇವರಿಗೆ ಒದಗಿ ಬಂದಿತ್ತು. ಏಷ್ಯಾ ಕಪ್‌, ಟಿ20 ವಿಶ್ವಕಪ್‌ ವಿಜೇತ ಲಂಕಾ ತಂಡದ ಸದಸ್ಯನಾಗಿದ್ದುದು ಇವರ ಹೆಗ್ಗಳಿಕೆ. ಏಕದಿನದಲ್ಲಿ ಇವರ ಅತ್ಯುತ್ತಮ ಬ್ಯಾಟಿಂಗ್‌ 2015ರಲ್ಲಿ ಕಂಡುಬಂದಿತ್ತು. ಅಂದು ವಿಶ್ವಕಪ್‌ ಶತಕವೂ ಸೇರಿದಂತೆ 861 ರನ್‌ ಬಾರಿಸಿದ್ದರು.

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.