Indonesia Open pre-quarters: ಲಕ್ಷ್ಯ ಸೇನ್‌-ಶ್ರೀಕಾಂತ್‌ ಮುಖಾಮುಖಿ


Team Udayavani, Jun 15, 2023, 7:34 AM IST

Indonesia Open pre-quarters: ಲಕ್ಷ್ಯ ಸೇನ್‌-ಶ್ರೀಕಾಂತ್‌ ಮುಖಾಮುಖಿ

ಜಕಾರ್ತಾ: “ಇಂಡೋನೇಷ್ಯಾ ಓಪನ್‌ ವರ್ಲ್ಡ್ ಟೂರ್‌ ಸೂಪರ್‌-1000′ ಬ್ಯಾಡ್ಮಿಂಟನ್‌ ಪಂದ್ಯಾವಳಿ “ಆಲ್‌ ಇಂಡಿಯನ್‌’ ಹೋರಾಟವೊಂದಕ್ಕೆ ಅಣಿಯಾಗಿದೆ. ಪ್ರಿ ಕ್ವಾರ್ಟರ್‌ ಫೈನಲ್‌ನಲ್ಲಿ ಲಕ್ಷ್ಯ ಸೇನ್‌ ಮತ್ತು ಕೆ. ಶ್ರೀಕಾಂತ್‌ ಮುಖಾಮುಖಿ ಆಗಲಿದ್ದಾರೆ.

ಬುಧವಾರದ ಮೊದಲ ಸುತ್ತಿನ ಪಂದ್ಯದಲ್ಲಿ ಲಕ್ಷ್ಯ ಸೇನ್‌ ತನಗಿಂತ ಮೇಲಿನ ರ್‍ಯಾಂಕಿಂಗ್‌ ಹೊಂದಿರುವ ಮಲೇಷ್ಯಾದ ಲೀ ಜೀ ಜಿಯಾ ಅವರನ್ನು ಕೇವಲ 33 ನಿಮಿಷಗಳಲ್ಲಿ 21-13, 21-17ರಿಂದ ಮಣಿಸಿದರು. 2022ರ ಥಾಮಸ್‌ ಕಪ್‌ ಟೂರ್ನಿಯ ಬಳಿಕ ಇವರಿಬ್ಬರು ಮುಖಾಮುಖೀಯಾದ ಮೊದಲ ನಿದರ್ಶನ ಇದಾಗಿದೆ.

ಅಲ್ಲಿ ಲಕ್ಷ್ಯ ಸೇನ್‌ ಸೋಲನುಭವಿಸಿದ್ದರು. ಒಟ್ಟಾರೆಯಾಗಿ ಈ ಮಲೇಷ್ಯನ್‌ ಶಟ್ಲರ್‌ ವಿರುದ್ಧ ಲಕ್ಷ್ಯ ಸೇನ್‌ 3-1 ಮುನ್ನಡೆ ಹೊಂದಿದಂತಾಯಿತು.

ದಿನದ ಇನ್ನೊಂದು ಪಂದ್ಯದಲ್ಲಿ ಕೆ. ಶ್ರೀಕಾಂತ್‌ 21-13, 12-19ರಿಂದ ಚೀನದ ಲು ಗುವಾಂಗ್‌ ಜು ಅವರನ್ನು ಮಣಿಸಿದರು. ಇವರಿಬ್ಬರ ಹೋರಾಟ 46 ನಿಮಿಷಗಳ ತನಕ ಸಾಗಿತು.

ಅರ್ಹತಾ ಸುತ್ತಿನ ಮೂಲಕ ಬಂದ ಪ್ರಿಯಾಂಶು ರಾಜಾವತ್‌ ಅವರಿಗೆ ಮೊದಲ ಸುತ್ತಿನಲ್ಲಿ ವಾಕ್‌ ಓವರ್‌ ಲಭಿಸಿದೆ. ಥಾಯ್ಲೆಂಡ್‌ ಎದುರಾಳಿ ಕುನವುತ್‌ ವಿತಿದ್ಸಣ್‌ ಗಾಯಾಳಾಗಿ ಹಿಂದೆ ಸರಿದುದೇ ಇದಕ್ಕೆ ಕಾರಣ. ಆ್ಯಂಟನಿ ಸಿನಿಸುಕ ಗಿಂಟಿಂಗ್‌-ಹಾನ್ಸ್‌ ಕ್ರಿಸ್ಟಿಯನ್‌ ವಿಟ್ಟಿಂಗಸ್‌ ನಡುವಿನ ವಿಜೇತರನ್ನು ರಾಜಾವತ್‌ ಎದುರಿಸಲಿದ್ದಾರೆ.

ವನಿತಾ ಸಿಂಗಲ್ಸ್‌ನಲ್ಲಿ ಆಕರ್ಷಿ ಕಶ್ಯಪ್‌ ಕೊರಿಯಾದ ಅನ್‌ ಸೆ ಯಂಗ್‌ ಅವರಿಗೆ ಸಾಟಿಯಾಗಲಿಲ್ಲ. ಸತತವಾಗಿ ಥಾಯ್ಲೆಂಡ್‌ ಓಪನ್‌, ಸಿಂಗಾಪುರ್‌ ಓಪನ್‌ ಪ್ರಶಸ್ತಿ ಜಯಿಸಿ ಪ್ರಚಂಡ ಫಾರ್ಮ್ ಕಂಡುಕೊಂಡಿರುವ ಯಂಗ್‌ ವಿರುದ್ಧ ಆಕರ್ಷಿ 10-21, 4-21 ಅಂತರದ ಸೋಲುಂಡರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.