ಪ್ರಮುಖ ಪಂದ್ಯಕ್ಕೂ ಮೊದಲು ಭಾರತ ತಂಡವನ್ನು ಹಾಡಿ ಹೊಗಳಿದ ಲಂಕಾ ನಾಯಕ
Team Udayavani, Sep 6, 2022, 9:44 AM IST
ದುಬೈ: ಏಷ್ಯಾ ಕಪ್ ನ ಸೂಪರ್ ಫೋರ್ ಹಂತದ ಎರಡನೇ ಪಂದ್ಯವನ್ನು ಭಾರತ ತಂಡ ಇಂದು ಆಡುತ್ತಿದೆ. ಮಂಗಳವಾರ ಸಂಜೆ ದುಬೈ ಅಂಗಳದಲ್ಲಿ ನಡೆಯುವ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾವನ್ನು ಎದುರಿಸಲಿದೆ. ಪಾಕಿಸ್ಥಾನ ವಿರುದ್ದ ಸೋಲನುಭವಿಸಿದ ಭಾರತ ತಂಡ ಕೂಟದಲ್ಲಿ ಉಳಿಯಬೇಕಾದರೆ ಇಂದು ಲಂಕಾ ವಿರುದ್ಧ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಲಂಕಾ ನಾಯಕ ದಾಸುನ್ ಶನಕಾ ಭಾರತ ತಂಡವನ್ನು ಹಾಡಿ ಹೊಗಳಿದ್ದಾರೆ.
ಭಾರತ ತಂಡದ ಆಟಗಾರರು ಅನುಭವಿಗಳು. ಬಹಳಷ್ಟು ಐಪಿಎಲ್ ಮತ್ತು ಹಲವೆಡೆ ಟಿ20 ಪಂದ್ಯಗಳನ್ನಾಡಿದ್ದಾರೆ. ಭಾರತ ತಂಡದ ಆಟಗಾರರು ಯಾವುದೇ ತಂಡದ ವಿರುದ್ಧ ಗೆಲ್ಲುವ ಮನಸ್ಥಿತಿ ಹೊಂದಿದ್ದಾರೆ. ಆದರೂ ನಮ್ಮ ತಂಡ ರೋಹಿತ್ ಶರ್ಮಾ ಪಡೆಯನ್ನು ಎದುರಿಸಲು ಸಜ್ಜಾಗಿದೆ ಎಂದು ಶನಕಾ ಹೇಳಿದ್ದಾರೆ.
“ನಮ್ಮನ್ನು ಎದುರಿಸುವಾಗ ಭಾರತ ತಂಡ ಒತ್ತಡ ಅನುಭವಿಸುವುದಿಲ್ಲ. ಅವರು ಪಾಕಿಸ್ಥಾನ ವಿರುದ್ಧ ಉತ್ತಮ ಪಂದ್ಯವಾಡಿದರು. ಅವರು ಉತ್ತಮ ಕ್ರಿಕೆಟ್ ಆಡುತ್ತಿದ್ದಾರೆ ಹೀಗಾಗಿ ಅವರು ಯಾವುದೇ ಒತ್ತಡಕ್ಕೆ ಒಳಗಾಗುವುದಿಲ್ಲ” ಎಂದು ದಾಸುನ್ ಶನಕ ಹೇಳಿದ್ದಾರೆ.
ಇದನ್ನೂ ಓದಿ:ವೈಭವದ ಮಡಿಕೇರಿ ದಸರಾ ಆಚರಣೆಗೆ ನಿರ್ಧಾರ : 1 ಕೋ.ರೂ. ಅನುದಾನ; 18 ಲಕ್ಷ ರೂ. ಜಿಎಸ್ಟಿ!
“ಭಾರತದ ವಿರುದ್ಧ ಪಂದ್ಯವನ್ನು ನಾವು ಇತರ ಪಂದ್ಯಗಳಂತೆ ಆಡುತ್ತೇವೆ. ಧನಾತ್ಮಕ ರೀತಿಯಲ್ಲಿ ಆಡುತ್ತೇವೆ” ಎಂದು ಲಂಕಾ ನಾಯಕ ಹೇಳಿದರು.
ಸೂಪರ್ ಫೋರ್ ಹಂತದ ಮೊದಲ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ಥಾನ ವಿರುದ್ಧ ಸೋಲನುಭವಿಸಿದೆ. ಇನ್ನೊಂದೆಡೆ ಶ್ರೀಲಂಕಾ ತಂಡವು ಅಫ್ಘಾನಿಸ್ಥಾನ ತಂಡದ ವಿರುದ್ಧ ಗೆಲುವು ಸಾಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ