ನಾಯಕತ್ವ ತ್ಯಜಿಸಲು ಸಿದ್ಧ: ಲಸಿತ ಮಾಲಿಂಗ
Team Udayavani, Jan 13, 2020, 6:05 AM IST
ಕೊಲಂಬೊ: ಭಾರತ ವಿರುದ್ಧ ನಡೆದ ಟಿ20 ಸರಣಿಯಲ್ಲಿ ಹೀನಾಯ ಸೋಲನ್ನು ಕಂಡ ಹಿನ್ನೆಲೆಯಲ್ಲಿ ಶ್ರೀಲಂಕಾ ತಂಡದ ನಾಯಕತ್ವ ತ್ಯಜಿಸಲು ಸಿದ್ಧನಿದ್ದೇನೆ ಎಂದು ಲಸಿತ ಮಾಲಿಂಗ ಹೇಳಿದ್ದಾರೆ. ಭಾರತ ವಿರುದ್ಧ ನಡೆದ 3 ಪಂದ್ಯಗಳ ಸರಣಿಯನ್ನು ಶ್ರೀಲಂಕಾ 0-2 ಅಂತರದಿಂದ ಸೋತಿತ್ತು.
ಸರಣಿ ಮುಗಿಸಿ ತವರಿಗೆ ಮರಳಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಲಸಿತ ಮಾಲಿಂಗ, “ಟಿ20 ಸರಣಿಯಲ್ಲಿ ನಮ್ಮ ತಂಡ ಗಮನಾರ್ಹ ನಿರ್ವಹಣೆ ನೀಡುವಷ್ಟು ಸಮರ್ಥವಾಗಿರಲಿಲ್ಲ. ನಮ್ಮ ಬೌಲರ್ಗಳು ಎದುರಾಳಿ ಆಟಗಾರರನ್ನು ಕಟ್ಟಿಹಾಕಲು ವಿಫಲರಾದರು. ಬ್ಯಾಟ್ಸ್ಮನ್ಗಳು ಸವಾಲಿನ ಮೊತ್ತ ಪೇರಿಸಲು ಅಸಮರ್ಥರಾದರು’ ಎಂದರು.
“ನಾವು ಸಶಕ್ತ ಪಡೆಯನ್ನು ಹೊಂದಿಲ್ಲ. ವಿಶ್ವದ 9ನೇ ರ್ಯಾಂಕಿನ ತಂಡದಿಂದ ಗೆಲುವಿನ ನಿರ್ವಹಣೆಯನ್ನು ನಿರೀಕ್ಷಿಸುವುದು ಕೂಡ ಸೂಕ್ತವಲ್ಲ. ನಾನು ವರ್ಷದ ಹಿಂದಷ್ಟೇ ನಾಯಕತ್ವಕ್ಕೆ ಮರಳಿದ್ದೆ….’ ಎಂದ ಮಾಲಿಂಗ ನೈತಿಕ ಹೊಣೆ ಹೊತ್ತು ನಾಯಕತ್ವ ತ್ಯಜಿಸಲು ಸಿದ್ಧನಿದ್ದೇನೆ ಎಂದರು.
ಮಾಲಿಂಗ ಅವರ ನಾಯಕತ್ವದಲ್ಲಿ ಶ್ರೀಲಂಕಾ ತಂಡವು 2014ರಲ್ಲಿ ಟಿ20 ವಿಶ್ವಕಪ್ ಜಯಿಸಿತ್ತು. 2016ರ ಆರಂಭದ ವರೆಗೆ ಅವರು ನಾಯಕತ್ವದಲ್ಲಿ ಮುಂದುವರಿದಿದ್ದರು. ಬಳಿಕ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದರು. 2018ರ ಡಿಸೆಂಬರ್ನಲ್ಲಿ ಮತ್ತೆ ತಂಡದ ನಾಯಕತ್ವ ಹುದ್ದೆಗೆ ಮರಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್