ಕೃಷಿ ನೀರಾವರಿ ಕೆರೆಯಲ್ಲಿ ಲಿಖಿತ್ ಈಜು ಅಭ್ಯಾಸ !

ಪುತ್ತೂರಿನ ವಿಟ್ಲದಲ್ಲಿ ಸಿಕ್ಕಿಹಾಕಿಕೊಂಡ ರಾಜ್ಯದ 15 ಈಜುಪಟುಗಳು; ಎರಡು ದಿನಗಳ ಶಿಬಿರಕ್ಕೆ ಬಂದವರು ಎರಡು ತಿಂಗಳಿನಿಂದ ಲಾಕ್‌ಡೌನ್‌

Team Udayavani, Apr 18, 2020, 6:15 AM IST

ಕೃಷಿ ನೀರಾವರಿ ಕೆರೆಯಲ್ಲಿ ಲಿಖಿತ್ ಈಜು ಅಭ್ಯಾಸ !

ಬೆಂಗಳೂರು: ಒಲಿಂಪಿಕ್ಸ್‌ಗೆ ಆಯ್ಕೆಯಾಗಬಲ್ಲ ಸಾಮರ್ಥ್ಯ ಹೊಂದಿರುವ ರಾಜ್ಯದ ಖ್ಯಾತ ಈಜುಪಟು ಎಸ್‌.ಪಿ.ಲಿಖಿತ್ ಸೇರಿದಂತೆ 15 ಮಂದಿ ಈಜುಪಟುಗಳು ಲಾಕ್‌ಡೌನ್‌ನಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಮೀಪದ ವಿಟ್ಲದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ.

ಹೌದು, ಕೇವಲ ಎರಡು ದಿನಗಳ ಶಿಬಿರಕ್ಕೆ ಎಂದು ಬಂದವರು ಇದೀಗ ಎರಡು ತಿಂಗಳಿನಿಂದ ಕಾಡಿನ ಸಮೀಪ ಬಂಧಿಯಾಗಿದ್ದಾರೆ.

ಕೆರೆಯೇ ಈಜು ಕೇಂದ್ರ
ಕೋಚ್‌ ಪಾರ್ಥ ವಾರಣಾಸಿ ಲಿಖೀತ್‌ ಅವರನ್ನು ಒಲಿಂಪಿಕ್ಸ್‌ಗೆ ತಯಾರಿ ನಡೆಸುತ್ತಿದ್ದಾರೆ. ಫೆಬ್ರವರಿಯಲ್ಲಿ ಹೆಚ್ಚುವರಿ ತರಬೇತಿಗಾಗಿ ಅವರ ಹುಟ್ಟೂರಾದ ವಿಟ್ಲದ ಅಡ್ಯನಡ್ಕದಲ್ಲಿನ ತಮ್ಮ ಕೃಷಿ ಭೂಮಿಗೆ ಬೆಂಗಳೂರಿನಿಂದ 15 ಮಂದಿ ವಿವಿಧ ವಯೋಮಿತಿ ಈಜು ಪಟುಗಳ ತಂಡವನ್ನು ಕರೆದುಕೊಂಡು ಹೋಗಿದ್ದರು. ಅವರಲ್ಲಿ 21 ವರ್ಷದ ಎಸ್‌.ಪಿ.ಲಿಖೀತ್‌ ಕೂಡ ಒಬ್ಬರು.

ಎರಡು ದಿನಗಳ ತರಬೇತಿ ಬಳಿಕ ಇನ್ನೇನು ಮತ್ತೆ ಬೆಂಗಳೂರಿಗೆ ಹೊರಡಬೇಕು ಎನ್ನುವಷ್ಟರಲ್ಲಿ ಕೋವಿಡ್ 19 ಮಹಾಮಾರಿ ಸೋಂಕಿನ ಸುದ್ದಿ ಕೇಳಿ ಎಲ್ಲ ಅಲ್ಲೇ ಉಳಿದುಕೊಂಡರು. ಕೆಲ ದಿನಗಳಲ್ಲಿ ಎಲ್ಲವೂ ಸರಿಯಾಗಬಹುದೆಂದು ಹಳ್ಳಿಯಲ್ಲಿಯೇ ಖುಷಿಪಡಲು ಅವರೆಲ್ಲ ನಿಂತರು. ಆದರೆ ಕೋವಿಡ್ 19 ಸೋಂಕಿನ ಪ್ರಮಾಣ ಏರಿಕೆಯಾಗಿದ್ದರಿಂದ ಕೇಂದ್ರ ಸರಕಾರ ಲಾಕ್‌ಡೌನ್‌ ಘೋಷಿಸಿತು. ಅಲ್ಲಿಂದ ಯಾರಿಗೂ ವಾಪಸ್‌ ಬೆಂಗಳೂರಿಗೆ ಮರಳಲು ಸಾಧ್ಯವಾಗಿರಲಿಲ್ಲ. ಈ ವೇಳೆ ಕೋಚ್‌ ಪಾರ್ಥ ವಾರಣಾಸಿ ಸುಮ್ಮನೆ ಕುಳಿತಿಲ್ಲ, ತಮ್ಮ ಕೃಷಿಗೆ ನೀರುಣಿಸುವ ಕೆರೆಯನ್ನೇ ಈಜುಕೊಳವಾಗಿ ಮಾರ್ಪಡಿಸಿ ಈಜು ಪಟುಗಳ ತರಬೇತಿಗೆ ತೊಂದರೆಯಾಗದಂತೆ ನೋಡಿಕೊಂಡು ಲಾಕ್‌ಡೌನ್‌ ಸಮಯ ವ್ಯರ್ಥವಾಗದಂತೆ ನೋಡಿಕೊಂಡಿದ್ದಾರೆ.

“ಯಾವುದೇ ಆತಂಕವಿಲ್ಲ’
ಈ ಬಗ್ಗೆ ಉದಯವಾಣಿ ಜತೆ ಮಾತನಾಡಿದ ಲಿಖೀತ್‌ ಪ್ರತಿಕ್ರಿಯಿಸಿದ್ದು ಹೀಗೆ, “ನನ್ನ ಮನೆ ಇರುವುದು ಬೆಂಗಳೂರಿನ ಗಿರಿನಗರದಲ್ಲಿ, ನೆಟ್ಟಕಲ್ಲಪ್ಪ ಈಜು ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದೇನೆ, ಚಿಕ್ಕವನಾಗಿದ್ದಾಗಿನಿಂದಲೇ ನಾನು ಈಜು ತರಬೇತಿ ಆರಂಭಿಸಿರುವುದರಿಂದ ಮನೆಯಲ್ಲಿ ಇದ್ದದ್ದು ತೀರ ಅಪರೂಪ, ಹೀಗಾಗಿ ನನ್ನ ಬಗ್ಗೆ ಮನೆಯವರು ಹೆಚ್ಚಿನ ಯೋಚನೆ ಮಾಡುವುದಿಲ್ಲ, ಆದರೆ ಕೋವಿಡ್ 19 ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಆಗಿರುವುದರಿಂದ ನನ್ನ ತಂದೆ-ತಾಯಿಗೆ ಹೆಚ್ಚಿನ ಆತಂಕವಿದೆ. ದಿನಕ್ಕೆ ಒಂದು ಸಲ ಫೋನ್‌ ಮಾಡಿ ವಿಚಾರಿಸುತ್ತಾರೆ. ಇಲ್ಲಿ ಸಿಕ್ಕಿಹಾಕಿಕೊಂಡಿರುವ ಬಗ್ಗೆ ಬೇಸರವಿಲ್ಲ, ನಮ್ಮ ಕೋಚ್‌ ನಮಗೆ ಅಗತ್ಯವಿರುವ ಎಲ್ಲ ವ್ಯವಸ್ಥೆಯನ್ನು ಅವರ 100 ಎಕರೆ ಕೃಷಿ ಭೂಮಿಯಲ್ಲೇ ಮಾಡಿಕೊಟ್ಟಿದ್ದಾರೆ. ಕೋವಿಡ್ 19 ಇರುವುದರಿಂದ ಅವರು ನಮಗೆ ಹೊರಗೆಲ್ಲೂ ಹೋಗಲು ಬಿಡುವುದಿಲ್ಲ, ಏನೇ ಬೇಕಿದ್ದರೂ ಮನೆಗೆ ಅವರೇ ತಂದುಕೊಡುತ್ತಾರೆ, ನಮ್ಮನ್ನು ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ಜತೆಗೆ ಇಲ್ಲಿನ ಹಸಿರ ವಾತಾವರಣ ಮನಸ್ಸಿಗೆ ತುಂಬಾ ಹಿಡಿಸಿದೆ, ಕಾಡಿನ ಸಮೀಪ ಇರುವುದರಿಂದ ವಿವಿಧ ಬಗೆಯ ಪಕ್ಷಿ, ಚೇಳು, ನವಿಲು, ಹಾವು ಇತ್ಯಾದಿಗಳನ್ನು ನೋಡಿ ಸಂಭ್ರಮ ಪಡುತ್ತಿದ್ದೇವೆ’ ಎಂದರು.

ಲಿಖಿತ್ ಗೆ ಒಲಿಂಪಿಕ್ಸ್‌ ಅರ್ಹತೆಯ ಭರವಸೆ
ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದುಕೊಳ್ಳುವ ಭರವಸೆಯನ್ನು ಲಿಖಿತ್ ಹೊಂದಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, “ಒಲಿಂಪಿಕ್ಸ್‌ ಮುಂದಿನ ವರ್ಷಕ್ಕೆ ಮುಂದೂಡಿಕೆಯಾಗಿದೆ. ಇದರಿಂದ ನನಗೆ ಅರ್ಹತೆ ಪಡೆದುಕೊಳ್ಳಲು ಅವಕಾಶ ಸಿಕ್ಕಿದೆ. 100 ಮೀ. ಬ್ರೆಸ್ಟ್‌ ಸ್ಟ್ರೋಕ್‌ನಲ್ಲಿ 59.93 ಸೆಕೆಂಡ್ಸ್‌ ನಲ್ಲಿ ಗುರಿ ತಲುಪಿದರೆ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದುಕೊಳ್ಳಬಹುದು. ಸದ್ಯ ನನ್ನ ಟೈಮಿಂಗ್ಸ್‌ 100 ಮೀ. ಬ್ರೆಸ್ಟ್‌ಸ್ಟ್ರೋಕ್‌ನಲ್ಲಿ 1 ನಿಮಿಷ 2.02 ಸೆಕೆಂಡ್ಸ್‌ ಆಗಿದೆ. ಇನ್ನು ಸಾಕಷ್ಟು ಸುಧಾರಿಸಿಕೊಳ್ಳಬೇಕಿದೆ ಎಂದರು. ಲಿಖೀತ್‌ ಕಳೆದ ವರ್ಷ ಮಲೇಷ್ಯಾ ಈಜು ಕೂಟದಲ್ಲಿ ಪದಕ ಗೆದ್ದಿದ್ದರು ಜತೆಗೆ ಹಲವಾರು ರಾಜ್ಯ, ರಾಷ್ಟ್ರೀಯ ಕೂಟದಲ್ಲಿ ಮಿಂಚಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.