ಲೋಧಾ ಶಿಫಾರಸು ಜಾರಿ ಮಾಡದ ಬಿಸಿಸಿಐಗೆ ಸುಪ್ರೀಂ ಕೋರ್ಟ್‌ ತರಾಟೆ


Team Udayavani, Sep 22, 2017, 9:42 AM IST

22-STATE-18.jpg

ಹೊಸದಿಲ್ಲಿ: ಲೋಧಾ ಶಿಫಾರಸು ಜಾರಿಗೆ ತರಲು ಮೊಂಡು ಹಠ ಮಾಡುತ್ತಿರುವ ಬಿಸಿಸಿಐ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ) ಅನ್ನು ಸರ್ವೋತ್ಛ ನ್ಯಾಯಾಲಯ ಗುರುವಾರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.

ಮಾತ್ರವಲ್ಲ, ಬಿಸಿಸಿಐ ಆಡಳಿತಾಧಿಕಾರಿ ಗಳು ಮುಂದಿನ ಮೂರು ವಾರಗಳಲ್ಲಿ ಲೋಧಾ ಶಿಫಾರಸು ಜಾರಿಗೆ ತರುವಲ್ಲಿ ಪ್ರತಿಕ್ರಿಯೆ ನೀಡುವಲ್ಲಿ ವಿಫ‌ಲವಾದರೆ ನ್ಯಾಯಾಂಗ ನಿಂದನೆಯ ಗಂಭೀರ ಪರಿಣಾಮ ಎದುರಿಸಬೇಕಾಗಿ ಬರಬೇಕಾ ಗುತ್ತದೆ ಎಂದು ಖಡಕ್‌ ಎಚ್ಚರಿಕೆ ನೀಡಿದೆ. ಜು.18ರಂದು ನ್ಯಾಯಾಲಯ ಲೋಧಾ ಶಿಫಾರಸು ಅನ್ನುಜಾರಿಗೆ ತನ್ನಿ ಎಂದು ಬಿಸಿಸಿಐಗೆ ಸೂಚಿಸಿತ್ತು. ಆದರೆ ಇದುವರೆಗೆ ಯಾವುದೇ ಕ್ರಮವನ್ನೂ ಬಿಸಿಸಿಐ ತೆಗೆದುಕೊಂಡಿಲ್ಲ. ಇಂದು ನ್ಯಾಯಾಲಯದ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಬಿಸಿಸಿಐಗೆ ಸುಪ್ರೀಂ ತರಾಟೆ 
ಗುರುವಾರ ಸುಪ್ರೀಂ ಕೋರ್ಟ್‌ನ ತ್ರಿ ಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಬಿಸಿಸಿಐ ಹಂಗಾಮಿ ಅಧ್ಯಕ್ಷ ಸಿ.ಕೆ.ಖನ್ನಾ, ಹಂಗಾಮಿ ಕಾರ್ಯದರ್ಶಿ ಅಮಿತಾಬ್‌ ಚೌಧರಿ ಹಾಗೂ  ಖಜಾಂಚಿ ಅನಿರುದ್ಧ್ ಚೌಧರಿಯನ್ನು  ಇದೇ ವೇಳೆ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು. ನೀವು ಲೋಧಾ ಶಿಫಾರಸು ಜಾರಿಗೆ ತರುವಲ್ಲಿ ಅನಗತ್ಯ ವರ್ತನೆ ಪ್ರದರ್ಶಿಸುತ್ತಿದ್ದೀರಿ. ಇಷ್ಟು ದಿನವಾದರೂ ಲೋಧಾ ಶಿಫಾರಸು ಅನ್ನು ಬಿಸಿಸಿಐನಲ್ಲಿ ಏಕೆ ಜಾರಿಗೆ ತರಲಾಗಲಿಲ್ಲ. ನ್ಯಾಯಾಲಯ ನೀಡಿರುವ ಆದೇಶವನ್ನು ನೀವು ಜಾರಿಗೆ ತರಲೇಬೇಕು. ಇದುವರೆಗೆ ನಾವು ಆದೇಶವನ್ನು ನೀಡಿದ್ದೇವೆ ಹೊರತೂ ಬಿಸಿಸಿಐನಲ್ಲಿ ಯಾವ ಬದಲಾವಣೆಯೂ ಆಗಿಲ್ಲ. ಈ ಮೂಲಕ ಸ್ಟಾಕ್‌ ಹೋಲ್ಡರ್, ಬಿಸಿಸಿಐ ಆಡಳಿತಾಧಿಕಾರಿ ನಾವು ಕೆಲವು ವಿಷಯಗಳನ್ನು ಸ್ಪಷ್ಟಪಡಿಸಲು ಬಯಸುತ್ತೇವೆ. ನೀವು ಈ ಕುರಿತಂತೆ ನ್ಯಾಯಾಲಯಕ್ಕೆ ಶೀಘ್ರದಲ್ಲೇ ಪ್ರತಿಕ್ರಿಯೆ ನೀಡಬೇಕು. ನಿಮ್ಮ ಅಭಿಪ್ರಾಯವನ್ನು ತಿಳಿಸಲೇ ಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಗಂಭೀರ ಕ್ರಮವನ್ನು ಎದುರಿಸಿ ಎಂದು ಚಾಟಿ ಬೀಸಿದೆ.

ಶಿಫಾರಸು ಜಾರಿಗೆ ಸಜ್ಜಾಗಿದ್ದೇವೆ 
ಲೋಧಾ ಶಿಫ‌ರಸು ಜಾರಿಗೆ ಸಂಬಂಧಿಸಿ ದಂತೆ ಬಿಸಿಸಿಐ ಕರಡು ಪ್ರತಿ ಸಿದ್ಧಪಡಿಸಿದೆ. ಇನ್ನು ದೊಡ್ಡ ಕೆಲಸವೇನೂ ಉಳಿದಿಲ್ಲ. ಇದಕ್ಕೆ ಸಲಹೆಗಳು ಬರುವುದಷ್ಟೇ ಬಾಕಿ ಇದೆ ಎಂದು ಬಿಸಿಸಿಐ ಪರ ವಕೀಲರು ನ್ಯಾಯಾಲಯಕ್ಕೆ ವರದಿ ನೀಡಿದರು. 

ಇದೇ ವೇಳೆ ಪ್ರತಿಕ್ರಿಯಿಸಿದ ನ್ಯಾಯ ಪೀಠ,  ಸಂವಿಧಾನ ಜಾರಿಗೆ ತರುವ ಕಾರಣ ನೀಡಿ ಬಿಸಿಸಿಐ ಅಧಿಕಾರಿಗಳು  ಸಾಮಾನ್ಯ ಸಭೆಗೆ ಗೈರು ಹಾಜರಾಗುವಂತಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದೆ. ಅಲ್ಲದೆ ನ್ಯಾಯಾಲಯ ಇದಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆಯನ್ನು ಅ.30ಕ್ಕೆ ಮುಂದೂಡಿದೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.