ಮುಕ್ತಾಯದತ್ತ ಧೋನಿ ಅಂ.ರಾ. ಕ್ರಿಕೆಟ್?
Team Udayavani, Aug 16, 2017, 10:20 AM IST
ಮುಂಬಯಿ: ಒಂದು ಕಡೆ ಭಾರತ ಸೀಮಿತ ಓವರ್ಗಳ ತಂಡದಿಂದ ಯುವರಾಜ್ ಸಿಂಗ್ ಸ್ಥಾನ ಕಳೆದುಕೊಂಡಿದ್ದಾರೆ. ಈಗ ಮಾಜಿ ನಾಯಕ ಧೋನಿಯೂ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ.
2019ರ ಏಕದಿನ ವಿಶ್ವಕಪ್ಗೆ ಭಾರತ ತಂಡವನ್ನು ಸಿದ್ಧಪಡಿಸಲು ಹೊರಟಿರುವ ಬಿಸಿಸಿಐ ಆಯ್ಕೆ ಸಮಿತಿ ಕಠಿನ ನಿರ್ಧಾರಕ್ಕೆ ಸಜ್ಜಾಗಿದೆ, ಒಂದುವೇಳೆ ಧೋನಿ ಉತ್ತಮ ಪ್ರದರ್ಶನ ನೀಡದಿದ್ದರೆ ತಂಡದಲ್ಲಿ ಸ್ಥಾನ ಕಳೆದು ಕೊಳ್ಳಬೇಕಾದ ಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಮೂಲಗಳು ಹೇಳಿವೆ.ಇತ್ತೀಚೆಗೆ ಶ್ರೀಲಂಕಾದಲ್ಲಿನ ಸೀಮಿತ ಓವರ್ಗಳ ಸರಣಿಗೆ ಭಾರತ ತಂಡ ಆಯ್ಕೆ ಮಾಡಿದ ಅನಂತರ ಹೇಳಿಕೆ ನೀಡಿದ್ದ ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ. ಪ್ರಸಾದ್, ಧೋನಿ ಉತ್ತಮವಾಗಿ ಆಡದಿದ್ದರೆ ನಾವು ಬೇರೆ ಆಯ್ಕೆಯತ್ತ ನೋಡಬೇಕಾಗುತ್ತದೆ ಎಂದಿದ್ದರು. ಇದು ಧೋನಿ ಭವಿಷ್ಯ ಡೋಲಾಯಮಾನವಾಗಿರುವ ಸ್ಪಷ್ಟ ಸೂಚನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ