Maharaja Trophy ಕ್ರಿಕೆಟ್‌: ಹುಬ್ಬಳ್ಳಿ-ಮೈಸೂರು ಫೈನಲ್‌ ಫೈಟ್‌


Team Udayavani, Aug 28, 2023, 11:24 PM IST

1-sadasds

ಬೆಂಗಳೂರು: “ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಲೀಗ್‌’ ಪಂದ್ಯಾವಳಿಯ ಫೈನಲ್‌ನಲ್ಲಿ ಹುಬ್ಬಳ್ಳಿ ಟೈಗರ್ -ಮೈಸೂರು ವಾರಿಯರ್ ಮುಖಾಮುಖಿಯಾಗಲಿವೆ. ಮೊದಲ ಸೆಮಿಫೈನಲ್‌ನಲ್ಲಿ ಹುಬ್ಬಳ್ಳಿ 8 ವಿಕೆಟ್‌ಗಳಿಂದ ಶಿವಮೊಗ್ಗ ಲಯನ್ಸ್‌ ತಂಡವನ್ನು ಮಣಿಸಿತು. ದ್ವಿತೀಯ ಸೆಮಿಫೈನಲ್‌ನಲ್ಲಿ ಮೈಸೂರು 36 ರನ್ನುಗಳಿಂದ ಹಾಲಿ ಚಾಂಪಿಯನ್‌ ಗುಲ್ಬರ್ಗ ಮಿಸ್ಟಿಕ್ಸ್‌ಗೆ ಸೋಲುಣಿಸಿತು.

ಶಿವಮೊಗ್ಗ 7 ವಿಕೆಟಿಗೆ ಕೇವಲ 149 ರನ್‌ ಗಳಿಸಿದರೆ, ಹುಬ್ಬಳ್ಳಿ ಬರೀ 14 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 153 ರನ್‌ ಬಾರಿಸಿತು. ಆರಂಭಕಾರ ರೋಹನ್‌ ಕದಂ ಅವರ ಅರ್ಧ ಶತಕ (54) ಹೊರತುಪಡಿಸಿದರೆ ಶಿವಮೊಗ್ಗ ಸರದಿಯಲ್ಲಿ ಯಾರಿಂದಲೂ ದೊಡ್ಡ ಮೊತ್ತ ಕಂಡುಬರಲಿಲ್ಲ. ನಿಹಾಲ್‌ ಉಲ್ಲಾಳ್‌ (7), ವಿನಯ್‌ ಸಾಗರ್‌ (13), ಅಭಿನವ್‌ ಮನೋಹರ್‌ (2) ಇನ್ನಿಂಗ್ಸ್‌ ಆಧರಿಸಲು ವಿಫ‌ಲರಾದರು. ಎಚ್‌.ಎಸ್‌. ಶರತ್‌ 18, ನಾಯಕ ಶ್ರೇಯಸ್‌ ಗೋಪಾಲ್‌ ಮತ್ತು ಪ್ರಣವ್‌ ಭಾಟಿಯ ತಲಾ 16 ರನ್‌ ಹೊಡೆದರು. ಹುಬ್ಬಳ್ಳಿ ಬೌಲಿಂಗ್‌ ಸರದಿಯಲ್ಲಿ ಮಿಂಚಿದವರೆಂದರೆ ಲವಿಶ್‌ ಕೌಶಲ್‌ ಮತ್ತು ಮನ್ವಂತ್‌ ಕುಮಾರ್‌ ಎಲ್‌. ಇಬ್ಬರೂ 2 ವಿಕೆಟ್‌ ಉರುಳಿಸಿದರು.

ಚೇಸಿಂಗ್‌ ವೇಳೆ ಹುಬ್ಬಳ್ಳಿ ಲವ್‌ನೀತ್‌ ಸಿಸೋಡಿಯ (13) ಅವರನ್ನು ಬೇಗನೆ ಕಳೆದುಕೊಂಡಿತು. ಆದರೆ ದ್ವಿತೀಯ ವಿಕೆಟಿಗೆ ಜತೆಗೂಡಿದ ಮೊಹಮ್ಮದ್‌ ತಾಹಾ ಮತ್ತು ಕೃಷ್ಣನ್‌ ಶ್ರೀಜಿತ್‌ 114 ರನ್‌ ಪೇರಿಸಿದರು. ಇಬ್ಬರಿಂದಲೂ ಅರ್ಧ ಶತಕ ದಾಖಲಾಯಿತು. ಶ್ರೀಜಿತ್‌ 39 ಎಸೆತಗಳಿಂದ ಅಜೇಯ 61 ರನ್‌ ಹೊಡೆದರೆ (7 ಬೌಂಡರಿ, 2 ಸಿಕ್ಸರ್‌), ಅತ್ಯಂತ ಆಕ್ರಮಣಕಾರಿಯಾಗಿ ಆಡಿದ ತಾಹಾ 38 ಎಸೆತ ಎದುರಿಸಿ 69 ರನ್‌ ಬಾರಿಸಿದರು. ಇವರ ಬ್ಯಾಟಿಂಗ್‌ ಅಬ್ಬರದ ವೇಳೆ 8 ಸಿಕ್ಸರ್‌ ಸಿಡಿಯಿತು. ಬೌಂಡರಿ ಮಾತ್ರ ಒಂದೇ.

ನಾಯರ್‌ ಶತಕ
ಮೈಸೂರು ವಾರಿಯರ್ 2 ವಿಕೆಟಿಗೆ 248 ರನ್‌ ಪೇರಿಸಿ ಸವಾಲೊಡ್ಡಿತು. ನಾಯಕ ಕರುಣ್‌ ನಾಯರ್‌ 42 ಎಸೆತಗಳಿಂದ ಅಜೇಯ 107 ರನ್‌ ಬಾರಿಸಿದರು (7 ಫೋರ್‌, 9 ಸಿಕ್ಸರ್‌). ಆರ್‌. ಸಮರ್ಥ್ 80 ರನ್‌ ಹೊಡೆದರು. ಜವಾಬಿತ್ತ ಗುಲ್ಬರ್ಗ 8 ವಿಕೆಟಿಗೆ 212 ರನ್‌ ಮಾಡಿತು. ಫೈನಲ್‌ ಪಂದ್ಯ ಮಂಗಳವಾರ ನಡೆಯಲಿದ್ದು, ಸಂಜೆ 5.30ಕ್ಕೆ ಆರಂಭವಾಗಲಿದೆ.

ಟಾಪ್ ನ್ಯೂಸ್

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.