Maharaja Trophy: ಮಂಗಳೂರು ಡ್ರ್ಯಾಗನ್ಸ್‌  ಔಟ್‌: ಸೆಮಿಫೈನಲ್‌ ಪ್ರವೇಶಿಸಿದ ಗುಲ್ಬರ್ಗ


Team Udayavani, Aug 27, 2023, 11:32 PM IST

1-sadsd

ಬೆಂಗಳೂರು: ಹಾಲಿ ಚಾಂಪಿಯನ್‌ ಗುಲ್ಬರ್ಗ ಮಿಸ್ಟಿಕ್ಸ್‌ 3ನೇ ತಂಡವಾಗಿ “ಮಹಾರಾಜ ಟ್ರೋಫಿ’ ಕೆಎಸ್‌ಸಿಎ ಟಿ20 ಲೀಗ್‌ ಸೆಮಿಫೈನಲ್‌ ಪ್ರವೇಶಿಸಿದೆ. ರವಿವಾರದ ಮೊದಲ ಪಂದ್ಯದಲ್ಲಿ ಅದು ಮಂಗಳೂರು ಡ್ರ್ಯಾಗನ್ಸ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಉಪಾಂತ್ಯದ ಟಿಕೆಟ್‌ ಪಡೆದುಕೊಂಡಿತು.

ಹುಬ್ಬಳ್ಳಿ ಟೈಗರ್ ಮತ್ತು ಮೈಸೂರು ವಾರಿಯರ್ ಸೆಮಿಫೈನಲ್‌ ಪ್ರವೇಶಿಸಿದ ಮೊದಲೆರಡು ತಂಡಗಳಾಗಿವೆ.
ದಿನದ ದ್ವಿತೀಯ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ ತಂಡವನ್ನು 11 ರನ್ನುಗಳಿಂದ ಪರಾಭವಗೊಳಿಸಿದ ಶಿವಮೊಗ್ಗ ಲಯನ್ಸ್‌ 4ನೇ ತಂಡವಾಗಿ ಸೆಮಿಫೈನಲ್‌ ತಲುಪಿತು. ಈ ಫ‌ಲಿತಾಂಶದಿಂದ ಮಂಗಳೂರು ತಂಡ ಕೂಟದಿಂದ ನಿರ್ಗಮಿಸಿತು.

ಸೆಮಿಫೈನಲ್‌ ಪ್ರವೇಶಕ್ಕೆ ಎರಡೂ ತಂಡಗಳಿಗೆ ಗೆಲುವಿನ ಅಗತ್ಯವಿತ್ತು. ಅದೃಷ್ಟ ಗುಲ್ಬರ್ಗಕ್ಕೆ ಒಲಿಯಿತು. ಅದು ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ವಿಭಾಗಗಳೆರಡರಲ್ಲೂ ಅಮೋಘ ಪ್ರದರ್ಶನ ನೀಡಿತು. ಮಂಗಳೂರು ಡ್ರ್ಯಾಗನ್ಸ್‌ 19.1 ಓವರ್‌ಗಳಲ್ಲಿ 144ಕ್ಕೆ ಕುಸಿದರೆ, ಗುಲ್ಬರ್ಗ ಮಿಸ್ಟಿಕ್ಸ್‌ 15.3 ಓವರ್‌ಗಳಲ್ಲಿ ಎರಡೇ ವಿಕೆಟಿಗೆ 145 ರನ್‌ ಬಾರಿಸಿ ಜಯಭೇರಿ ಮೊಳಗಿಸಿತು.

ಇದು 10 ಪಂದ್ಯಗಳಲ್ಲಿ ಗುಲ್ಬರ್ಗ ಸಾಧಿಸಿದ 6ನೇ ಗೆಲುವು. ಇನ್ನೊಂದೆಡೆ ಮಂಗಳೂರು ಇಷ್ಟೇ ಪಂದ್ಯಗಳಲ್ಲಿ 6ನೇ ಸೋಲನುಭವಿಸಿತು.

ಅಭಿಲಾಷ್‌ ಶೆಟ್ಟಿ, ನಾಯಕ ವಿಜಯ್‌ಕುಮಾರ್‌ ವೈಶಾಖ್‌ ಮತ್ತು ಹಾರ್ದಿಕ್‌ ರಾಜ್‌ ಸೇರಿಕೊಂಡು ಮಂಗಳೂರು ಸರದಿಗೆ ಕಡಿವಾಣ ಹಾಕಿದರು. ಅನಿರುದ್ಧ ಜೋಶಿ ಸರ್ವಾಧಿಕ 46 ರನ್‌ ಮಾಡಿದರೆ, ಆರಂಭಕಾರ ಶರತ್‌ ಬಿ.ಆರ್‌. 38 , ತಿಪ್ಪಾ ರೆಡ್ಡಿ 27 ರನ್‌ ಹೊಡೆದರು.
ಚೇಸಿಂಗ್‌ ವೇಳೆ ಗುಲ್ಬರ್ಗ ಆರಂಭಿಕರಾದ ಎಲ್‌.ಆರ್‌. ಚೇತನ್‌-ಅನೀಶ್‌ ಕೆ.ವಿ. ಅಮೋಘ ಜತೆಯಾಟ ನಿಭಾಯಿಸಿದರು. 11.2 ಓವರ್‌ಗಳಲ್ಲಿ 114 ರನ್‌ ಪೇರಿಸಿ ಮಂಗಳೂರು ಬೌಲರ್‌ಗಳಿಗೆ ಬೆವರಿಳಿಸಿದರು. ಅನೀಶ್‌ ಅವರದು ಅಜೇಯ 72 ರನ್‌ ಕೊಡುಗೆ (42 ಎಸೆತ, 5 ಬೌಂಡರಿ, 4 ಸಿಕ್ಸರ್‌). ಚೇತನ್‌ 37 ಎಸೆತ ಎದುರಿಸಿ 58 ರನ್‌ ಮಾಡಿದರು (6 ಬೌಂಡರಿ, 3 ಸಿಕ್ಸರ್‌).

ಸಂಕ್ಷಿಪ್ತ ಸ್ಕೋರ್‌: ಮಂಗಳೂರು ಡ್ರ್ಯಾಗನ್ಸ್‌-19.1 ಓವರ್‌ಗಳಲ್ಲಿ 144 (ಅನಿರುದ್ಧ ಜೋಶಿ 46, ಶರತ್‌ ಬಿ.ಆರ್‌. 38, ತಿಪ್ಪಾ ರೆಡ್ಡಿ 27, ಅಭಿಲಾಷ್‌ ಶೆಟ್ಟಿ 33ಕ್ಕೆ 3, ವಿಜಯ್‌ಕುಮಾರ್‌ ವೈಶಾಖ್‌ 20ಕ್ಕೆ 2, ಹಾರ್ದಿಕ್‌ ರಾಜ್‌ 24ಕ್ಕೆ 2). ಗುಲ್ಬರ್ಗ ಮಿಸ್ಟಿಕ್ಸ್‌-15.3 ಓವರ್‌ಗಳಲ್ಲಿ 2 ವಿಕೆಟಿಗೆ 145 (ಅನೀಶ್‌ ಕೆ.ವಿ. ಔಟಾಗದೆ 72, ಎಲ್‌.ಆರ್‌. ಚೇತನ್‌ 58, ಕೆ. ಗೌತಮ್‌ 21ಕ್ಕೆ 2).

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.