ಮಲೇಶ್ಯ ಮಾಸ್ಟರ್ ಬ್ಯಾಡ್ಮಿಂಟನ್‌: ಮರಿನ್‌ ವಿರುದ್ಧ ಮಂಕಾದ ಸೈನಾ


Team Udayavani, Jan 20, 2019, 1:30 AM IST

saina-nehwal-ma.jpg

ಕೌಲಾಲಂಪುರ: ಭಾರತದ ತಾರಾ ಆಟಗಾರ್ತಿ ಸೈನಾ ನೆಹ್ವಾಲ್‌ “ಮಲೇಶ್ಯ ಮಾಸ್ಟರ್’ ಬ್ಯಾಡ್ಮಿಂಟನ್‌ ಕೂಟದ ಸೆಮಿಫೈನಲ್‌ನಲ್ಲಿ ಸೋಲನುಭವಿಸಿದ್ದಾರೆ. ಇದರೊಂದಿಗೆ ಈ ಪಂದ್ಯಾವಳಿಯಲ್ಲಿ ಭಾರತದ ಸವಾಲು ಅಂತ್ಯಗೊಂಡಿದೆ.

ಶನಿವಾರ ನಡೆದ ವನಿತಾ ಸಿಂಗಲ್ಸ್‌ ಸೆಮಿಫೈನಲ್‌ ಪಂದ್ಯದಲ್ಲಿ ಸೈನಾ ನೆಹ್ವಾಲ್‌ ಅವರನ್ನು ಸ್ಪೇನಿನ ಕ್ಯಾರೋಲಿನ್‌ ಮರಿನ್‌ 21-16, 21-13 ನೇರ ಗೇಮ್‌ಗಳಲ್ಲಿ ಹಿಮ್ಮೆಟ್ಟಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇರಿಸಿದರು. ಗೆದ್ದರೆ ಮರಿನ್‌ 2ನೇ ಸಲ ಇಲ್ಲಿ ಪ್ರಶಸ್ತಿ ಎತ್ತಲಿದ್ದಾರೆ.

ಸೈನಾ ತೀವ್ರ ಪೈಪೋಟಿ ನೀಡಿದ್ದು ಮೊದಲ ಗೇಮ್‌ನ ಆರಂಭದಲ್ಲಿ ಮಾತ್ರ. 5-2 ಅಂಕಗಳ ಮುನ್ನಡೆ ಸೈನಾ ಅವರದ್ದಾಗಿತ್ತು. ಇದಕ್ಕೆ ದಿಟ್ಟ ಪ್ರತ್ಯುತ್ತರ ನೀಡಿದ ಮರಿನ್‌ ಸತತ ಅಂಕಗಳನ್ನು ಸಂಪಾದಿಸಿ 11-9 ಮುನ್ನಡೆ ಸಾಧಿಸಿದರು. 14-14 ಅಂಕಗಳ ವರೆಗೆ ಸೈನಾ ಪ್ರತಿರೋಧ ಒಡ್ಡಿದರಾದರೂ ಮರಿನ್‌ ಸತತ 6 ಅಂಕಗಳನ್ನು ಗಳಿಸಿ ಮುನ್ನುಗ್ಗಿದರು. ಹೀಗೆ ಮೊದಲ ಗೇಮ್‌ ತಮ್ಮದಾಗಿಸಿಕೊಂಡರು.

2ನೇ ಗೇಮ್‌ನಲ್ಲಿ ಮರಿನ್‌ ಆರಂಭದಲ್ಲೇ ಆಕ್ರಮಣಕಾರಿ ಆಟವಾಡಿ 6-2 ಮುನ್ನಡೆ ಸಂಪಾದಿಸಿದರು. ಸೈನಾಗೆ ಅಂಕ ಗಳಿಸಲು ಹೆಚ್ಚಿನ ಅವಕಾಶವನ್ನೇ ನೀಡಲಿಲ್ಲ. ಸೈನಾ ತಪ್ಪುಗಳ ಲಾಭವೆತ್ತಿದ ಮರಿನ್‌ ಸುಲಭದಲ್ಲಿ ಅಂಕಗಳನ್ನು ಬಾಚುತ್ತ ಹೋದರು. ಸೈನಾ ಭಾರೀ ಅಂತರದಿಂದ ಸೋತರು.

ಇಂತಾನನ್‌ ಎದುರಾಳಿ
ರವಿವಾರದ ಪ್ರಶಸ್ತಿ ಕಾಳಗದಲ್ಲಿ ಕ್ಯಾರೋಲಿನಾ ಮರಿನ್‌ ಥಾಯ್ಲೆಂಡ್‌ನ‌ ರಚನೋಕ್‌ ಇಂತಾನನ್‌ ವಿರುದ್ಧ ಸೆಣಸಲಿದ್ದಾರೆ. ಇನ್ನೊಂದು ಸೆಮಿಫೈನಲ್‌ನಲ್ಲಿ ಇಂತಾನನ್‌ ಮಲೇಶ್ಯದ ಗೋ ಜಿನ್‌ ವೀ ವಿರುದ್ಧ 21-16, 21-16 ಅಂತರದ ಗೆಲುವು ಒಲಿಸಿಕೊಂಡರು.

ಪುರುಷರ ಫೈನಲ್‌
ಪುರುಷರ ಸಿಂಗಲ್ಸ್‌ ಫೈನಲ್‌ನಲ್ಲಿ ಚೀನದ ಚೆನ್‌ ಲಾಂಗ್‌ ಮತ್ತು ಕೊರಿಯಾದ ಸನ್‌ ವಾನ್‌ ಹೊ ಪರಸ್ಪರ ಸೆಣಸಲಿದ್ದಾರೆ. ಸೆಮಿಫೈನಲ್‌ನಲ್ಲಿ ಮಲೇಶ್ಯದ ಲ್ಯೂ ಡ್ಯಾರನ್‌ ವಿರುದ್ಧ ಸನ್‌ ವಾ ಹೊ “ವಾಕ್‌ ಓವರ್‌’ ಪಡೆದರು. ಇನ್ನೊಂದು ಪಂದ್ಯದಲ್ಲಿ ಚೆನ್‌ ಲಾಂಗ್‌ ಡೆನ್ಮಾರ್ಕ್‌ನ ವಿಕ್ಟರ್‌ ಅಕ್ಸೆಲ್ಸೆನ್‌ ವಿರುದ್ಧ 21-13, 21-18 ಅಂತರದ ಗೆಲುವು ಸಾಧಿಸಿದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.