ಕಿನ್ರಾರಾ ಓವಲ್‌ ಮೈದಾನ ಕ್ರಿಕೆಟ್‌ ಪಂದ್ಯಕ್ಕೆ ಲಭ್ಯವಿಲ್ಲ


Team Udayavani, May 31, 2022, 11:12 PM IST

ಕಿನ್ರಾರಾ ಓವಲ್‌ ಮೈದಾನ ಕ್ರಿಕೆಟ್‌ ಪಂದ್ಯಕ್ಕೆ ಲಭ್ಯವಿಲ್ಲ

ಹೊಸದಿಲ್ಲಿ: ಮಲೇಶ್ಯದ ಪ್ರಮುಖ ಕ್ರೀಡಾ ಅಂಗಣ ಕಿನ್ರಾರಾ ಅಕಾಡೆಮಿ ಓವಲ್‌ ಜೂನ್‌ ತಿಂಗಳಲ್ಲಿ ತನ್ನ ಕೊನೆಯ ಪಂದ್ಯದ ಆತಿಥ್ಯ ವಹಿಸಲಿದೆ. ಆಬಳಿಕ ಈ ಮೈದಾನದಲ್ಲಿ ಕ್ರಿಕೆಟ್‌ ಪಂದ್ಯಗಳು ನಡೆಯುವುದಿಲ್ಲ.

18 ವರ್ಷಗಳ ಬಳಿಕ ಮಲೇಶ್ಯ ಕ್ರಿಕೆಟ್‌ ಮತ್ತು ಭೂ ಮಾಲಕರೊಂದಿಗಿನ ಒಪ್ಪಂದವು ರದ್ದಾಗಿರುವುದು ಇದಕ್ಕೆ ಕಾರಣವಾಗಿದೆ.

ಕಳೆದ ಕೆಲವು ವರ್ಷಗಳಿಂದ ಭೂ ಮಾಲಕರು ಮತ್ತು ಮಲೇಶ್ಯ ಕ್ರಿಕೆಟ್‌ ನಡುವೆ ಸುಂಕದ ವಿಚಾರದಲ್ಲಿ ವಿವಾದ ಏರ್ಪಟ್ಟಿತ್ತು. ಆಬಳಿಕ ಈ ವಿಷಯವು ನ್ಯಾಯಾಲಯಕ್ಕೆ ಹೋಯಿತು. ವಾದ ವಿವಾದ ಆಲಿಸಿದ ನ್ಯಾಯಾಲಯವು ಈ ವರ್ಷದ ಆರಂಭದಲ್ಲಿ ಭೂ ಮಾಲಕರ ಪರವಾಗಿ ತೀರ್ಪು ನೀಡಿತ್ತು.

ಮಲೇಶ್ಯ ಕ್ರಿಕೆಟ್‌ ಜೂನ್‌ 30 ರಂದು ಕಿನ್ರಾರಾ ಮೈದಾನದಿಂದ ನಿರ್ಗಮಿಸಲಿದೆ. ಅದಕ್ಕಿಂತ ಮೊದಲು ಈ ಮೈದಾನಲ್ಲಿ ಕೆಲವು ಪ್ರಮುಖ ಪಂದ್ಯಗಳು ನಡೆಯಲಿವೆ. ಜೂನ್‌ 1ರಿಂದ 10ರ ವರೆಗೆ ವನಿತಾ ಏಷ್ಯನ್‌ ಅರ್ಹತಾ ಕೂಟ ಇಲ್ಲಿ ನಡೆಯಲಿದೆ. ಆಬಳಿಕ ವನಿತಾ ಟಿ20 ಏಷ್ಯ ಕಪ್‌ ಜೂ. 15ರಿಂದ 25ರ ವರೆಗೆ ನಡೆಯಲಿದೆ.

10 ಏಕದಿನ ಪಂದ್ಯ
ಈ ಕ್ರೀಡಾಂಗಣಕ್ಕೆ ಹೊನಲು ಬೆಳಕಿನ ವ್ಯವಸ್ಥೆ ಕಲ್ಪಿಸಲು ಭಾರತೀಯ ಕ್ರಿಕೆಟ್‌ ಮಂಡಳಿ 4.65 ಲಕ್ಷ ಅಮೆರಿಕನ್‌ ಡಾಲರ್‌ ಕೊಡುಗೆ ನೀಡಿತ್ತು. ಆಬಳಿಕ ಈ ಮೈದಾನದಲ್ಲಿ ಪುರುಷರ 10 ಏಕದಿನ, 18 ಟಿ20, ಆರು ವನಿತೆಯರ ಏಕದಿನ, 25 ಟಿ20 ಮತ್ತು 25 ಯೂತ್‌ ಏಕದಿನ ಪಂದ್ಯಗಳು ನಡೆದಿವೆ.

2006ರಲ್ಲಿ ಭಾರತ, ಆಸ್ಟ್ರೇಲಿಯ ಮತ್ತು ವೆಸ್ಟ್‌ಇಂಡೀಸ್‌ ಒಳಗೊಂಡ ತ್ರಿಕೋನ ಸರಣಿಯಲ್ಲಿ ಸಚಿನ್‌ ತೆಂಡುಲ್ಕರ್‌ ಅಜೇಯ 141 ರನ್‌ ಸಹಿತ ಒಟ್ಟಾರೆ 222 ರನ್‌ ಪೇರಿಸಿದ್ದರು. 2008ರಲ್ಲಿ ವಿರಾಟ್‌ ಕೊಹ್ಲಿ ನೇತೃತ್ವದ ಭಾರತೀಯ ಅಂಡರ್‌-19 ತಂಡ ಇದೇ ಮೈದಾನದಲ್ಲಿ ವಿಶ್ವಕಪ್‌ ಜಯಿಸಿತ್ತು.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.