‘ತೆಳಿಕೆದ ಬೊಳ್ಳಿ’ ನಾಯಕಿ ಆಶ್ರಿತಾ ಶೆಟ್ಟಿ ಕೈ ಹಿಡಿದ ಮನೀಶ್ ಪಾಂಡೆ
Team Udayavani, Dec 2, 2019, 8:43 PM IST
ಮುಂಬಯಿ: ಕನ್ನಡಿಗ ಮನೀಶ್ ಪಾಂಡೆ ಇದೀಗ ಚತುರ್ಭುಜರಾಗಿದ್ದಾರೆ. ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಈ ಬ್ಯಾಟ್ಸ್ ಮನ್ ಇಂದು ಚಿತ್ರನಟಿ ಆಶ್ರಿತಾ ಶೆಟ್ಟಿ ಅವರ ಕೈ ಹಿಡಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಆಶ್ರಿತಾ ಶೆಟ್ಟಿ ಅವರು ಅರ್ಜುನ್ ಕಾಪಿಕಾಡ್ ಅಭಿನಯದ ‘ತೆಲಿಕೆದ ಬೊಳ್ಳಿ’ ತುಳು ಚಿತ್ರದ ಮೂಲಕ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದ್ದರು.
ಸಯ್ಯದ್ ಮುಷ್ತಾಕ್ ಟ್ರೋಫಿ ಕ್ರಿಕೆಟ್ ಚಾಂಪಿಯನ್ ಶಿಪ್ ಕಿರೀಟವನ್ನು ಮನೀಷ್ ಪಾಂಡೆ ನೇತೃತ್ವದ ಕರ್ನಾಟಕ ತಂಡ ಆದಿತ್ಯವಾರವಷ್ಟೇ ಮುಡಿಗೇರಿಸಿಕೊಂಡಿತ್ತು. ಇದಾದ ಒಂದು ದಿನದ ಬಳಿಕ ಮನೀಷ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹಾಗಾಗಿ ಮನೀಷ್ ಅವರಿಗೆ ಈ ಎರಡು ದಿನಗಳು ಅವಿಸ್ಮರಣೀಯವೆನ್ನಬಹುದಾಗಿದೆ.
ಇಂಡಿಯನ್ ಪ್ರಿಮಿಯರ್ ಲೀಗ್ ಕೂಟದಲ್ಲಿ ಮನೀಷ್ ಪ್ರತಿನಿಧಿಸುತ್ತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ತನ್ನ ಅಧಿಕೃತ ಟ್ವಿಟ್ಟರ್ ಅಕೌಂಟ್ ನಲ್ಲಿ ನವದಂಪತಿಗೆ ಶುಭಾಶಯ ಕೋರಿ ಮದುಮಕ್ಕಳ ಫೊಟೋವನ್ನು ಹಾಕಿದ್ದಾರೆ.ಆಶ್ರಿತಾ ಶೆಟ್ಟಿ ಅವರು ಇದುವರೆಗೆ ಐದು ಚಿತ್ರಗಳಲ್ಲಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್