ಟೀಂ ಇಂಡಿಯಾ ಇಂಟ್ರಾ ಸ್ಕ್ವಾಡ್ ಮ್ಯಾಚ್: ಮನೀಷ್, ಸೂರ್ಯಕುಮಾರ್ ಅರ್ಧಶತಕ
Team Udayavani, Jul 6, 2021, 11:44 AM IST
ಕೊಲಂಬೋ: ಶ್ರೀಲಂಕಾ ವಿರುದ್ಧದ ಸೀಮಿತ ಓವರ್ ಗಳ ಸರಣಿಗಾಗಿ ಟೀಂ ಇಂಡಿಯಾ ತಂಡ ಸಿದ್ದತೆ ನಡೆಸುತ್ತಿದೆ. ಶಿಖರ್ ಧವನ್ ನೇತೃತ್ವದ ತಂಡ ತನ್ನ ಮೊದಲ ಇಂಟ್ರಾ ಸ್ಕ್ವಾಡ್ ಪಂದ್ಯವನ್ನು ಸೋಮವಾರ ಆಡಿದೆ.
ಭಾರತ ಬಳಗದಲ್ಲೇ ಎರಡು ತಂಡಗಳನ್ನು ರಚಿಸಿ ಪಂದ್ಯ ನಡೆಸಲಾಗಿದೆ. ಒಂದು ಪಂದ್ಯಕ್ಕೆ ಶಿಖರ್ ಧವನ್ ನೇತೃತ್ವ ವಹಿಸಿದ್ದರೆ ಮತ್ತೊಂದು ತಂಡಕ್ಕೆ ಭುವನೇಶ್ವರ್ ಕುಮಾರ್ ನಾಯಕತ್ವವಿತ್ತು.
ಧವನ್ ಬಳಗ ಮೊದಲು ಬ್ಯಾಟಿಂಗ್ ನಡೆಸಿ 20 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿದೆ. ಮನೀಷ್ ಪಾಂಡೆ 45 ಎಸೆತಗಳಲ್ಲಿ 63 ರನ್ ಗಳಿಸಿದರೆ, ಋತುರಾಜ್ ಗಾಯಕ್ವಾಡ್ 30 ರನ್ ಗಳಿಸಿದ್ದಾರೆ. ಭುವನೇಶ್ವರ್ ಕುಮಾರ್ 23 ರನ್ ನೀಡಿ ಎರಡು ವಿಕೆಟ್ ಪಡೆದರು.
ಇದನ್ನೂ ಓದಿ:ಗಿಲ್ ಬದಲಿಗೆ ಇಂಗ್ಲೆಂಡ್ ಸರಣಿಗೆ ಮತ್ತಿಬ್ಬರು ಆರಂಭಿಕರು: ಪಡಿಕ್ಕಲ್ ಹೆಸರೂ ಪಟ್ಟಿಯಲ್ಲಿ
ಗುರಿ ಬೆನ್ನತ್ತಿದ ಭುವಿ ಬಳಗ 17 ಓವರ್ ಗಳಲ್ಲಿ ವಿಜಯ ಸಾಧಿಸಿತು. ಪೃಥ್ವಿ ಶಾ ಮತ್ತು ದೇವದತ್ತ ಪಡಿಕ್ಕಲ್ ಮೊದಲ ವಿಕೆಟ್ ಗೆ 60 ರನ್ ಕಲೆ ಹಾಕಿದರೆ, ಸೂರ್ಯ ಕುಮಾರ್ ಯಾದವ್ ಅರ್ಧ ಶತಕ ಬಾರಿಸಿದರು.
ಭಾರತ ತಂಡ ಶ್ರೀಲಂಕಾ ವಿರುದ್ಧ ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳ ಸರಣಿ ಆಡಲಿದೆ. ಕೊಹ್ಲಿ ನೇತೃತ್ವದ ಪ್ರಮುಖ ತಂಡ ಇಂಗ್ಲೆಂಡ್ ನಲ್ಲಿರುವ ಕಾರಣ ಶಿಖರ್ ಧವನ್ ನೇತೃತ್ವದಲ್ಲಿ ಯುವ ಆಟಗಾರರ ತಂಡವನ್ನು ಲಂಕಾಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು