ಮತ್ತೆ ಮಾಸ್ಕ್ ಹೈಡ್ರಾಮಾ!


Team Udayavani, Dec 6, 2017, 10:21 AM IST

06-14.jpg

ಹೊಸದಿಲ್ಲಿ: ಭಾರತ ವಿರುದ್ಧದ ಟೆಸ್ಟ್‌ ಪಂದ್ಯದ ಎರಡನೇ ದಿನ ವಾಯುಮಾಲಿನ್ಯ ನೆಪವೊಡ್ಡಿ ಮಾಸ್ಕ್ ಧರಿಸಿ ಕ್ರೀಡಾಂಗಣಕ್ಕೆ ಇಳಿದಿದ್ದ ಲಂಕಾ ಆಟಗಾರರು ಸತತ ಮೂರನೇ ದಿನವೂ ಮಾಸ್ಕ್ ಧರಿಸಿಯೇ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಸೋಲಿನ ಭಯದಲ್ಲಿರುವ ಲಂಕನ್ನರ ಹೈಡ್ರಾಮಾ ಎಂದು ಮೂದಲಿಸಿದ್ದಾರೆ.

4ನೇ ದಿನದ ಆಟದ ವೇಳೆ ಲಂಕಾ ವೇಗಿ ಸುರಂಗ ಲಕ್ಮಲ್‌ ಕ್ರೀಡಾಂಗಣದಲ್ಲೇ ವಾಂತಿ ಮಾಡಿಕೊಂಡರು. ಕೂಡಲೇ ಚಂಡಿಮಾಲ್‌ ಹಾಗೂ ತಂಡದ ವೈದ್ಯಕೀಯ ಸಿಬಂದಿ ವರ್ಗ ಆಟಗಾರನ ನೆರವಿಗೆ ಧಾವಿಸಿದರು. 

ರವಿವಾರದ ಆಟದ ವೇಳೆಯೂ ಲಕ್ಮಲ್‌ ಅನಾರೋಗ್ಯಕ್ಕೆ ಈಡಾಗಿದ್ದರು. ರವಿವಾರ ಅನಾರೋಗ್ಯದ ನೆಪವೊಡ್ಡಿ ಲಹಿರು ಗಾಮಗೆ ಕೂಡ ಅಂಗಳದಿಂದ ಹೊರನಡೆದಿದ್ದರು. ಈ ವೇಳೆ ಲಂಕಾ ಆಟಗಾರರು ವಾಯುಮಾಲಿನ್ಯದ ಕಾರಣ ನೀಡಿದ್ದರು. ಅಂಪಾಯರ್‌ಗೂ ಸಂದೇಶವನ್ನು ರವಾನಿಸಿ ಮನದಟ್ಟು ಮಾಡುವ ಪ್ರಯತ್ನ ನಡೆಸಿದ್ದರು. ಇದು ವಿಫ‌ಲವಾಗಿತ್ತು. ಒಟ್ಟಾರೆ 28 ನಿಮಿಷ ಪಂದ್ಯಕ್ಕೆ ಅಡಚಣೆಯಾಗಿತ್ತು.

ಆದರೆ ಭಾರತೀಯ ಆಟಗಾರರು ಮಾಸ್ಕ್ ಧರಿಸದೇ ಪಂದ್ಯವನ್ನು ಆಡಿದರು. ಇದಕ್ಕೆ ಶ್ರೀಲಂಕಾದ ಮಾಜಿ ಆಟಗಾರ ಅರವಿಂದ ಡಿ’ಸಿಲ್ವ ಮಂಗಳವಾರ ಪ್ರತಿಕ್ರಿಯಿಸಿದ್ದು, ಭಾರತೀಯ ಆಟಗಾರರ ನಡೆಯ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ವಿಶ್ವದಲ್ಲೇ ಬಲಿಷ್ಠ ತಂಡ ಭಾರತ. ಆ ತಂಡದ ಆಟಗಾರರು ಅಪಾಯ ಮೈಮೇಲೆ ಎಳೆದುಕೊಂಡು ಆಡುತ್ತಿರುವುದು ಏಕೆ ಎಂದು ಅರ್ಥವಾಗುತ್ತಿಲ್ಲ ಎಂದಿದ್ದಾರೆ.

ವೇಗಿ ಶಮಿಗೂ ಅನಾರೋಗ್ಯ
ಭಾರತ ವೇಗಿ ಮೊಹಮ್ಮದ್‌ ಶಮಿ ಮಂಗಳವಾರದ ಆಟದ ವೇಳೆ ಅನಾರೋಗ್ಯದಿಂದ ಮೈದಾನದಿಂದ ಹೊರನಡೆದಿದ್ದರು. ಮೂಲಗಳ ಪ್ರಕಾರ ಅವರು ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬಿಸಿಸಿಐ ಇನ್ನೂ ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಆದರೆ ಸೋಮವಾರದ ಆಟದ ಬಳಿಕ ಶಮಿ ಪ್ರತಿಕ್ರಿಯಿಸಿದ್ದು, ವಾಯುಮಾಲಿನ್ಯ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ. ನಮಗೆ ಮಾಲಿನ್ಯದಿಂದ ಹೆಚ್ಚಿನ ಸಮಸ್ಯೆಯಾಗಿಲ್ಲ ಎಂದಿದ್ದರು.

ಆಯೋಜನೆಗೂ ಮುನ್ನ ಚಿಂತನೆ
ಮಾಲಿನ್ಯ ಕಾರಣದಿಂದ ಪಂದ್ಯಕ್ಕೆ ತೊಂದರೆ ಆಗಿರಬಹುದು ಎನ್ನುವುದನ್ನು ಬಿಸಿಸಿಐ ಹಂಗಾಮಿ ಕಾರ್ಯದರ್ಶಿ ಅಮಿತಾಭ್‌ ಚೌಧರಿ ಒಪ್ಪಿಕೊಂಡಿದ್ದಾರೆ. ಭವಿಷ್ಯದಲ್ಲಿ ದಿಲ್ಲಿ ಹಾಗೂ ಇಲ್ಲಿನ ಸುತ್ತಮುತ್ತ ಪಂದ್ಯ ಆಯೋಜಿಸುವಾಗ ಜಾಗರೂಕತೆ ವಹಿಸುವುದಾಗಿ ಅವರು ತಿಳಿಸಿದ್ದಾರೆ.

ವಾಯು ಮಾಲಿನ್ಯದ ಕಾರಣದ ಹೊರತಾಗಿಯೂ ಬಿಸಿಸಿಐ ಆವರ್ತನ ಪದ್ಧತಿ ಪ್ರಕಾರ 2020ರ ತನಕ ಹೊಸದಿಲ್ಲಿಗೆ ಟೆಸ್ಟ್‌ ಆತಿಥ್ಯ ಲಭಿಸದು ಎಂಬುದು ದಿನದ ಇನ್ನೊಂದು “ಬ್ರೇಕಿಂಗ್‌ ನ್ಯೂಸ್‌’.

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.