![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
IPL ಆರಂಭಕ್ಕೂ ಮುನ್ನ ಚೆನ್ನೈ ತಂಡಕ್ಕೆ ಶಾಕ್: ಈ ಸ್ಟಾರ್ ಬ್ಯಾಟರ್ ಆಡೋದು ಡೌಟ್
Team Udayavani, Mar 4, 2024, 9:43 AM IST
![IPL ಆರಂಭಕ್ಕೂ ಮುನ್ನ ಚೆನ್ನೈ ತಂಡಕ್ಕೆ ಶಾಕ್: ಈ ಸ್ಟಾರ್ ಬ್ಯಾಟರ್ ಆಡೋದು ಡೌಟ್](https://www.udayavani.com/wp-content/uploads/2024/03/2-1-620x372.jpg)
ನವದೆಹಲಿ: ಐಪಿಎಲ್ ಸೀಸನ್ -17 ಆರಂಭಕ್ಕೆ ದಿನಗಣನೆ ಬಾಕಿ ಉಳಿದಿದೆ. ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಹೊರತುಪಡಿಸಿ ಉಳಿದ ಐಪಿಎಲ್ ತಂಡದ ಬಹುತೇಕ ಆಟಗಾರರು ತಂಡದ ಕ್ಯಾಂಪ್ ಸೇರಿಕೊಂಡು ಅಭ್ಯಾಸದಲ್ಲಿ ನಿರತರಾಗಿದ್ದಾರೆ.
ಚೆನ್ನೈ ಹಾಗೂ ಆರ್ ಸಿಬಿ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ. ಟೂರ್ನಿ ಆರಂಭಕ್ಕೂ ಮುನ್ನ ಸಿಎಸ್ ಕೆ ತಂಡದ ಸ್ಟಾರ್ ಬ್ಯಾಟರ್ ಯೊಬ್ಬರು ಮೊದಲ ಹಂತದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ.
ಕಿವೀಸ್ ತಂಡದ ಸ್ಟಾರ್ ಆಟಗಾರ, ಸಿಎಸ್ ಕೆ ಆರಂಭಿಕ ಬ್ಯಾಟರ್ ಡೇವನ್ ಕಾನ್ವೆ ಈ ಬಾರಿಯ ಐಪಿಎಲ್ ಟೂರ್ನಿಯ ಮೊದಲ ಹಂತದ ಪಂದ್ಯಗಳಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗುತ್ತಿದೆ.
ಆಸ್ಟ್ರೇಲಿಯಾ ವಿರುದ್ಧದ T20I ಸರಣಿಯ ವೇಳೆ ಕಾನ್ವೆ ಅವರ ಹೆಬ್ಬೆರಳಿಗೆ ಗಾಯವಾಗಿತ್ತು. ಈ ಕಾರಣದಿಂದ ಅವರು ಉಳಿದ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಇದೀಗ ಆಸೀಸ್ ವಿರುದ್ದದ ಎರಡನೇ ಟೆಸ್ಟ್ ಪಂದ್ಯಕ್ಕೂ ಮೊದಲು ಕಾನ್ವೆ ಅವರ ಗಾಯದ ಬಗ್ಗೆ ನ್ಯೂಜಿಲೆಂಡ್ ಕ್ರಿಕೆಟ್ ಅಪ್ಡೇಡ್ ನೀಡಿದೆ.
“ಕಾನ್ವೆ ಅವರು ಆಸೀಸ್ ವಿರುದ್ಧ ಟಿ-20 ಪಂದ್ಯದಲ್ಲಿಗಾಯಗೊಂಡ ಕಾರಣ, ಅವರು ಹೆಬ್ಬೆರಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಹಲವಾರು ಸ್ಕ್ಯಾನ್ಗಳು ಮತ್ತು ತಜ್ಞರ ಸಲಹೆಯನ್ನು ಅನುಸರಿಸಿ, ಕನಿಷ್ಠ ಎಂಟು ವಾರಗಳ ಕಾಲ ಅವರ ಚೇತರಿಕೆಗೆ ಸಮಯ ಬೇಕಾಗುತ್ತದೆ” ನ್ಯೂಜಿಲೆಂಡ್ ಕ್ರಿಕೆಟ್ ಹೇಳಿದೆ.
ಕಾನ್ವೆ ಅವರ ಅಲಭ್ಯತೆ ಬಗ್ಗೆ ಇನ್ನಷ್ಟೇ ಸಿಎಸ್ ಕೆ ಅಧಿಕೃತ ಮಾಹಿತಿ ನೀಡಬೇಕಿದೆ. ಶಸ್ತ್ರ ಚಿಕಿತ್ಸೆಯ ಬಳಿಕ ಕಾನ್ವೆ ಚೇತರಿಕೆಗೆ ವಿಶ್ರಾಂತಿ ಪಡೆಯಬೇಕಾಗಿರುವುದರಿಂದ ಅವರು ಮೊದಲ ಹಂತದ ಐಪಿಎಲ್ ಪಂದ್ಯಗಳಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.