ಮ್ಯಾಕ್ಸ್‌ವೆಲ್‌, ಬರ್ನ್ಸ್ ಬದಲಿ ಕ್ರಿಕೆಟಿಗರು


Team Udayavani, Mar 29, 2018, 6:58 PM IST

000_13B8ED.jpg

ಮೆಲ್ಬರ್ನ್: ಕೇಪ್‌ಟೌನ್‌ ಟೆಸ್ಟ್‌ ಪಂದ್ಯದ ವೇಳೆ “ಬಾಲ್‌ ಟ್ಯಾಂಪರಿಂಗ್‌’ ನಡೆಸಿ ಸಿಕ್ಕಿಬಿದ್ದು ನಿಷೇಧಕ್ಕೊಳಗಾದ ಸ್ಟೀವನ್‌ ಸ್ಮಿತ್‌, ಡೇವಿಡ್‌ ವಾರ್ನರ್‌ ಮತ್ತು ಕ್ಯಾಮರೂನ್‌ ಬ್ಯಾನ್‌ಕ್ರಾಫ್ಟ್ ಬದಲಿಗೆ ಕ್ರಿಕೆಟ್‌ ಆಸ್ಟ್ರೇಲಿಯ’ ಬದಲಿ ಆಟಗಾರರನ್ನು ಹೆಸ ರಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟೆಸ್ಟ್‌ ಪಂದ್ಯಕ್ಕೆಂದು ಮ್ಯಾಟ್‌ ರೆನ್‌ಶಾ, ಗ್ಲೆನ್‌ ಮ್ಯಾಕ್ಸ್‌ ವೆಲ್‌ ಮತ್ತು ಜೋ ಬರ್ನ್ಸ್ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ದಕ್ಷಿಣ ಆಫ್ರಿಕಾ- ಆಸ್ಟ್ರೇಲಿಯ ನಡುವಿನ 4ನೇ ಹಾಗೂ ಕೊನೆಯ ಟೆಸ್ಟ್‌ ಪಂದ್ಯ ಮಾ. 30ರಿಂದ ಜೊಹಾನ್ಸ್‌ ಬರ್ಗ್‌ನಲ್ಲಿ ಆರಂಭವಾಗ ಲಿದೆ. ಸರಣಿಯಲ್ಲಿ ಆತಿ ಥೇಯ ದಕ್ಷಿಣ ಆಫ್ರಿಕಾ 2-1 ಮುನ್ನಡೆಯಲ್ಲಿದೆ.

ಆರಂಭಕಾರ ಕ್ಯಾಮ ರೂನ್‌ ಬ್ಯಾನ್‌ಕ್ರಾಫ್ಟ್ ಬದಲು ಮ್ಯಾಟ್‌ ರೆನ್‌ಶಾ ಅವರನ್ನು ಮಂಗಳವಾರವೇ ಆರಿಸಲಾಗಿತ್ತು. ಮ್ಯಾಕ್ಸ್‌ ವೆಲ್‌ ಹಾಗೂ ಬರ್ನ್ಸ್ ಅವರನ್ನು ಬುಧವಾರ ಟೆಸ್ಟ್‌ ತಂಡಕ್ಕೆ ಸೇರಿಸಿಕೊಳ್ಳಲಾಯಿತು. 

ಮ್ಯಾಟ್‌ ರೆನ್‌ಶಾ ಬ್ರಿಸ್ಬೇನ್‌ನಲ್ಲಿ “ಶೆಫೀಲ್ಡ್‌ ಶೀಲ್ಡ್‌’ ಫೈನಲ್‌ ಪಂದ್ಯವನ್ನು ಆಡಿ ಮುಗಿಸಿದ ಬೆನ್ನಲ್ಲೇ ಮಂಗಳವಾರ ರಾತ್ರಿ ಜೊಹಾನ್ಸ್‌ಬರ್ಗ್‌ಗೆ ವಿಮಾನ ವೇರಿದರು. 

ಕಾಕತಾಳೀಯವೆಂದರೆ, ಕಳಪೆ ಫಾರ್ಮ್ ನಿಂದಾಗಿ ರೆನ್‌ಶಾ ಅವರನ್ನು ಪ್ರತಿಷ್ಠಿತ ಆ್ಯಶಸ್‌ ಸರಣಿಯಿಂದ ಕೈಬಿಡಲಾಗಿತ್ತು. ಇವರ ಬದಲು ಕ್ಯಾಮರೂನ್‌ ಬ್ಯಾನ್‌ಕ್ರಾಫ್ಟ್ ಅವಕಾಶ ಪಡೆದಿದ್ದರು. ಈಗ ಬ್ಯಾನ್‌ಕ್ರಾಫ್ಟ್ ಸ್ಥಾನವನ್ನು ರೆನ್‌ಶಾ ಅವರೇ ತುಂಬಬೇಕಾದ ಸಂದರ್ಭ ಎದುರಾಗಿದೆ!

21ರ ಹರೆಯದ ಎಡಗೈ ಆರಂಭಕಾರ ರೆನ್‌ಶಾ 2017ರ ಸೆಪ್ಟಂಬರ್‌ನಲ್ಲಿ ಕೊನೆಯ ಸಲ ಆಸ್ಟ್ರೇಲಿಯ ಟೆಸ್ಟ್‌ ತಂಡದಲ್ಲಿ ಕಾಣಿಸಿಕೊಂಡಿದ್ದರು. ಅದು ಬಾಂಗ್ಲಾದೇಶ ವಿರುದ್ಧ ಚಿತ್ತಗಾಂಗ್‌ನಲ್ಲಿ ನಡೆದ ಪಂದ್ಯವಾಗಿತ್ತು. ಬಳಿಕ ದೇಶಿ ಕ್ರಿಕೆಟ್‌ನಲ್ಲಿ ವಿಕ್ಟೋರಿಯಾ ವಿರುದ್ಧ 170 ರನ್‌, ಸೌತ್‌ ಆಸ್ಟ್ರೇಲಿಯ ವಿರುದ್ಧ 112 ರನ್‌ ಹಾಗೂ ವೆಸ್ಟರ್ನ್ ಆಸ್ಟ್ರೇಲಿಯ ವಿರುದ್ಧ ಅಜೇಯ 143 ರನ್‌ ಬಾರಿಸಿ ಫಾರ್ಮ್ಗೆ ಮರಳಿದ್ದರು.

ಹೊಡಿಬಡಿ ಆಟಗಾರನಾಗಿರುವ ಗ್ಲೆನ್‌ ಮ್ಯಾಕ್ಸ್‌ ವೆಲ್‌ ಅವರಿಗೆ ಟೆಸ್ಟ್‌ ಅನುಭವ ಕಡಿಮೆ. ಈವರೆಗೆ ಆಡಿದ್ದು 7 ಟೆಸ್ಟ್‌ ಮಾತ್ರ. ಆದರೆ ಇಂಗ್ಲೆಂಡ್‌ ಮತ್ತು ನ್ಯೂಜಿಲ್ಯಾಂಡ್‌ ಎದುರಿನ ಇತ್ತೀಚಿನ ಟಿ20 ಸರಣಿಗಳಲ್ಲಿ ಅಮೋಘ ಬ್ಯಾಟಿಂಗ್‌ ಪ್ರದರ್ಶಿಸಿದ್ದರು. ಇಂಗ್ಲೆಂಡ್‌ ವಿರುದ್ಧ ಹೋಬರ್ಟ್‌ ಪಂದ್ಯದಲ್ಲಿ 58 ಎಸೆತಗಳಿಂದ 103 ರನ್‌ ಸಿಡಿಸಿದ್ದು ಮ್ಯಾಕ್ಸ್‌ವೆಲ್‌ ಅವರ ಸಾಧನೆಗಳಲ್ಲೊಂದು. 

ಗ್ಲೆನ್‌ ಮ್ಯಾಕ್ಸ್‌ವೆಲ್‌ 2017ರ ಸೆಪ್ಟಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಚಿತ್ತಗಾಂಗ್‌ನಲ್ಲಿ ಕೊನೆಯ ಟೆಸ್ಟ್‌ ಆಡಿದ್ದರು.ಜೋ ಬರ್ನ್ಸ್ ಶೆಫೀಲ್ಡ್‌ ಶೀಲ್ಡ್‌ ಟೂರ್ನಿಯ ಕೊನೆಯ 2 ಪಂದ್ಯಗಳಲ್ಲಿ ಬ್ಯಾಟಿಂಗ್‌ ಮಿಂಚು ಹರಿಸಿದ್ದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.