ರಣಜಿ ಸೆಮಿಫೈನಲ್ಗೆ ಮಾಯಾಂಕ್ ಅಗರ್ವಾಲ್
Team Udayavani, Jan 22, 2019, 12:30 AM IST
ಬೆಂಗಳೂರು: ಉದ್ಯಾನನಗರಿಯ “ಎಂ. ಚಿನ್ನಸ್ವಾಮಿ ಕ್ರೀಡಾಂಗಣ’ದಲ್ಲಿ ಜ. 24ರಿಂದ ಆರಂಭವಾಗಲಿರುವ ಸೌರಾಷ್ಟ್ರ ವಿರುದ್ಧದ ರಣಜಿ ಸೆಮಿಫೈನಲ್ ಪಂದ್ಯಕ್ಕೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ.
ರಾಜ್ಯ ತಂಡಕ್ಕೆ ಸ್ಫೋಟಕ ಬ್ಯಾಟ್ಸ್ಮನ್ ಮಾಯಾಂಕ್ ಅಗರ್ವಾಲ್ ವಾಪಸ್ ಆಗಿದ್ದಾರೆ. ಇದರಿಂದ ಸಹಜವಾಗಿಯೇ ರಾಜ್ಯ ತಂಡದಲ್ಲಿ ಸಂತಸ ಮೂಡಿದೆ. ಪವನ್ ದೇಶಪಾಂಡೆ ತಂಡದಿಂದ ಹೊರಬಿದ್ದಿದ್ದಾರೆ. ಈ ಬದಲಾವಣೆ ಹೊರತುಪಡಿಸಿದಂತೆ ರಾಜಸ್ಥಾನ ವಿರುದ್ಧ ಕ್ವಾರ್ಟರ್ ಫೈನಲ್ನಲ್ಲಿ ಆಡಿದ ಆಟಗಾರರೇ ಉಳಿದುಕೊಂಡಿದ್ದಾರೆ.
ಕರ್ನಾಟಕ ತಂಡ: ಮನೀಷ್ ಪಾಂಡೆ (ನಾಯಕ), ಶ್ರೇಯಸ್ ಗೋಪಾಲ್ (ಉಪನಾಯಕ), ಆರ್. ವಿನಯ್ ಕುಮಾರ್, ಡಿ. ನಿಶ್ಚಲ್, ಮಾಯಾಂಕ್ ಅಗರ್ವಾಲ್, ಕರುಣ್ ನಾಯರ್, ಆರ್. ಸಮರ್ಥ್, ಅಭಿಮನ್ಯು ಮಿಥುನ್, ರೋನಿತ್ ಮೋರೆ, ಕೃಷ್ಣಪ್ಪ ಗೌತಮ್, ಪ್ರಸಿದ್ಧ್ ಎಂ. ಕೃಷ್ಣ, ಕೆ.ವಿ. ಸಿದ್ಧಾರ್ಥ್, ಜಗದೀಶ್ ಸುಚಿತ್, ಬಿ.ಆರ್. ಶರತ್, ಶರತ್ ಶ್ರೀನಿವಾಸ್.