ಕಾಮನ್ವೆಲ್ತ್ ಗೇಮ್ಸ್ನಲ್ಲಿ ಪದಕ ಗೆಲ್ಲಲು ಸ್ಫೂರ್ತಿ: ಗುರುರಾಜ್
Team Udayavani, Mar 7, 2018, 7:30 AM IST
ಕುಂದಾಪುರ: ತಾಲೂಕಿನ ಚಿತ್ತೂರಿನ ವೇಟ್ಲಿಫ್ಟರ್ ಗುರುರಾಜ್ ಪೂಜಾರಿ ಅವರು ಈ ಬಾರಿಯ ಏಕಲವ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಮಾ. 7ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಸ್ವೀಕರಿಸುವರು. ವಂಡ್ಸೆ ನಿವಾಸಿ ಮಹಾಬಲ ಪೂಜಾರಿ ಮತ್ತು ಪದ್ದು ಪೂಜಾರಿ ದಂಪತಿಯ ಪುತ್ರನಾದ ಗುರುರಾಜ್ ಬಡತನದಿಂದ ಅರಳಿ ಬಂದ ಪ್ರತಿಭೆ. ಉಜಿರೆ ಎಸ್ಡಿಎಂ ಕಾಲೇಜಿನಲ್ಲಿ ಕಲಿಯುತ್ತಿದ್ದಾಗ ಅಲ್ಲಿನ ಕೋಚ್ ರಾಜೇಂದ್ರ ಪ್ರಸಾದ್ ಗರಡಿಯಲ್ಲಿ ಪಳಗಿದ ಇವರು ಅಂತಾರಾಷ್ಟ್ರೀಯ ಮಟ್ಟದ ವೇಟ್ ಲಿಫ್ಟಿಂಗ್ನಲ್ಲಿ ಅನೇಕ ಚಿನ್ನದ ಪದಕಗಳನ್ನು ಪಡೆದು ದೇಶಕ್ಕೆ ಕೀರ್ತಿ ತಂದಿದ್ದಾರೆ.
ಚಿಕ್ಕಂದಿನಿಂದಲೇ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ಅವರು ಹಂತ- ಹಂತವಾಗಿ ಕಠಿನ ಪರಿಶ್ರಮದಿಂದ ಬೆಳೆದವರು. ಸಿಕ್ಕಿದ ಅವಕಾಶಗಳನ್ನು ಬಳಸಿಕೊಂಡು ದಿಗಂತದೆಡೆಗೆ ಮುನ್ನಡೆದವರು.
ಸಾಧನೆಗಳು
2016ರಲ್ಲಿ ಮಲೇಷ್ಯಾದಲ್ಲಿ ನಡೆದ ಕಾಮನ್ವೆಲ್ತ್ ಚಾಂಪಿಯನ್ ಶಿಪ್ನಲ್ಲಿ ಚಿನ್ನದ ಪದಕ, 2017 ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಚಾಂಪಿ ಯನ್ ಶಿಪ್ನಲ್ಲಿ ಚಿನ್ನದ ಪದಕ, 2016ರಲ್ಲಿ ದಕ್ಷಿಣ ಏಷ್ಯಾ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಇವರು, ರಾಷ್ಟ್ರೀಯ ಮಟ್ಟದ ಟೂರ್ನಿಯಲ್ಲಿ 2015, 2016 ರಲ್ಲಿ ಚಿನ್ನ, 2014 ರಲ್ಲಿ ಬೆಳ್ಳಿ ಪದಕ, ಅಖೀಲ ಭಾರತೀಯ ಟೂರ್ನಿಯಲ್ಲಿ 2014 ಹಾಗೂ 15ರಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಗುರುರಾಜ್ ಅವರದು.
ತಂದೆಗೆ ಪ್ರಶಸ್ತಿ ಅರ್ಪಣೆ
ತನ್ನ ಸಾಧನೆಗೆ ಸರಕಾರದಿಂದ ಸಿಗುತ್ತಿರುವ ಮೊದಲ ಗೌರವ ವಾಗಿದ್ದು, ತುಂಬಾ ಖುಷಿಯಾಗ್ತಿದೆ. ಎಪ್ರಿಲ್- ಮೇನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಪದಕ ಗೆಲ್ಲಲು ಈ ಪ್ರಶಸ್ತಿ ಸ್ಫೂರ್ತಿಯಾಗಿದೆ. ಸದ್ಯ ಪಂಜಾಬ್ನ ಪಟಿಯಾಲದ ರಾಷ್ಟ್ರೀಯ ಕ್ರೀಡಾ ಅಕಾಡೆಮಿ ಯಲ್ಲಿ ಕಾಮನ್ವೆಲ್ತ್ ಗೇಮ್ಸ್ಗೆ ತಯಾರಿ ನಡೆಸುತ್ತಿದ್ದೇನೆ. ಈ ಪ್ರಶಸ್ತಿ ಕೋಚ್, ಗುರು ಗಳೂ, ಎಸ್ಡಿಎಂ ಶಿಕ್ಷಣ ಸಂಸ್ಥೆ, ಹೆತ್ತವರಿಗೆ ಸಂದ ಗೌರವ. ಅದರಲ್ಲೂ ರಿಕ್ಷಾದಲ್ಲಿ ದುಡಿದು ಕಷ್ಟ ಪಟ್ಟು ಓದಿಸಿದ ತಂದೆಗೆ ಈ ಪ್ರಶಸ್ತಿ ಅರ್ಪಣೆ.
ಗುರುರಾಜ್ , ಏಕಲವ್ಯ ಪ್ರಶಸ್ತಿ ವಿಜೇತ
ಪ್ರಶಾಂತ್ ಪಾದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ