IPL 2024: ಹೀಗೆ ಆದರೆ ಆರ್ ಸಿಬಿ ಐಪಿಎಲ್ ಗೆಲ್ಲಲು ಸಾಧ್ಯವಿಲ್ಲ…: ಮೈಕಲ್ ವಾನ್
Team Udayavani, Mar 30, 2024, 8:46 AM IST
ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್ ನ ತನ್ನ ಮೂರನೇ ಪಂದ್ಯವನ್ನು ಶುಕ್ರವಾರ ಆಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸೋಲನುಭವಿಸಿದೆ. ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಸುಲಭದ ತುತ್ತಾಗಿದೆ.
ಮೊದಲು ಬ್ಯಾಟಿಂಗ್ ಮಾಡಿ ಆರ್ ಸಿಬಿ ಆರು ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿದರೆ, ಕೆಕೆಆರ್ ತಂಡವು ಮೂರು ವಿಕೆಟ್ ಕಳೆದುಕೊಂಡು ಕೇವಲ 16.5 ಓವರ್ ಗಳಲ್ಲಿ 186 ರನ್ ಗಳಿಸಿತು. ಆಡಿದ ಮೂರು ಪಂದ್ಯಗಳಲ್ಲಿ ಎರಡನ್ನು ಸೋತಿರುವ ಆರ್ ಸಿಬಿ ಸದ್ಯ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
ಪಂದ್ಯದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಇಂಗ್ಲೆಂಡ್ ನ ಮಾಜಿ ನಾಯಕ ಮೈಕಲ್ ವಾನ್, ಇಂತಹ ಬೌಲಿಂಗ್ ದಾಳಿಯಿಂದ ಆರ್ ಸಿಬಿ ತಂಡವು ಐಪಿಎಲ್ ಕಪ್ ಗೆಲ್ಲಲು ಸಾಧ್ಯವಿಲ್ಲ ಎಂದಿದ್ದಾರೆ.
ಇದೇ ವೇಳೆ ಭಾರತ ತಂಡದ ಮಾಜಿ ವೇಗಿ ಇರ್ಫಾನ್ ಪಠಾಣ್ ಕೂಡಾ ಆರ್ ಸಿಬಿ ತಂಡದ ಬೌಲಿಂಗ್ ನ್ನು ಟೀಕೆ ಮಾಡಿದ್ದು, ಆರ್ ಸಿಬಿ ಬೌಲಿಂಗ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದಿದ್ದಾರೆ.
Impossible for @RCBTweets to win the IPL with this bowling attack .. #OnOn #IPL2024live
— Michael Vaughan (@MichaelVaughan) March 29, 2024
ಬೆಂಗಳೂರಿನ ಮೂವರು ಮುಂಚೂಣಿ ಬೌಲರ್ಗಳಾದ ಮೊಹಮ್ಮದ್ ಸಿರಾಜ್, ಅಲ್ಜಾರಿ ಜೋಸೆಫ್ ಮತ್ತು ಯಶ್ ದಯಾಲ್ ಅವರು 10 ರ ಎಕಾನಮಿಯಲ್ಲಿ ರನ್ ಬಿಟ್ಟುಕೊಟ್ಟರು. ಸಿರಾಜ್ 15.33 ರ ಎಕಾನಮಿಯಲ್ಲಿ ಮೂರು ಓವರ್ಗಳಲ್ಲಿ 46 ರನ್ ನೀಡಿದರು, ಜೋಸೆಫ್ 17ರ ಎಕಾನಮಿಯಲ್ಲಿ ಎರಡು ಓವರ್ಗಳಲ್ಲಿ 34 ರನ್ಗಳನ್ನು ಸೋರಿಕೆ ಮಾಡಿದರು. ದಯಾಲ್ 11.50 ಎಕಾನಮಿಯೊಂದಿಗೆ ನಾಲ್ಕು ಓವರ್ಗಳಲ್ಲಿ 45 ರನ್ಗಳನ್ನು ಬಿಟ್ಟುಕೊಟ್ಟರು.
ಆದರೆ ಇಂಪ್ಯಾಕ್ಟ್ ಸಬ್ ಆಗಿ ಬಂದ ಕನ್ನಡಿಗ ವಿಜಯ್ ಕುಮಾರ್ ವೈಶಾಖ್ ಅವರು ಮಾತ್ರ ನಾಲ್ಕು ಓವರ್ ಗಳಲ್ಲಿ ಕೇವಲ 23 ರನ್ ನೀಡಿ ಉತ್ತಮ ಪ್ರದರ್ಶನ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!