ಜಡೇಜಾ ರ‍್ಯಾಂಕಿಂಗ್ ಪ್ರದರ್ಶನ; ಮೂರೇ ದಿನದಲ್ಲಿ ಮೊಹಾಲಿ ಟೆಸ್ಟ್ ಗೆದ್ದ ಟೀಂ ಇಂಡಿಯಾ


Team Udayavani, Mar 6, 2022, 4:08 PM IST

ಜಡೇಜಾ ರಾಕಿಂಗ್ ಪ್ರದರ್ಶನ; ಮೂರೇ ದಿನದಲ್ಲಿ ಮೊಹಾಲಿ ಟೆಸ್ಟ್ ಗೆದ್ದ ಟೀಂ ಇಂಡಿಯಾ

ಮೊಹಾಲಿ: ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಮಿಂಚಿದ ರವೀಂದ್ರ ಜಡೇಜಾ ಮತ್ತು ಇತರ ಬೌಲರ್ ಗಳ ನೆರವಿನಿಂದ ಭಾರತ ತಂಡ ಪ್ರವಾಸಿ ಲಂಕಾ ವಿರುದ್ಧದ ಮೊಹಾಲಿ ಟೆಸ್ಟ್ ಪಂದ್ಯವನ್ನು ಕೇವಲ ಮೂರೇ ದಿನದಲ್ಲಿ ಗೆದ್ದುಕೊಂಡಿದೆ. ಭಾರತೀಯ ಸ್ಪಿನ್ನರ್ ಗಳ ದಾಳಿಗೆ ಕಂಗಾಲಾದ ಶ್ರೀಲಂಕಾ ಇನ್ನಿಂಗ್ಸ್ ಮತ್ತು 222 ರನ್ ಅಂತರದ ಸೋಲು ಕಂಡಿದೆ. ಇದರೊಂದಿಗೆ ಸರಣಿಯಲ್ಲಿ ಭಾರತ 1-0 ಅಂತರದ ಮುನ್ನಡೆ ಸಾಧಿಸಿದೆ.

ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 8 ವಿಕೆಟ್ ನಷ್ಟಕ್ಕೆ 574 ರನ್ ಗಳಿಸಿ ಡಿಕ್ಲೇರ್ ಮಾಡಿತ್ತು. ಲಂಕಾ ಮೊದಲ ಇನ್ನಿಂಗ್ಸ್ ನಲ್ಲಿ 174 ರನ್ ಮತ್ತು ಫಾಲೋ ಆನ್ ಪಡೆದು ಎರಡನೇ ಇನ್ನಿಂಗ್ಸ್ ನಲ್ಲಿ 178 ರನ್ ಗೆ ಆಲೌಟಾಯಿತು.

ಎರಡನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಗೆ 108 ರನ್ ಗಳಿಸಿದ್ದ ಲಂಕಾ ಇಂದು ಸತತ ವಿಕೆಟ್ ಕಳೆದುಕೊಂಡಿತು. ಪತ್ತುನ್ ನಿಸಾಂಕ ಅವರು ಅರ್ಧಶತಕವೊಂದೇ ಲಂಕಾ ಇನ್ನಿಂಗ್ಸ್ ನ ಹೈಲೈಟ್ಸ್. ಅವರು ಅಜೇಯ 61 ರನ್ ಗಳಿಸಿದರು. ಕೊನೆಯ ನಾಲ್ಕು ಬ್ಯಾಟರ್ ಗಳು ಶೂನ್ಯಕ್ಕೆ ಔಟಾದರು. ರವೀಂದ್ರ ಜಡೇಜಾ ಐದು ವಿಕೆಟ್ ಕಿತ್ತರೆ, ಬುಮ್ರಾ ಮತ್ತು ಅಶ್ವಿನ್ ತಲಾ ಎರಡು ವಿಕೆಟ್ ಕಿತ್ತರು. ಒಂದು ವಿಕೆಟ್ ಶಮಿ ಪಾಲಾಯಿತು.

ಇದನ್ನೂ ಓದಿ:ವಾರ್ನ್ ಕೋಣೆ ಮತ್ತು ಸ್ನಾನದ ಟವೆಲ್ ನಲ್ಲಿ ರಕ್ತದ ಕಲೆಗಳು ಪತ್ತೆ; ಥಾಯ್ಲೆಂಡ್ ಪೊಲೀಸರು

400 ರನ್ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಲಂಕಾ ಎರಡನೇ ಮತ್ತೆ ಸುಧಾರಣೆ ಕಾಣಲಿಲ್ಲ. ಜಡೇಜಾ ಮತ್ತು ಅಶ್ವಿನ್ ದಾಳಿಗೆ ನಲುಗಿದ ಲಂಕನ್ ಆಟಗಾರರು ಸತತ ವಿಕೆಟ್ ಒಪ್ಪಿಸಿದರು. 51 ರನ್ ಗಳಿಸಿದ ವಿಕೆಟ್ ಕೀಪರ್ ನಿರೋಶನ್ ಡಿಕವೆಲ್ಲಾ ಅವರದ್ದೇ ಗರಿಷ್ಠ ಗಳಿಕೆ. ಉಳಿದಂತ ಧನಂಜಯ ಡಿಸಿಲ್ವ 30 ರನ್, ಮ್ಯಾಥ್ಯೂಸ್ 28 ರನ್, ನಾಯಕ ಕರುಣರತ್ನೆ 27 ರನ್ ಗಳಿಸಿದರು.

ಭಾರತದ ಪರ ಜಡೇಜಾ ಮತ್ತು ರವಿ ಅಶ್ವಿನ್ ತಲಾ ನಾಲ್ಕು ವಿಕೆಟ್ ಪಡೆದರೆ, ಶಮಿ ಎರಡು ವಿಕೆಟ್ ಕಿತ್ತರು. ಎರಡನೇ ಟೆಸ್ಟ್ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ.

ಅಶ್ವಿನ್ ದಾಖಲೆ: ಲಂಕಾದ ಅಸಲಂಕಾ ವಿಕೆಟ್ ಕಿತ್ತ ವೇಳೆ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಮಾದರಿಯಲ್ಲಿ 435ನೇ ವಿಕೆಟ್ ಪಡೆದರು. ಇದರೊಂದಿಗೆ ಮಾಜಿ ನಾಯಕ ಕಪಿಲ್ ದೇವ್ ಅವರ 434 ವಿಕೆಟ್ ದಾಖಲೆಯನ್ನು ಅಶ್ವಿನ್ ಹಿಂದಿಕ್ಕಿದರು. ಈ ಮೂಲಕ ಅನಿಲ್ ಕುಂಬ್ಳೆ ಬಳಿಕ ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ವಿಕೆಟ್ ಕಿತ್ತ ಭಾರತೀಯನೆನಿಸಿದರು.

ಒಟ್ಟಾರೆ ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಅಶ್ವಿನ್ 9ನೇ ಸ್ಥಾನದಲ್ಲಿದ್ದಾರೆ. ಈ ಪಂದ್ಯಕ್ಕೂ ಮುನ್ನ ಅಶ್ವಿನ್ 12ನೇ ಸ್ಥಾನದಲ್ಲಿದ್ದರು. ರಿಚರ್ಡ್ ಹ್ಯಾಡ್ಲಿ (431), ರಂಗನಾ ಹೆರಾತ್ (432), ಮತ್ತು ಕಪಿಲ್ ದೇವ್ (434) ದಾಖಲೆ ಮುರಿದ ಅಶ್ವಿನ್ 9ನೇ ಸ್ಥಾನಕ್ಕೇರಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.