ಬೈಕ್ ಸೈಕ್ಲಿಂಗ್: ರಾಜ್ಯಕ್ಕೆ ಎರಡು ಚಿನ್ನ
Team Udayavani, Feb 21, 2020, 4:34 PM IST
Representative Image
ಬೆಳಗಾವಿ: ಭಾರತೀಯ ಸೈಕ್ಲಿಂಗ್ ಒಕ್ಕೂಟ ಹಾಗೂ ಉತ್ತರಾಖಂಡ ಸೈಕ್ಲಿಂಗ್ ಸಂಸ್ಥೆ ಜಂಟಿ ಆಶ್ರಯದಲ್ಲಿ ಉತ್ತರಾಖಂಡದ ಹಲ್ ವಾಣಿಯಲ್ಲಿ ಆರಂಭವಾದ 16ನೇ ರಾಷ್ಟ್ರೀಯ ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್ ಶಿಪ್ನಲ್ಲಿ ಕರ್ನಾಟಕದ ಸ್ಪರ್ಧಿಗಳು 2 ಚಿನ್ನ, 1 ಬೆಳ್ಳಿ ಮತ್ತು 1 ಕಂಚಿನ ಪದಕ ಗಳಿಸಿದ್ದಾರೆ.
ವಿಜಯಪುರದ ರಾಘವೇಂದ್ರ ವಂದಾಲ ಹಾಗೂ ಮೈಸೂರಿನ ಚರಿತಗೌಡ ಮೊದಲ ದಿನವೇ ಚಿನ್ನದ ಪದಕ ಬಾಚಿಕೊಂಡು ಗಮನಸೆಳೆದರು.
14 ವರ್ಷದೊಳಗಿನ ಬಾಲಕರ ವಿಭಾಗದ 2 ಲ್ಯಾಪ್ ವೈಯಕ್ತಿಕ ಟೈಮ್ ಟ್ರಯಲ್ನಲ್ಲಿ ವಿಜಯಪುರದ ಸೈಕ್ಲಿಂಗ್ ಕ್ರೀಡಾನಿಲಯದ ರಾಘವೇಂದ್ರ ವಂದಾಲ 22.54.673 ಸಮಯದಲ್ಲಿ ಗುರಿ ತಲುಪಿ ಚಿನ್ನದ ಪದಕ ಪಡೆದರು.
ಬಾಲಕಿಯರ ವಿಭಾಗದಲ್ಲಿ ಮೈಸೂರಿನ ಕರೆನ ಮಾರ್ಶಲ್ 2 ಲ್ಯಾಪ್ ವೈಯಕ್ತಿಕ ಟೈಮ್ ಟ್ರಯಲ್ನಲ್ಲಿ 31.08.824 ಸಮಯದಲ್ಲಿ ಗುರಿ ತಲುಪಿ ಬೆಳ್ಳಿ ಪದಕಕ್ಕೆ ಭಾಜನರಾದರು. 16 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಮೈಸೂರಿನ ಚರಿತಗೌಡ 3 ಲ್ಯಾಪ್ ವೈಯಕ್ತಿಕ ಟೈಮ್ ಟ್ರಯಲ್ನಲ್ಲಿ 35.55.598 ಸಮಯದಲ್ಲಿ ಗುರಿ ತಲುಪಿ ಚಿನ್ನ ಗೆದ್ದರು. ಮಹಿಳೆಯರ ವಿಭಾಗದಲ್ಲಿ ಬೆಂಗಳೂರಿನ ಜೋಸ್ನಾ ಕಂಚಿನ ಪದಕ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ