ದಕ್ಷಿಣ ಆಫ್ರಿಕಾ ಟಿ20 ಸರಣಿ: ಎಂ.ಎಸ್.ಧೋನಿ ಆಯ್ಕೆ ಅನುಮಾನ
2020ರ ಟಿ20 ವಿಶ್ವಕಪ್ ಕೂಟಕ್ಕೆ ತಂಡ ಕಟ್ಟುವ ಯೋಜನೆ
Team Udayavani, Aug 29, 2019, 5:18 AM IST
ಹೊಸದಿಲ್ಲಿ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗಾಗಿ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಅವರನ್ನು ಆಯ್ಕೆ ಮಾಡುವುದು ಅನುಮಾನ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ. ಮುಂದಿನ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಗಮನದಲ್ಲಿರಿಸಿ ಯುವ ಪಡೆಯೊಂದನ್ನು ಸಜ್ಜುಗೊಳಿಸುವುದು ಭಾರತದ ಯೋಜನೆಯಾಗಿರುವುದೇ ಇದಕ್ಕೆ ಕಾರಣ.
“ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾ ವಳಿಗೂ ಮುನ್ನ ಭಾರತ ಕೇವಲ 22 ಪಂದ್ಯಗಳನ್ನು ಆಡಲಿದೆ. ಇದಕ್ಕಾಗಿ ಯುವ ಹಾಗೂ ಪ್ರತಿಭಾನ್ವಿತ ಆಟಗಾರರ ತಂಡವನ್ನು ಕಟ್ಟಬೇಕಿದೆ. ಆಯ್ಕೆ ಮಂಡಳಿ ಈ ನಿಟ್ಟಿನಲ್ಲಿ ಮುಂದಡಿ ಇಡಲಿದೆ. ಸಂಭಾವ್ಯ ತಂಡದಲ್ಲಿ, ಮುಖ್ಯವಾಗಿ ಟಿ20ಯಲ್ಲಿ 3 ಮಂದಿ ಕೀಪರ್ಗಳನ್ನು ಸಜ್ಜಾಗಿರಿಸುವುದು ಆಯ್ಕೆ ಮಂಡಳಿಯ ಯೋಜನೆ’ ಎಂಬುದಾಗಿ ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ಹೇಳಿದರು.
ರಿಷಭ್ ಪಂತ್ ಜತೆಗೆ ಸಂಜು ಸ್ಯಾಮ್ಸನ್ ಮತ್ತು “ಎ’ ತಂಡದ ಖಾಯಂ ಸದಸ್ಯ ಇಶಾನ್ ಕಿಶನ್ ಅವರನ್ನು 2ನೇ ಹಾಗೂ 3ನೇ ಕೀಪಿಂಗ್ ಸ್ಥಾನಕ್ಕೆ ಸಜ್ಜುಗೊಳಿಸುವ ಸಾಧ್ಯತೆ ಇದೆ.
ಭಾರತ-ದ.ಆಫ್ರಿಕಾ ನಡುವೆ 3 ಟಿ20 ಪಂದ್ಯಗಳನ್ನು ಆಡಲಾ ಗುವುದು. ಸೆ. 15ರಂದು ಧರ್ಮ ಶಾಲಾದಲ್ಲಿ ಮೊದಲ ಮುಖಾಮುಖೀ ನಡೆಯಲಿದೆ. ಉಳಿದೆರಡು ಪಂದ್ಯಗಳು ಮೊಹಾಲಿ (ಸೆ. 18) ಮತ್ತು ಬೆಂಗಳೂರಿನಲ್ಲಿ (ಸೆ. 22) ನಡೆಯಲಿವೆ. ಸೆ. 4ರಂದು ಭಾರತ ತಂಡವನ್ನು ಆರಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ