ಧೋನಿಗೆ ಪದ್ಮಭೂಷಣ; ಬಿಸಿಸಿಐ ಶಿಫಾರಸು


Team Udayavani, Sep 21, 2017, 10:40 AM IST

21STATE-29.jpg

ಹೊಸದಿಲ್ಲಿ: ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣಕ್ಕೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಮಹೇಂದ್ರ ಸಿಂಗ್‌ ಧೋನಿ ಅವರ ಹೆಸರನ್ನು ಶಿಫಾರಸು ಮಾಡಿದೆ. 

ಕ್ರಿಕೆಟ್‌ಗೆ ನೀಡಿದ ಮಹಾನ್‌ ಕೊಡುಗೆಗಾಗಿ ಭಾರತ ತಂಡದ ಅತ್ಯಂತ ಯಶಸ್ವಿ ನಾಯಕ ಧೋನಿ ಅವರ ಹೆಸರನ್ನು ಈ ವರ್ಷದ ಪದ್ಮಭೂಷಣ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ. ಈ ಗೌರವಕ್ಕೆ ಧೋನಿ ಅವರ ಆಯ್ಕೆ ನಿರ್ಧಾರ ಅವಿ ರೋಧವಾಗಿತ್ತು ಮತ್ತು ಅವರೊಬ್ಬರನ್ನೇ ಪದ್ಮಪ್ರಶಸ್ತಿಗೆ ಹೆಸರಿಸಲಾಗಿದೆ ಎಂದು ಬಿಸಿಸಿಐಯ ಹಿರಿಯ ಅಧಿ ಕಾರಿಯೊಬ್ಬರು ದೃಢಪಡಿಸಿದ್ದಾರೆ.

ಧೋನಿ ಅವರ ಸಾಧನೆ ಅಸಾಮಾನ್ಯವಾದುದ್ದು. ಅವರು ಎರಡು ವಿಶ್ವಕಪ್‌ (2011ರಲ್ಲಿ 50 ಓವರ್‌ಗಳ ವಿಶ್ವಕಪ್‌  ಮತ್ತು 2007ರಲ್ಲಿ ಟ್ವೆಂಟಿ20 ವಿಶ್ವಕಪ್‌) ಗೆದ್ದ ಭಾರತದ ಏಕೈಕ ನಾಯಕರಾಗಿದ್ದಾರೆ. ಹಾಗಾಗಿ ಅವರನ್ನು ಈ ಪ್ರತಿಷ್ಠಿತ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ ಎಂಧು ಪ್ರಭಾರ ಅಧ್ಯಕ್ಷ ಸಿ.ಕೆ. ಖನ್ನಾ ಹೇಳಿದ್ದಾರೆ. 

ಅವರೊಬ್ಬ ಏಕದಿನ ಕ್ರಿಕೆಟ್‌ನ ಸರ್ವಶ್ರೇಷ್ಠ ಕ್ರಿಕೆಟಿಗ. ಅವರು ಹತ್ತಿರ ಹತ್ತಿರ 10 ಸಾವಿರ ರನ್‌ ಪೇರಿಸಿದ ಆಟಗಾರರಾಗಿದ್ದಾರೆ. ಹೆಚ್ಚಿನ ಆಟಗಾರರು 90 ಟೆಸ್ಟ್‌ ಪಂದ್ಯಗಳನ್ನು ಆಡಿರಲಿಕ್ಕಿಲ್ಲ. ಪ್ರತಿಷ್ಠಿತ ಪ್ರಶಸ್ತಿಗೆ ಧೋನಿ ಅವರಿಗಿಂತ ಒಳ್ಳೆಯ ಕ್ರಿಕೆಟಿಗ ಸದ್ಯ ಇರಲಿಕ್ಕಿಲ್ಲ ಎಂದು ಖನ್ನಾ ತಿಳಿಸಿದರು. ಈ ವರ್ಷದ ಪದ್ಮ ಪ್ರಶಸ್ತಿಗೆ ಬಿಸಿಸಿಐ ಧೋನಿ ಹೊರತುಪಡಿಸಿ ಉಳಿದ ಯಾವುದೇ ಕ್ರಿಕೆಟಿಗರ ಹೆಸರನ್ನು ಶಿಫಾರಸು ಮಾಡಿಲ್ಲ.

36ರ ಹರೆಯದ ಧೋನಿ 302 ಏಕದಿನ ಪಂದ್ಯಗಳನ್ನಾಡಿದ್ದು 9737  ರನ್‌ ಬಾರಿಸಿದ್ದಾರೆ. 90 ಟೆಸ್ಟ್‌ ಆಡಿರುವ ಅವರು 4876 ರನ್‌ ಬಾರಿಸಿದ್ದಾರಲ್ಲದೇ 78 ಟ್ವೆಂಟಿ20 ಪಂದ್ಯಗಳನ್ನಾಡಿ 1212 ರನ್‌ ಹೊಡೆದಿದ್ದಾರೆ. ಟೆಸ್ಟ್‌ ಮತ್ತು ಏಕದಿನ ಪಂದ್ಯಗಳಲ್ಲಿ ಒಟ್ಟಾರೆ 16  ಶತಕ ಬಾರಿಸಿರುವ (ಟೆಸ್ಟ್‌ -6 ಮತ್ತು 11ಏಕದಿನ 10) ಧೋನಿ 100 ಅರ್ಧಶತಕ ಹೊಡೆದಿದ್ದಾರೆ. ವಿಕೆಟ್‌ಕೀಪರ್‌ ಆಗಿ ಧೋನಿ ಎಲ್ಲ ಮೂರು ಮಾದರಿಯ ಕ್ರಿಕೆಟ್‌ಗಳಲ್ಲಿ 584 ಕ್ಯಾಚ್‌ ಪಡೆದಿದ್ದಾರೆ. 163 ಸ್ಟಂಪಿಂಗ್‌ ಮಾಡಿದ್ದಾರೆ.

ಧೋನಿ ಈ ಹಿಂದೆ ಪ್ರತಿಷ್ಠಿತ ರಾಜೀವ್‌ ಗಾಂಧಿ ಖೇಲ್‌ ರತ್ನ ಮತ್ತು ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ. ಒಂದು ವೇಳೆ ಪದ್ಮಭೂಷಣ್‌ ಗೌರವಕ್ಕೆ ಪಾತ್ರರಾದರೆ ಈ ಗೌರವ ಸ್ವೀಕರಿಸಿದ ಭಾರತದ 11ನೇ ಕ್ರಿಕೆಟಿಗರಾಗಲಿದ್ದಾರೆ. ಸಚಿನ್‌ ತೆಂಡುಲ್ಕರ್‌, ಕಪಿಲ್‌ ದೇವ್‌, ಸುನೀಲ್‌ ಗಾವಸ್ಕರ್‌, ರಾಹುಲ್‌ ದ್ರಾವಿಡ್‌, ಚಂದು ಬೋರ್ಡೆ, ಪ್ರೊ| ಡಿಬಿ ದೇವಧರ್‌, ಕರ್ನಲ್‌ ಸಿಕೆ ನಾಯ್ಡು ಮತ್ತು ಲಾಲಾ ಅಮರ್‌ನಾಥ್‌ ಈ ಹಿಂದೆ ಪದ್ಮಭೂಷಣ್‌ ಪ್ರಶಸ್ತಿ  ಸ್ವೀಕರಿಸಿದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.