ಅಸೂಯೆಯಿಂದ ಧೋನಿಯನ್ನು ಟೀಕಿಸುತ್ತಿದ್ದಾರೆ: ರವಿಶಾಸ್ತ್ರಿ ವ್ಯಂಗ್ಯ


Team Udayavani, Nov 11, 2017, 7:00 AM IST

Ravishastri,-Mahendra-Singh.jpg

ಕೋಲ್ಕತಾ: ಇತ್ತೀಚೆಗೆ ನ್ಯೂಜಿಲೆಂಡ್‌ ವಿರುದ್ಧ ಟಿ20ಯಲ್ಲಿ ಧೋನಿ ವಿಫ‌ಲರಾಗಿರುವುದು ಎಲ್ಲರಿಗೂ ಗೊತ್ತೇ ಇದೆ. ಇದರ ಬೆನ್ನಲ್ಲೇ ಧೋನಿಯನ್ನು ಸಮರ್ಥಿಸಿಕೊಂಡು ನಾಯಕ ಕೊಹ್ಲಿ ಮಾತನಾಡಿದ್ದರು. ಆದರೆ ಟಿ20 ಮಾದರಿಯಿಂದ ಧೋನಿಯನ್ನು ಕೈಬಿಡಬೇಕೆಂಬ ಆಗ್ರಹ ಜೋರಾಗಿದೆ. ಇದಕ್ಕೆ ಅಷ್ಟೇ ಕಟು ಪ್ರತ್ಯುತ್ತರ ನೀಡಿರುವ ಭಾರತ ತಂಡದ ಕೋಚ್‌ ರವಿಶಾಸ್ತ್ರಿ, ಧೋನಿ ಟೀಕಾಕಾರರು ಅಸೂಯಾಪೀಡಿತರು ಎಂದು ವ್ಯಂಗ್ಯವಾಡಿದ್ದಾರೆ.

ಕೆಲವರು ಧೋನಿ ಕೆಟ್ಟ ಆಟವಾಡಲಿ ಎಂದು ಬಯಸುತ್ತಿದ್ದಾರೆ. ಅವರು ಧೋನಿಯ ವೃತ್ತಿ ಜೀವನವನ್ನು ಅಂತ್ಯಗೊಳಿಸಲು ಬಯಸುತ್ತಿದ್ದಾರೆ. ಆದರೆ ಧೋನಿಯಂತಹ ದಿಗ್ಗಜರು ತಮ್ಮ ಅಂತ್ಯವನ್ನು ತಾವೇ ನಿರ್ಧರಿಸುತ್ತಾರೆ ಎಂದು ರವಿಶಾಸ್ತ್ರಿ ಹೇಳಿದ್ದಾರೆ.

ಧೋನಿ ವಿರುದ್ಧ ಯಾರು ಏನೇ ಹೇಳಲಿ ಅದು ನಮ್ಮಲ್ಲಿ ಯಾವುದೇ ವ್ಯತ್ಯಾಸ ಮಾಡುವುದಿಲ್ಲ. ಧೋನಿ ಸ್ಥಾನವೇನು ಎನ್ನುವುದು ನಮಗೆ ಗೊತ್ತಿದೆ. ಅವರು ತಂಡಕ್ಕೋಸ್ಕರ ಆಡುವ ವ್ಯಕ್ತಿ. ಹಿಂದೆ ಶ್ರೇಷ್ಠ ನಾಯಕರಾಗಿದ್ದರು. ಈಗ ತಂಡಕ್ಕೋಸ್ಕರ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ ಎಂದು ರವಿಶಾಸ್ತ್ರಿ ಮಾಜಿ ನಾಯಕನ ಬೆನ್ನಿಗೆ ಬಲವಾಗಿ ನಿಂತಿದ್ದಾರೆ.

ಕೆಲವೇ ಸಮಯದ ಹಿಂದೆ ನಾನೂ ಟಿವಿಯಲ್ಲಿ ಕಾಣಿಸಿಕೊಳ್ಳುತ್ತಿದ್ದೆ. ಜನ ನನಗೆ ಪ್ರಶ್ನೆ ಕೇಳುತ್ತಿದ್ದರು. ಟೀವಿ ಕಾರ್ಯಕ್ರಮ ನಡೆಯಲು ಪ್ರಶ್ನೆಗಳಿಗೆ ಉತ್ತರಿಸಲೇಬೇಕು. ಧೋನಿ ಅಸಾಮಾನ್ಯ ಆಟಗಾರ. ನಮ್ಮ ಅತ್ಯದ್ಭುತ ಆಟಗಾರರಲ್ಲಿ ಒಬ್ಬರು. ಆದ್ದರಿಂದ ಅವರು ಯಾವಾಗಲೂ ಟೀವಿ ಕಾರ್ಯಕ್ರಮಗಳಲ್ಲಿ ಮುಖ್ಯ ಚರ್ಚಾ ವಿಷಯವಾಗಿರುತ್ತಾರೆ. ಅವರು ದಂತಕಥೆ ಎಂಬ ಕಾರಣಕ್ಕೆ ಅಂತಹ ಪ್ರಾಮುಖ್ಯತೆ ಬಂದಿದೆ. ಅವರ ಎತ್ತರಕ್ಕೆ ನೀವೂ ಏರಿದಾಗ ನಿಮಗೂ ಟಿವಿಯಲ್ಲಿ ಅಂತಹದ್ದೇ ಮಹತ್ವ ದೊರೆಯುತ್ತದೆ ಎಂದು ರವಿಶಾಸ್ತ್ರಿ ಧ್ವನಿಪೂರ್ಣವಾಗಿ ಹೇಳಿದ್ದಾರೆ.

ಇತ್ತೀಚೆಗೆ ಧೋನಿ ಟಿ20ಯಲ್ಲಿ ಬಹಳ ನಿಧಾನವಾಗಿ ಆಡಿದ್ದನ್ನು ಪ್ರಸ್ತಾಪಿಸಿರುವ ವಿವಿಎಸ್‌ ಲಕ್ಷ್ಮಣ್‌, ಅಜಿತ್‌ ಅಗರ್ಕರ್‌, ಆಕಾಶ್‌ ಚೋಪ್ರಾ ಟಿ20ಯಿಂದ ಅವರನ್ನು ಕೈಬಿಡುವುದು ಸರಿ ಎಂದಿದ್ದರು. ಇದಕ್ಕೆ ಸೈಯದ್‌ ಕೀರ್ಮಾನಿ, ಪ್ರಗ್ಯಾನ್‌ ಓಜಾ, ನಮನ್‌ ಓಜಾ ಸೇರಿ ಹಲವರು ಪ್ರತಿರೋಧ ವ್ಯಕ್ತಪಡಿಸಿದ್ದಾರೆ.

ಧೋನಿ ವಿರುದ್ಧ ಸ್ವರವೆದ್ದಾಗೆಲ್ಲ ರವಿಶಾಸ್ತ್ರಿ ಬಲವಾಗಿ ಧ್ವನಿ ಎತ್ತಿರುವುದನ್ನು ನಾವು ನೆನಪಿಸಿಕೊಳ್ಳಬಹುದು. ಈ ಹಿಂದೆ ಧೋನಿಯನ್ನು ಕೈಬಿಡುವ ಬಗ್ಗೆ ಚರ್ಚೆ ನಡೆದಾಗ 2019ರ ವಿಶ್ವಕಪ್‌ವರೆಗೆ ಧೋನಿ ತಂಡದಲ್ಲಿರುತ್ತಾರೆ ಎಂದು ಸ್ಪಷ್ಟವಾಗಿ ಹೇಳಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.