ಪೂರ್ಣಾವಧಿ ಕೋಚ್ ಆಗುವತ್ತ ಧೋನಿ ಹೆಜ್ಜೆ
ಜು.2ರಿಂದ ಧೋನಿ ಆನ್ಲೈನ್ ಕ್ರಿಕೆಟ್ ಅಕಾಡೆಮಿ ಪ್ರಾರಂಭ ; ಹಠಾತ್ ನಿವೃತ್ತಿ ಘೋಷಿಸಿದರೂ ಅಚ್ಚರಿ ಇಲ್ಲ!
Team Udayavani, Jun 29, 2020, 10:29 AM IST
ರಾಂಚಿ: ಭಾರತವನ್ನು ಎರಡು ವಿಶ್ವಕಪ್ ಕ್ರಿಕೆಟ್ ಕೂಟದಲ್ಲಿ ಯಶಸ್ವಿಯಾಗಿ ಮುನ್ನಡೆಸಿದ ಎಂ.ಎಸ್.ಧೋನಿ ನಿವೃತ್ತಿ ವಿಚಾರವಾಗಿ ವರ್ಷಗಳಿಂದ ವಿವಿಧ ಮಾಧ್ಯಮಗಳಲ್ಲಿ ಸುದ್ದಿಗಳು ಪ್ರಕಟವಾಗುತ್ತಲೇ ಇದೆ. ಆದರೆ ಧೋನಿ ಇದಕ್ಕೆಲ್ಲ ತಲೆ ಕೆಡಿಸಿಕೊಂಡಿಲ್ಲ, ಮೌನವಾಗಿಯೇ ಏನೂ ಆಗಿಲ್ಲ ಎನ್ನುವಂತೆ ತಮ್ಮ ಪಾಡಿಗೆ ತಾವಿದ್ದಾರೆ. ಅಂತಹ ಧೋನಿ ಇದೀಗ ಪೂರ್ಣಾವಧಿ ಕ್ರಿಕೆಟ್ ತರಬೇತುದಾರನಾಗುವತ್ತ ಹೆಜ್ಜೆ ಇಟ್ಟಿದ್ದಾರೆ. ಹೌದು, ಸದ್ಯ ಜಾರ್ಖಂಡ್ನಲ್ಲಿರುವ ಧೋನಿ ಜುಲೈ2 ರಂದು ಆನ್ಲೈನ್ ಕ್ರಿಕೆಟ್ ಅಕಾಡೆಮಿಯನ್ನು ಆರಂಭಿಸುತ್ತಿದ್ದಾರೆ. ಇದರೊಂದಿಗೆ ಧೋನಿ ಮುಂದಿನ ದಿನಗಳಲ್ಲಿ ಕ್ರಿಕೆಟ್ ಜೀವನಕ್ಕೆ ಹಠಾತ್ ನಿವೃತ್ತಿ ಘೋಷಿಸಿದರೂ ಅಚ್ಚರಿ ಇಲ್ಲ ಎಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ.
ಸುಸಜ್ಜಿತ ಅಕಾಡೆಮಿ: ಜಾರ್ಖಂಡ್ನಲ್ಲಿ ಅಕಾಡೆಮಿಗೆ ಸ್ವತಃ ಧೋನಿ ಚಾಲನೆ ನೀಡಲಿದ್ದಾರೆ. ಒಟ್ಟಾರೆ ಯೋಜನೆಯ ಮುಖ್ಯಸ್ಥನಾಗಿ ಧೋನಿ ಇರಲಿದ್ದಾರೆ. ಇವರೊಂದಿಗೆ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟ್ ದಿಗ್ಗಜ ಡ್ಯಾರಿಲ್ ಕುಲ್ಲಿನಾನ್ ಇದ್ದಾರೆ. ಇವರು ಅಕಾಡೆಮಿಯ ಕೋಚಿಂಗ್ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಈಗಾಗಲೇ ಅಕಾಡೆಮಿಗೆ 200ಕ್ಕೂ ಹೆಚ್ಚು ತರಬೇತುದಾರರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಆನ್ ಲೈನ್ ಮೂಲಕ ಸದ್ಯ ತರಬೇತಿ ಆರಂಭಿಸಲಾಗುತ್ತಿದೆ. ಆದರೆ ಅದರ ರೂಪುರೇಷ, ಕಾರ್ಯ ವೈಖರಿ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಧೋನಿ 2017ರಲ್ಲಿ ದುಬೈನಲ್ಲಿ ಕ್ರಿಕೆಟ್ ಅಕಾಡೆಮಿ ತೆರೆದಿದ್ದರು. ಆದರೆ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಹೆಚ್ಚು ಬ್ಯುಸಿಯಾಗಿದ್ದರಿಂದ ಧೋನಿಗೆ ಅದರತ್ತ ಹೆಚ್ಚಿನ ಗಮನ ಕೊಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅಕಾಡೆಮಿ ಅರ್ಧಕ್ಕೆ ನಿಂತು ಹೋಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಕಣಕ್ಕಿಳಿಯಲಿದ್ದಾರೆ ಧೋನಿ?: ಯುವಕರಿಗೆ ಕ್ರಿಕೆಟ್ ಪಾಠಗಳನ್ನು ಕಲಿಸಿಕೊಡಲು ಸ್ವತಃ ಧೋನಿಯೇ ಕಣಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ಆಂಗ್ಲ ಮಾಧ್ಯಮ ವರದಿ ಮಾಡಿದೆ. ಹಿಂದೆ ಧೋನಿ ಸತತ ಅಂತಾರಾಷ್ಟ್ರೀಯ ಕ್ರಿಕೆಟ್ ಕೂಟಗಳಲ್ಲಿ ಬ್ಯುಸಿಯಾಗಿರುತ್ತಿದ್ದರು ,ಆದರೆ ಸದ್ಯ ಧೋನಿ ಮನೆಯಲ್ಲೇ ಇದ್ದಾರೆ. ಹೀಗಾಗಿ ನೇರವಾಗಿಅಕಾಡೆಮಿ ಕೆಲಸಗಳಲ್ಲಿ ಹೆಚ್ಚು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ