ಮುಂಬೈ: ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾದ ಕ್ರಿಕೆಟಿಗ ರಿಷಬ್ ಪಂತ್
Team Udayavani, Jan 7, 2023, 11:55 PM IST
ಮುಂಬಯಿ: ಕ್ರಿಕೆಟಿಗ ರಿಷಭ್ ಪಂತ್ ಅವರು ಶುಕ್ರವಾರ ಇಲ್ಲಿನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಮೊಣಕಾಲಿನ ಅಸ್ಥಿರಜ್ಜು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಭಾರತೀಯ ಕ್ರಿಕೆಟ್ ಮಂಡಳಿ ಮೂಲಗಳು ತಿಳಿಸಿವೆ.
ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅವರನ್ನು ಪರೀಕ್ಷಿಸಲಾಗುತ್ತಿದೆ.
ಮುಂದಿನ ಕ್ರಮ ಮತ್ತು ಪುನರ್ವಸತಿಗೆ ಡಾ| ದಿನ್ಶಾ ಪರ್ದಿವಾಲಾ ಅವರು ಸಲಹೆ ನೀಡಲಿದ್ದಾರೆ. ಅವರ ಸೂಚನೆಯಂತೆ ಬಿಸಿಸಿಐ ಕ್ರೀಡಾ ವಿಜ್ಞಾನ ಮತ್ತು ವೈದ್ಯಕೀಯ ತಂಡವು ಪಂತ್ ಅವರಿಗೆ ಚಿಕಿತ್ಸೆ ಮುಂದುವರಿಸಲಿದೆ.