ತೂಗುಯ್ಯಾಲೆಯಲ್ಲಿ ಪ್ಲೇ-ಆಫ್ ಭವಿಷ್ಯ


Team Udayavani, May 16, 2018, 6:30 AM IST

millaer.jpg

ಮುಂಬಯಿ: ಹಾವು-ಏಣಿ ಆಟದಂತಾಗಿರುವ ಕೊನೆಯ ಹಂತದ ಐಪಿಎಲ್‌ ಲೀಗ್‌ ಹಣಾಹಣಿ ವಿಪರೀತ ಕುತೂಹಲವನ್ನು ಹುಟ್ಟುಹಾಕಿದೆ. ಇಂಥದೊಂದು ಪಂದ್ಯಕ್ಕೆ ಬುಧವಾರ “ವಾಂಖೇಡೆ ಸ್ಟೇಡಿಯಂ’ ಸಾಕ್ಷಿಯಾಗಲಿದೆ. ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು ಸತತ ಸೋಲಿನಿಂದ ದಿಕ್ಕೆಟ್ಟಿರುವ ಕಿಂಗ್ಸ್‌ ಇಲೆವೆನ್‌ ತಂಡಗಳು ಇಲ್ಲಿ ಮುಖಾಮುಖೀ ಆಗಲಿವೆ.

ಎರಡೂ ತಂಡಗಳು 12 ಪಂದ್ಯಗಳನ್ನು ಪೂರೈಸಿವೆ. ಪಂಜಾಬ್‌ 6 ಜಯದೊಂದಿಗೆ 12 ಅಂಕ ಹಾಗೂ ಮುಂಬೈ 5 ಜಯದೊಂದಿಗೆ 10 ಅಂಕ ಹೊಂದಿವೆ. ಹೀಗಾಗಿ ಮುಂಬೈಗೆ ಗೆಲುವು ಅನಿವಾರ್ಯ. ಸೋತರೆ ಅದು ಕೂಟದಿಂದ ಹೊರಬೀಳಲಿದೆ; ಪಂಜಾಬ್‌ ಹಾದಿ ಸುಗಮಗೊಳ್ಳುತ್ತದೆ. ಆದರೆ “ಐಪಿಎಲ್‌ ಲೆಕ್ಕಾಚಾರ’ಗಳು ಏನಿವೆಯೋ ಬಲ್ಲವರಿಲ್ಲ!

ಸೋಲಿನಿಂದ ಕಂಗಾಲು
ಎರಡೂ ತಂಡಗಳು ಹಿಂದಿನ ಪಂದ್ಯದ ಸೋಲಿನ ಆಘಾತದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಮುಂಬೈ ಇದೇ ಅಂಗಳದಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 7 ವಿಕೆಟ್‌ಗಳಿಂದ ಎಡವಿತ್ತು. ಮುಂಬೈ 6ಕ್ಕೆ 168 ರನ್‌ ಗಳಿಸಿದರೆ, ರಾಜಸ್ಥಾನ್‌ 3 ವಿಕೆಟ್‌ ನಷ್ಟಕ್ಕೆ 171 ರನ್‌ ಬಾರಿಸಿ ಗೆದ್ದು ಬಂದಿತ್ತು.

ಇನ್ನೊಂದೆಡೆ ಪಂಜಾಬ್‌ನದ್ದು ಊಹೆಗೂ ನಿಲುಕದ ಸೋಲು. ಇಂದೋರ್‌ ಅಂಗಳದಲ್ಲಿ ಆರ್‌ಸಿಬಿ ವಿರುದ್ಧ ಶೋಚ ನೀಯ ಬ್ಯಾಟಿಂಗ್‌ ನಡೆಸಿ 88 ರನ್ನಿಗೆ ಕುಸಿದದ್ದು ಪಂಜಾಬ್‌ ಪಾಲಿಗೆ ದೊಡ್ಡ ಗಂಡಾಂತರ ತಂದೊಡ್ಡಿದೆ.
 
ಮುಂಬೈ ರನ್‌ರೇಟ್‌ ಉತ್ತಮ
ಮುಂಬೈ ಪಾಲಿನ ಪ್ಲಸ್‌ ಪಾಯಿಂಟ್‌ ಎಂದರೆ ರನ್‌ ರೇಟ್‌. ಇದು ಪಂಜಾಬ್‌ಗಿಂತ ಉತ್ತಮ ಮಟ್ಟದಲ್ಲಿದೆ. ಮುಂಬೈ ಲೀಗ್‌ ಹಂತದ ಪ್ರಥಮಾರ್ಧ ದಲ್ಲಿ ಎಡವಿ ದ್ವಿತೀಯಾರ್ಧದಲ್ಲಿ ಚೇತರಿಸಿಕೊಂಡರೆ, ಪಂಜಾಬ್‌ ಬಹಳ ಬೇಗ ಪ್ಲೇ-ಆಫ್ ಪ್ರವೇಶಿಸಲಿದೆ ಎಂಬ ಕನಸನ್ನು ಬಿತ್ತಿ ಈಗ ಹೊರಬೀಳಲು ಪೈಪೋಟಿ ನಡೆಸುವ ರೀತಿಯಲ್ಲಿ ಆಡುತ್ತಿದೆ!

ಯಾದವ್‌, ರಾಹುಲ್‌ ಮಿಂಚು
ಎರಡೂ ತಂಡಗಳ ಬ್ಯಾಟಿಂಗ್‌ ವಿಭಾಗ ಒನ್‌ ಮ್ಯಾನ್‌ ಶೋ ಎಂಬಂತಿದೆ. ಮುಂಬೈ ಪರ ಸೂರ್ಯಕುಮಾರ್‌ ಯಾದವ್‌, ಪಂಜಾಬ್‌ ಪರ ಕೆ.ಎಲ್‌. ರಾಹುಲ್‌ ಮಾತ್ರ ಸ್ಥಿರ ಪ್ರದರ್ಶನ ನೀಡುತ್ತ ಬಂದಿದ್ದಾರೆ. ಆರಂಭದಲ್ಲಿ ಸಿಡಿದ ಕ್ರಿಸ್‌ ಗೇಲ್‌ ಈಗ ಮಂಕಾಗಿದ್ದಾರೆ. ಮುಂಬೈ ಕಪ್ತಾನ ರೋಹಿತ್‌ ಶರ್ಮ ಸೊನ್ನೆ ಸುತ್ತುವುದರಲ್ಲೇ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಎರಡೂ ತಂಡಗಳ ಬೌಲಿಂಗ್‌ ಘಾತಕವೇನಲ್ಲ.
 
ಇಂದೋರ್‌ನಲ್ಲಿ ನಡೆದ ಇತ್ತಂಡಗಳ ನಡುವಿನ ಮೊದಲ ಪಂದ್ಯವನ್ನೊಮ್ಮೆ ಇಲ್ಲಿ ನೆನಪಿಸಿಕೊಳ್ಳುವುದು ಸೂಕ್ತ. ಇದನ್ನು ಮುಂಬೈ 6 ವಿಕೆಟ್‌ಗಳಿಂದ ಜಯಿಸಿತ್ತು. ಪಂಜಾಬ್‌ 6ಕ್ಕೆ 174 ರನ್‌ ಗಳಿಸಿದರೆ, ಮುಂಬೈ 19 ಓವರ್‌ಗಳಲ್ಲಿ 4 ವಿಕೆಟಿಗೆ 176 ರನ್‌ ಮಾಡಿ ಗೆದ್ದು ಬಂದಿತ್ತು. 57 ರನ್‌ ಬಾರಿಸಿದ ಸೂರ್ಯಕುಮಾರ್‌ ಯಾದವ್‌ ಪಂದ್ಯಶ್ರೇಷ್ಠ 
ಗೌರವಕ್ಕೆ  ಪಾತ್ರರಾಗಿದ್ದರು.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.