ಕರ್ನಾಟಕ ದಾಳಿಗೆ ಉದುರಿದ ಮುಂಬಯಿ

ಕೌಶಿಕ್‌, ಮಿಥುನ್‌, ರೋನಿತ್‌, ಪ್ರತೀಕ್‌ ಬಿರುಸಿನ ಬೌಲಿಂಗ್‌ ಮುಂಬಯಿ-194; ಕರ್ನಾಟಕ-79/3

Team Udayavani, Jan 3, 2020, 11:06 PM IST

PTI1_3_2020_000179B

ಮುಂಬಯಿ: ಮುಂಬಯಿ ವಿರುದ್ಧ ಶುಕ್ರವಾರ ಅವರದೇ ಅಂಗಳದಲ್ಲಿ ಆರಂಭಗೊಂಡ ಹೊಸ ವರ್ಷದ ಮೊದಲ ರಣಜಿ ಪಂದ್ಯವನ್ನು ಕರ್ನಾಟಕ ಉತ್ತಮ ರೀತಿಯಲ್ಲಿ ಆರಂಭಿಸಿದೆ. ಮುಂಬಯಿಯನ್ನು ಕೇವಲ 194 ರನ್‌ಗೆ ಉರುಳಿಸುವ ಮೂಲಕ ಅಮೋಘ ನಿಯಂತ್ರಣ ಸಾಧಿಸಿದೆ.

“ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌’ನಲ್ಲಿ ಮೊದಲು ಬ್ಯಾಟಿಂಗಿಗೆ ಇಳಿದ ಮುಂಬಯಿ ಸರದಿ ಮೇಲೆ ಕರ್ನಾಟಕದ ಬೌಲರ್‌ಗಳು ಘಾತಕವಾಗಿ ಎರಗಿದರು. ವೇಗಿಗಳಾದ ವಿ. ಕೌಶಿಕ್‌ (45ಕ್ಕೆ 3), ಅಭಿಮನ್ಯು ಮಿಥುನ್‌ (48ಕ್ಕೆ 2), ರೋನಿತ್‌ ಮೋರೆ (47ಕ್ಕೆ 2) ಹಾಗೂ ಪ್ರತೀಕ್‌ ಜೈನ್‌ (20ಕ್ಕೆ 2) ಬಿಗು ಬೌಲಿಂಗ್‌ ದಾಳಿಗೆ ಸಿಲುಕಿದ ಮುಂಬಯಿ 55.5 ಓವರ್‌ಗಳಲ್ಲಿ ಸರ್ವಪತನ ಕಂಡಿತು.

ಮೊದಲ ದಿನದ ಆಟದ ಅಂತ್ಯಕ್ಕೆ ಕರ್ನಾಟಕ 3 ವಿಕೆಟಿಗೆ 79 ರನ್‌ ಮಾಡಿದೆ. ಆರಂಭಿಕ ವಿಕೆಟಿಗೆ ಆರ್‌. ಸಮರ್ಥ್ ಮತ್ತು ದೇವದತ್ತ ಪಡಿಕ್ಕಲ್‌ 19.3 ಓವರ್‌ಗಳಿಂದ 68 ರನ್‌ ಜತೆಯಾಟ ನಡೆಸಿದರೂ ಅನಂತರ ದಿಢೀರ್‌ ಕುಸಿತಕ್ಕೆ ಸಿಲುಕಿತು. ಸಮರ್ಥ್ 40 ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದು, ಇವರೊಂದಿಗೆ ಖಾತೆ ತೆರೆಯದ ಕಪ್ತಾನ ಕರುಣ್‌ ನಾಯರ್‌ ಇದ್ದಾರೆ. ದೇವದತ್ತ ಪಡಿಕ್ಕಲ್‌ 32 ರನ್‌ ಮಾಡಿದರೆ, ಅಭಿಷೇಕ್‌ ರೆಡ್ಡಿ (0) ಹಾಗೂ ರೋಹನ್‌ ಕದಮ್‌ (4 ರನ್‌) ಬೇಗನೆ ಪೆವಿಲಿಯನ್‌ ಸೇರಿಕೊಂಡರು.
ಶಮ್ಸ್‌ ಮಲಾನಿ (13ಕ್ಕೆ 2) ಮತ್ತು ಶಶಾಂಕ್‌ ಅಟ್ಟರ್ಡೆ (14ಕ್ಕೆ 1) ವಿಕೆಟ್‌ ಹಂಚಿಕೊಂಡಿದ್ದಾರೆ. ಮೊದಲ ಇನ್ನಿಂಗ್ಸ್‌ ಮುನ್ನಡೆ ಸಾಧಿಸುವುದು ಕರ್ನಾಟಕದ ಸದ್ಯದ ಗುರಿ.

ಪೃಥ್ವಿ ಶಾ, ರಹಾನೆ ವಿಫ‌ಲ
ಕಳೆದ ಪಂದ್ಯದಲ್ಲಿ ತವರಿನ ವಾಂಖೇಡೆ ಅಂಗಳ ದಲ್ಲಿ ರೈಲ್ವೇಸ್‌ಗೆ 10 ವಿಕೆಟ್‌ಗಳಿಂದ ಶರಣಾಗಿದ್ದ ಮುಂಬಯಿ, ಈ ಮುಖಾಮುಖೀಯಲ್ಲೂ ಬ್ಯಾಟಿಂಗ್‌ ವೈಫ‌ಲ್ಯ ಅನುಭವಿಸಿತು.

ಆರಂಭಕಾರ ಆದಿತ್ಯ ತಾರೆ ಶೂನ್ಯಕ್ಕೆ ವಿಕೆಟ್‌ ಕಳೆದುಕೊಂಡರು. ಟೆಸ್ಟ್‌ ಸ್ಪೆಷಲಿಸ್ಟ್‌ ಅಜಿಂಕ್ಯ ರಹಾನೆ (7), ಸಿದ್ದೇಶ್‌ ಲಾಡ್‌ (4) ಹಾಗೂ ಪೃಥ್ವಿ ಶಾ (29) ವಿಕೆಟ್‌ 46 ರನ್‌ ಆಗುವಷ್ಟರಲ್ಲಿ ಉರುಳಿತು. ಸಫ‌ìರಾಜ್‌ ಖಾನ್‌ (8), ಶಮ್ಸ್‌ ಮುಲಾನಿ (0) ಕೂಡ ತಂಡದ ನೆರವಿಗೆ ನಿಲ್ಲಲಿಲ್ಲ. 60 ರನ್ನಿಗೆ ಮುಂಬಯಿಯ 6 ವಿಕೆಟ್‌ ಹಾರಿ ಹೋಯಿತು.

ಆದರೆ ನಾಯಕ ಸೂರ್ಯಕುಮಾರ್‌ ಯಾದವ್‌ ತಾಳ್ಮೆಯ ಬ್ಯಾಟಿಂಗ್‌ ಪ್ರದರ್ಶಿಸಿ ತಂಡದ ರಕ್ಷಣೆಗೆ ನಿಂತರು. ಅವರಿಗೆ ಶಶಾಂಕ್‌ ಅಟ್ಟರ್ಡೆ ಉತ್ತಮ ಬೆಂಬಲವಿತ್ತರು. 7ನೇ ವಿಕೆಟಿಗೆ 88 ರನ್‌ ಒಟ್ಟುಗೂಡಿತು. ಯಾದವ್‌ 94 ಎಸೆತಗಳಿಂದ 77 ರನ್‌ ಮಾಡಿದರು (10 ಬೌಂಡರಿ, 2 ಸಿಕ್ಸರ್‌). ಯಾದವ್‌ ಹೊರತುಪಡಿಸಿದರೆ 35 ರನ್‌ ಮಾಡಿದ ಶಶಾಂಕ್‌ ಅವರದೇ ಹೆಚ್ಚಿನ ಗಳಿಕೆ.

ಕೇರಳ ಬ್ಯಾಟಿಂಗ್‌ ಕುಸಿತ
ಹೈದರಾಬಾದ್‌, ಜ. 3: ಹೈದರಾಬಾದ್‌ ಮತ್ತು ಕೇರಳ ನಡುವಿನ ರಣಜಿ ಪಂದ್ಯಕ್ಕೆ ಮಳೆಯಿಂದ ಅಡಚಣೆಯಾಗಿದೆ. ಮೊದಲ ದಿನ ಕೇವಲ 41 ಓವರ್‌ಗಳ ಆಟವಷ್ಟೇ ನಡೆದಿದ್ದು, ಕೇರಳ 7 ವಿಕೆಟಿಗೆ 126 ಮಾಡಿದೆ. ಇದರಲ್ಲಿ 20 ರನ್‌ ಎಕ್ಸ್‌ಟ್ರಾ ರೂಪದಲ್ಲಿ ಬಂದಿದೆ.

ರವಿ ಕಿರಣ್‌ (24ಕ್ಕೆ 3) ಮತ್ತು ಮೊಹಮ್ಮದ್‌ ಸಿರಾಜ್‌ (36ಕ್ಕೆ 2) ತವರಿನಂಗಳದ ಲಾಭವೆತ್ತಿದರು. ಕೇರಳ 32ಕ್ಕೆ 4 ವಿಕೆಟ್‌ ಕಳೆದುಕೊಂಡು ತೀವ್ರ ಸಂಕಟಕ್ಕೆ ಸಿಲುಕಿತು. ನಾಯಕ ಸಚಿನ್‌ ಬಾಬಿ 29, ಸಲ್ಮಾನ್‌ ನಜೀರ್‌ 37 ರನ್‌ ಮಾಡಿ ಸಣ್ಣ ಮಟ್ಟದ ಹೋರಾಟ ಪ್ರದರ್ಶಿಸಿದರು.

ಸಂಕ್ಷಿಪ್ತ ಸ್ಕೋರ್‌
ಮುಂಬಯಿ-194 (ಯಾದವ್‌ 77, ಅಟ್ಟರ್ಡೆ 35, ಶಾ 29, ತುಷಾರ್‌ 10, ಕೌಶಿಕ್‌ 45ಕ್ಕೆ 3, ಪ್ರತೀಕ್‌ 20ಕ್ಕೆ 2, ಮೋರೆ 47ಕ್ಕೆ 2, ಮಿಥುನ್‌ 48ಕ್ಕೆ 2, ಗೋಪಾಲ್‌ 24ಕ್ಕೆ 1). ಕರ್ನಾಟಕ-3 ವಿಕೆಟಿಗೆ 79 (ಸಮರ್ಥ್ ಬ್ಯಾಟಿಂಗ್‌ 40, ಪಡಿಕ್ಕಲ್‌ 32, ಕದಮ್‌ 4, ರೆಡ್ಡಿ 0, ನಾಯರ್‌ ಬ್ಯಾಟಿಂಗ್‌ 0, ಮುಲಾನಿ 13ಕ್ಕೆ 2, ಅಟ್ಟರ್ಡೆ 14ಕ್ಕೆ 1).

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.