ಕಾಮನ್ವೆಲ್ತ್ 22: ಲಾಂಗ್ ಜಂಪ್ನಲ್ಲಿ ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ ಮುರಳಿ ಶ್ರೀಶಂಕರ್
Team Udayavani, Aug 5, 2022, 9:39 AM IST
ಬರ್ಮಿಂಗಂ: ಇಂಗ್ಲೆಂಡ್ ನ ಬರ್ಮಿಂಗಂ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಪುರುಷರ ಲಾಂಗ್ ಜಂಪ್ ನಲ್ಲಿ ಭಾರತದ ಮುರಳಿ ಶ್ರೀಶಂಕರ್ ಅವರು ರಜತ ಪದಕ ಗೆದ್ದುಕೊಂಡಿದ್ದಾರೆ.
8.08 ಮೀಟರ್ ಜಂಪ್ ಮಾಡಿದ ಮುರಳಿ ಶ್ರೀಶಂಕರ್ ಮೊದಲ ಬಾರಿಗೆ ಕಾಮನ್ವೆಲ್ತ್ ಪದಕ ಗೆದ್ದರು. ಮುರಳಿ ಶ್ರೀಶಂಕರ್ ಗೆ ಚಿನ್ನ ಗೆಲ್ಲುವ ಅವಕಾಶವಿತ್ತು. ಚಿನ್ನದ ಪದಕ ಗೆದ್ದ ಬಹಾಮಾಸ್ ನ ಲಕ್ವಾನ್ ನಾಯರ್ನ್ ಕೂಡಾ 8.08 ಮೀಟರ್ ಜಂಪ್ ಮಾಡಿದ್ದರು. ನಿಯಮದ ಪ್ರಕಾರ ಇಬ್ಬರ ಬೆಸ್ಟ್ ಜಂಪ್ ಟೈ ಆದರೆ ಅವರ ಸೆಕೆಂಡ್ ಬೆಸ್ಟ್ ಜಂಪ್ ಆಧಾರದಲ್ಲಿ ವಿಜೇತರನ್ನು ಘೋಷಣೆ ಮಾಡಲಾಗುತ್ತದೆ. ಅದರಂತೆ ಮುರಳಿ ಶ್ರೀಶಂಕರ್ ಅವರ ಸೆಕೆಂಡ್ ಬೆಸ್ಟ್ ಜಂಪ್ 7.84 ಆಗಿದ್ದರೆ, ಲಕ್ವಾನ್ ನಾಯರ್ನ್ ಅವರು 7.98 ಮೀ ಜಿಗಿದಿದ್ದರು. ಹೀಗಾಗಿ ಅವರಿಗೆ ಸ್ವರ್ಣ ಪದಕ ಪ್ರಾಪ್ತವಾಯಿತು.
ದಕ್ಷಿಣ ಆಫ್ರಿಕಾದ ಜೋವನ್ ವ್ಯಾನ್ ವುರೆನ್ 8.06 ಮೀ ಜಂಪ್ ನೊಂದಿಗೆ ಕಂಚು ಗೆದ್ದರು. ಭಾರತದ ಮತ್ತೋರ್ವ ಅಥ್ಲೀಟ್ ಮೊಹಮ್ಮದ್ ಅನೀಸ್ ಯಹಿಯಾ ಅವರು 7.97 ಮೀಟರ್ ಜಂಪ್ ನೊಂದಿಗೆ ಐದನೇ ಸ್ಥಾನ ಪಡೆದರು.
ಇದನ್ನೂ ಓದಿ:ಲಾಹೋರ್ನಲ್ಲಿ ವಾಲ್ಮೀಕಿ ದೇಗುಲ ಪುನಾರಂಭ: ಭಕ್ತರಿಗೆ ಮುಕ್ತವಾದ 1200 ವರ್ಷ ಹಳೆಯ ದೇವಾಲಯ
ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪುರುಷ ಲಾಂಗ್ ಜಂಪರ್ ಗಳಲ್ಲಿ ಮುರಳಿ ಶ್ರೀಶಂಕರ್ ಅವರ ಬೆಳ್ಳಿ ಅತ್ಯುತ್ತಮ ಪ್ರದರ್ಶನವಾಗಿದೆ. ಈ ಹಿಂದೆ 1978ರಲ್ಲಿ ಸುರೇಶ್ ಬಾಬು ಕಂಚು ಗೆದ್ದಿದ್ದೆ ಇದುವರೆಗಿನ ಅತ್ಯುತ್ತಮ ಪ್ರದರ್ಶನವಾಗಿದೆ.
History created by Murali Sreeshankar !!
1st evr ?? men’s long jump medal?in CWG. Sreeshankar Murali wins India’s first-ever silver medal in the Men’s Long Jump event at the Commonwealth Games.
@SidhrajsinhBapu @DivyajitsinhGo4 @gaurang_patel27 @jimil1007 pic.twitter.com/AIdCurzCw5— Bhagyarajsinh Gohel (@bhagyrajsinh_08) August 4, 2022
ಮಹಿಳೆಯರಲ್ಲಿ ಪ್ರಜೂಷಾ ಮಲಿಯಕ್ಕಲ್ 2010ರಲ್ಲಿ ದೆಹಲಿಯಲ್ಲಿ ಬೆಳ್ಳಿ ಗೆದ್ದರೆ, 2002ರಲ್ಲಿ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ