ಮರ್ರೆ-ನಡಾಲ್‌; ಫೆಡರರ್‌-ಜೊಕೋ ವಿಂಬಲ್ಡನ್‌ ಸೆಮಿಫೈನಲ್‌ ಸಾಧ್ಯತೆ


Team Udayavani, Jul 1, 2017, 3:45 AM IST

djokovic-and-federer-head-t.jpg

ಲಂಡನ್‌: ಪ್ರತಿಷ್ಠಿತ ವಿಂಬಲ್ಡನ್‌ ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಪಂದ್ಯಾವಳಿಗೆ ಕ್ಷಣಗಣನೆ ಆರಂಭಗೊಂಡಿದೆ. ಸೋಮವಾರದಿಂದ ಲಂಡನ್‌ನಲ್ಲಿ ರ್ಯಾಕೆಟ್‌ ಸಮರ ಆರಂಭವಾಗಲಿದ್ದು, ಗೆಲ್ಲುವ ಕುದುರೆಗಳ ಬಗ್ಗೆ ಟೆನಿಸ್‌ ಪಂಡಿತರು ಈಗಾಗಲೇ ನಾನಾ ಲೆಕ್ಕಾಚಾರ ಹಾಕಿಕೊಂಡಿದ್ದಾರೆ.

ಪುರುಷರ ಸಿಂಗಲ್ಸ್‌ ಸ್ಪರ್ಧೆಯ ಸಾಧ್ಯತೆಯ ಪ್ರಕಾರ ಹಾಲಿ ಚಾಂಪಿಯನ್‌ ಆ್ಯಂಡಿ ಮರ್ರೆ ಸೆಮಿಫೈನಲ್‌ನಲ್ಲಿ 2 ಬಾರಿಯ ಚಾಂಪಿಯನ್‌ ರಫೆಲ್‌ ನಡಾಲ್‌ ಅವರನ್ನು ಎದುರಿಸಬಹುದು. ಹಾಗೆಯೇ 8ನೇ ವಿಂಬಲ್ಡನ್‌ ಕಿರೀಟದ ಕನಸು ಕಾಣುತ್ತಿರುವ ಹಳೆ ಹುಲಿ ರೋಜರ್‌ ಫೆಡರರ್‌, 3 ಬಾರಿಯ ವಿಜೇತ ನೊವಾಕ್‌ ಜೊಕೋವಿಕ್‌ ಅವರನ್ನು ಉಪಾಂತ್ಯದಲ್ಲಿ ಎದುರಿಸುವ ಸಂಭವ ಇದೆ.

ಅಗ್ರ ಶ್ರೇಯಾಂಕದ ಆ್ಯಂಡಿ ಮರ್ರೆ ಸೋಮವಾರದಂದೇ ಅರ್ಹತಾ ಆಟಗಾರನೊಬ್ಬನ ವಿರುದ್ಧ ಮೊದಲ ಸುತ್ತಿನ ಪಂದ್ಯವನ್ನು ಆಡಲಿದ್ದಾರೆ. 2ನೇ ಶ್ರೇಯಾಂಕದ ಜೊಕೋವಿಕ್‌ ಸ್ಲೊವಾಕಿಯಾದ ಮಾರ್ಟಿನ್‌ ಕ್ಲಿಝಾನ್‌ ಅವರನ್ನು ಎದುರಿಸಲಿದ್ದು, 3ನೇ ಸುತ್ತಿನಲ್ಲಿ ಜುವಾನ್‌ ಮಾರ್ಟಿನ್‌ ಡೆಲ್‌ ಪೊಟ್ರೊ ಅವರೊಂದಿಗೆ ಮುಖಾಮುಖೀ ಆಗಬಹುದು.

3ನೇ ಶ್ರೇಯಾಂಕಿತ ಫೆಡರರ್‌ ಉಕ್ರೇನಿನ ಅಲೆಕ್ಸಾಂಡರ್‌ ಡೊಲ್ಗೊಪೊಲೋವ್‌ ಅವರನ್ನು, 4ನೇ ಶ್ರೇಯಾಂಕದ ನಡಾಲ್‌ ಆಸ್ಟ್ರೇಲಿಯದ ಜಾನ್‌ ಮಿಲ್‌ಮಾÂನ್‌ ಅವರನ್ನು ಮೊದಲ ಸುತ್ತಿನಲ್ಲಿ ಎದುರಿಸುವರು.

ಫೆಡರರ್‌ ಮತ್ತು ನಡಾಲ್‌ 4ನೇ ಸಲ ಫೈನಲ್‌ನಲ್ಲಿ ಎದುರಾಗಬಹುದು ಎಂಬುದು ಮತ್ತೂಂದು ಲೆಕ್ಕಾಚಾರ. ಇದಕ್ಕೂ ಮುನ್ನ ಇವರಿಬ್ಬರು 2006ರಿಂದ 2008ರ ತನಕ ಸತತ 3 ಪ್ರಶಸ್ತಿ ಸಮರದಲ್ಲಿ ಮುಖಾಮುಖೀಯಾಗಿದ್ದರು. 2008ರ ಕೊನೆಯ ಕಾದಾಟದಲ್ಲಿ 5 ಗಂಟೆಗಳ ಕಾಲ ಸಾಗಿದ 5 ಸೆಟ್‌ಗಳ ಮ್ಯಾರತಾನ್‌ ಹೋರಾಟದಲ್ಲಿ ನಡಾಲ್‌ ವಿಂಬಲ್ಡನ್‌ ಕಿರೀಟ ಏರಿಸಿಕೊಂಡಿದ್ದರು. ಇದು ಗ್ರ್ಯಾನ್‌ಸ್ಲಾಮ್‌ ಇತಿಹಾಸದ ಅಮೋಘ ಫೈನಲ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು.

ಸೆರೆನಾ, ಶರಪೋವಾ ಗೈರು
ಹಾಲಿ ಚಾಂಪಿಯನ್‌ ಸೆರೆನಾ ವಿಲಿಯಮ್ಸ್‌ ಮತ್ತು ಮಾಜಿ ಚಾಂಪಿಯನ್‌ ಮರಿಯಾ ಶರಪೋವಾ ಈ ಬಾರಿ ಆಡದಿರುವುದರಿಂದ ವಿಂಬಲ್ಡನ್‌ ವನಿತಾ ಸ್ಪರ್ಧೆಗಳ ಆಕರ್ಷಣೆ ಅಷ್ಟರ ಮಟ್ಟಿಗೆ ಕಡಿಮೆಯಾಗಿದೆ. ಆದರೆ ಪ್ರಶಸ್ತಿಯ ಹಾದಿ ಮುಕ್ತಗೊಂಡಿದೆ.

ಅಗ್ರ ಶ್ರೇಯಾಂಕಿತೆ, ಕಳೆದ ವರ್ಷದ ರನ್ನರ್ ಅಪ್‌ ಆ್ಯಂಜೆಲಿಕ್‌ ಕೆರ್ಬರ್‌, ಫ್ರೆಂಚ್‌ ಓಪನ್‌ ಚಾಂಪಿಯನ್‌ ಜೆಲೆನಾ ಒಸ್ಟಾಪೆಂಕೊ, ಸಿಮೋನಾ ಹಾಲೆಪ್‌, ಗಾರ್ಬಿನ್‌ ಮುಗುರುಜಾ, ಎಲಿನಾ ಸ್ವಿಟೋಲಿನಾ, ವೀನಸ್‌ ವಿಲಿಯಮ್ಸ್‌, ಪೆಟ್ರಾ ಕ್ವಿಟೋವಾ, ವಿಕ್ಟೋರಿಯಾ ಅಜರೆಂಕಾ ಅವರೆಲ್ಲ ವನಿತಾ ಸಿಂಗಲ್ಸ್‌ ಚಾಂಪಿಯನ್‌ಶಿಪ್‌ನ ಸ್ಟಾರ್‌ ಆಟಗಾರ್ತಿಯರಾಗಿದ್ದಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.