ಹೈದರಾಬಾದ್‌ನ ಮಾಜಿ ಕ್ರಿಕೆಟಿಗ ಎಂ.ವಿ. ಶ್ರೀಧರ್‌ ನಿಧನ


Team Udayavani, Oct 31, 2017, 6:45 AM IST

MV-Sridhar.jpg

ಹೈದರಾಬಾದ್‌: ಹೈದರಾಬಾದ್‌ ರಣಜಿ ತಂಡದ ಮಾಜಿ ನಾಯಕ, ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ಜನರಲ್‌ ಮ್ಯಾನೇಜರ್‌ ಆಗಿಯೂ ಕರ್ತವ್ಯ ನಿಭಾಯಿಸಿದ್ದ ಎಂ.ವಿ. ಶ್ರೀಧರ್‌ ಸೋಮವಾರ ತೀವ್ರ ಹೃದಯಾಘಾತದಿಂದ ನಿಧನರಾದರು. ಅವರಿಗೆ 51 ವರ್ಷವಾಗಿತ್ತು.

ಮಧ್ಯಾಹ್ನ ಹೈದರಾಬಾದ್‌ ನಿವಾಸದಲ್ಲಿದ್ದಾಗ ಶ್ರೀಧರ್‌ ಅವರಿಗೆ ಎದೆನೋವು ಕಾಣಿಸಿಕೊಂಡಿತು. ಆದರೆ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ನಿಧನರಾದರು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಶ್ರೀಧರ್‌ ಅಗಲಿದ್ದಾರೆ.

1966ರಲ್ಲಿ ವಿಜಯವಾಢದಲ್ಲಿ ಜನಿಸಿದ ಮಟುರಿ ವೆಂಕಟ ಶ್ರೀಧರ್‌ ಆಕರ್ಷಕ ಶೈಲಿಯ ಬಲಗೈ ಬ್ಯಾಟ್ಸ್‌ಮನ್‌ ಆಗಿದ್ದರು. 1988-2000ದ ಅವಧಿಯಲ್ಲಿ ಹೈದರಾಬಾದ್‌ ಪರ ರಣಜಿ ಆಡಿದ ಅವರು ತಂಡದ ನಾಯಕನಾಗಿಯೂ ಉತ್ತಮ ನಿರ್ವಹಣೆ ತೋರಿದರು. 97 ಪ್ರಥಮ ದರ್ಜೆ ಪಂದ್ಯಗಳಿಂದ 6,701 ರನ್‌ ಬಾರಿಸಿದ ಹೆಗ್ಗಳಿಕೆ ಶ್ರೀಧರ್‌ ಅವರದು. 1994ರಲ್ಲಿ ಆಂಧ್ರಪ್ರದೇಶ ವಿರುದ್ಧ 366 ರನ್‌ ಬಾರಿಸಿದ್ದು ಅವರ ಜೀವನಶ್ರೇಷ್ಠ ಸಾಧನೆ. ಇದು ರಣಜಿ ಇತಿಹಾಸದ 3ನೇ ಸರ್ವಾಧಿಕ ವೈಯಕ್ತಿಕ ಮೊತ್ತವಾಗಿದೆ. ಒಟ್ಟು 21 ಶತಕ ಬಾರಿಸಿದ್ದಾರೆ.

ಶ್ರೀಧರ್‌ ವೃತ್ತಿಯಲ್ಲಿ ವೈದ್ಯರೆಂಬುದು ಅನೇಕರಿಗೆ ತಿಳಿದಿರದ ಸಂಗತಿ. ಹೈದರಾಬಾದ್‌ ಕ್ರಿಕೆಟ್‌ ಮಂಡಳಿಯಲ್ಲಿ (ಎಚ್‌ಸಿಎ) ವಿವಿಧ ಹುದ್ದೆ ಅಲಂಕರಿಸಿದ ಬಳಿಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. 2013ರಲ್ಲಿ ಎನ್‌. ಶ್ರೀನಿವಾಸನ್‌ ಕಾರ್ಯಾವಧಿಯಲ್ಲಿ ಜಿಎಂ ಆಗಿ ಬಿಸಿಸಿಐ ಪ್ರವೇಶಿಸಿದ್ದರು. ಕ್ರಿಕೆಟ್‌ ವಕ್ತಾರನಾಗಿ ಕರ್ತವ್ಯ ನಿಭಾಯಿಸುವಲ್ಲಿ ಶ್ರೀಧರ್‌ ಸದಾ ಮುಂಚೂಣಿಯಲ್ಲಿ ಇರುತ್ತಿದ್ದರು.

ಮಗಳ ಬರ್ತ್‌ಡೇ ತಯಾರಿ
ಹೈದರಾಬಾದ್‌ ಕ್ರಿಕೆಟ್‌ ಮಂಡಳಿಯ ಸದಸ್ಯ, ಶ್ರೀಧರ್‌ ಅವರ ಗೆಳೆಯರೂ ಆಗಿರುವ ಡಿ. ನರಸಿಂಗ ರಾವ್‌ ಈ ಕುರಿತು ಮಾಧ್ಯಮಗಳೊಂದಿಗೆ ಮಾತಾಡಿದ್ದಾರೆ. “ಶ್ರೀಧರ್‌ ನನ್ನ ಜತೆ ಬೆಳಗ್ಗೆ ದೂರವಾಣಿಯಲ್ಲಿ ಮಾತಾಡುತ್ತ, ಕಳೆದೊಂದು ವಾರದಿಂದ ಆರೋಗ್ಯ ಸರಿ ಇಲ್ಲ ಎಂದಿದ್ದರು. 12.30ರ ವೇಳೆ ಆರೋಗ್ಯ ಬಿಗಡಾಯಿಸಿದ್ದರಿಂದ ಸಂಬಂಧಿ ಒಬ್ಬರನ್ನು ತಮ್ಮ ಮನೆಗೆ ಕರೆಸಿಕೊಂಡಿದ್ದಾರೆ. ಊಟವನ್ನೂ ಮಾಡಿದ್ದಾರೆ. ಆದರೆ ಒಂದು ಗಂಟೆ ಬಳಿಕ ಹೃದಯಾಘಾತ ಸಂಭವಿಸಿದೆ. ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ. ಅವರು ತಮ್ಮ ಮಗಳ ಹುಟ್ಟಿದ ಹಬ್ಬದ ತಯಾರಿಯಲ್ಲಿದ್ದರು. ನ. 2ಕ್ಕೆ ಮಗಳ ಬರ್ತ್‌ಡೇ ಇತ್ತು. ಘಟನೆಯ ವೇಳೆ ಮಗಳೂ ಮನೆಯಲ್ಲಿದ್ದರು’ ಎಂದು ನರಸಿಂಗ ರಾವ್‌ ತಿಳಿಸಿದರು. ಶ್ರೀಧರ್‌ ಅಂತ್ಯಕ್ರಿಯೆ ಮಂಗಳವಾರ ಹೈದರಾಬಾದ್‌ನಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.