ಐಪಿಎಲ್‌ ಹಣದಿಂದ ಮನೆ ಖರೀದಿಸುವೆ: ತಿಲಕ್‌ ವರ್ಮ


Team Udayavani, Apr 4, 2022, 7:08 AM IST

Untitled-1

ಮುಂಬಯಿ: “ಇನ್ನೂ ನಮ್ಮದೇ ಆದ ಸ್ವಂತ ಮನೆ ಹೊಂದಿಲ್ಲ. ಹೀಗಾಗಿ ಈ ಬಾರಿಯ ಐಪಿಎಲ್‌ನಿಂದ ಗಳಿಸುವ ಹಣದಿಂದ ಹೆತ್ತವರಿಗಾಗಿ ಮನೆ ಖರೀದಿಸುವ ಗುರಿಯನ್ನು ಇಟ್ಟುಕೊಂಡಿದ್ದೇನೆ’ ಎಂದು ಮುಂಬೈ ಇಂಡಿಯನ್ಸ್‌ ತಂಡದ ಆಟಗಾರ ತಿಲಕ್‌ ವರ್ಮ ಹೇಳಿದ್ದಾರೆ.

2020ರ ಅಂಡರ್‌-19 ವಿಶ್ವಕಪ್‌ ತಂಡದ ಸದಸ್ಯರಾಗಿದ್ದ ತಿಲಕ್‌ ವರ್ಮ ಅವರನ್ನು ಈ ಬಾರಿಯ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್‌ 1.7 ಕೋಟಿ ರೂ.ಗೆ ಖರೀದಿಸಿದೆ. ಮುಂಬೈ ಸದ್ಯ ನಡೆಯುತ್ತಿರುವ ಐಪಿಎಲ್‌ನಲ್ಲಿ ಆಡಿದ ಎರಡು ಪಂದ್ಯಗಳಲ್ಲಿ ಸೋತಿದ್ದರೂ ತಿಲಕ್‌ ವರ್ಮ ಉತ್ತಮ ಬ್ಯಾಟಿಂಗ್‌ ಮೂಲಕ ಗಮನ ಸೆಳೆದಿದ್ದಾರೆ. 22 ಮತ್ತು 61 ರನ್‌ ಗಳಿಸುವ ಮೂಲಕ ತಂಡವನ್ನು ಆಧರಿಸಿದ್ದಾರೆ.

ತೀವ್ರ ಆರ್ಥಿಕ ಸಮಸ್ಯೆ:

“ನಾವು ಬೆಳೆಯುತ್ತಿರುವಂತೆ ಸಾಕಷ್ಟು ಆರ್ಥಿಕ ಸಮಸ್ಯೆಯನ್ನು ಎದುರಿಸಿದ್ದೇವೆ. ತಂದೆ ತನ್ನ ಅಲ್ಪ ಸಂಬಳದಲ್ಲಿ ನನ್ನ ಕ್ರಿಕೆಟ್‌ ವೆಚ್ಚದ ಜತೆಗೆ ಅಣ್ಣನ ವಿದ್ಯಾಭ್ಯಾಸದ ಖರ್ಚನ್ನು ನೋಡಬೇಕಿತ್ತು. ಕಳೆದ ಕೆಲವು ವರ್ಷಗಳಿಂದ ಸ್ವಲ್ಪಮಟ್ಟಿನ ಪ್ರಾಯೋಜಕತ್ವ ಮತ್ತು ಪಂದ್ಯಕ್ಕೆ ನೀಡಿದ ಹಣದಿಂದ ನನ್ನ ಕ್ರಿಕೆಟಿನ ವೆಚ್ಚವನ್ನು ನಿಭಾಯಿಸುತ್ತಿದ್ದೇನೆ’ ಎಂದು ವರ್ಮ ಹೇಳಿದ್ದಾರೆ.

“ಇದೀಗ ಐಪಿಎಲ್‌ ಹರಾಜು ಮೂಲಕ ಮುಂಬೈ ತಂಡಕ್ಕೆ ಸೇರ್ಪಡೆಯಾಗಿದ್ದರಿಂದ ಹೆತ್ತವರಿಗಾಗಿ ಮನೆ ಖರೀದಿಸುವ ಗುರಿ ಇಟ್ಟುಕೊಂಡಿದ್ದೇನೆ. ಐಪಿಎಲ್‌ನಲ್ಲಿ ಸಿಗುವ ಹಣದಿಂದ ನನ್ನ ಕ್ರೀಡಾಬಾಳ್ವೆಯ ಇನ್ನುಳಿದ ದಿನಗಳಲ್ಲಿ ಆರಾಮವಾಗಿ ಆಡಬಹುದು’ ಎಂದವರು ತಿಳಿಸಿದರು.

“ಐಪಿಎಲ್‌ ಹರಾಜು ನಡೆಯುತ್ತಿದ್ದ ದಿನ ನನ್ನ ಕೋಚ್‌ ಜತೆ ವೀಡಿಯೋ ಕಾಲ್‌ ಮಾಡಿದ್ದೆ. ಹರಾಜಿನಲ್ಲಿ 1.7 ಕೋಟಿ ರೂ.ಗಳಿಗೆ ಮುಂಬೈ ಖರೀದಿಸಿದಾಗ ಅವರು ಭಾವುಕರಾದರು. ಆ ಬಳಿಕ ಹೆತ್ತವರಿಗೆ ಕರೆ ಮಾಡಿದಾಗ ಅವರು ಕೂಡ ಭಾವೋದ್ವೇಗಕ್ಕೆ ಒಳಗಾದರು. ಅವರಿಂದ ಮಾತೇ ಹೊರಡಲಿಲ್ಲ’ ಎಂದು ತಿಲಕ್‌ ವರ್ಮ ಹೇಳಿದರು.

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.