ಅಫ್ಘಾನಿಸ್ಥಾನಕ್ಕೆ ಟ್ವೆಂಟಿ-20 ಸರಣಿ


Team Udayavani, Mar 13, 2017, 11:51 AM IST

Afghanistans.jpg

ಗ್ರೇಟರ್‌ ನೋಯ್ಡಾ: ಭಾರತ ಪ್ರವಾಸದಲ್ಲಿರುವ ಅಫ್ಘಾನಿಸ್ಥಾನ ತಂಡವು ಅಯರ್‌ಲ್ಯಾಂಡ್‌ ವಿರುದ್ಧ ನಡೆದ ಟ್ವೆಂಟಿ-20 ಸರಣಿಯನ್ನು 3-0 ಅಂತರದಿಂದ ಕ್ಲೀನ್‌ಸ್ವೀಪ್‌ಗೈದಿದೆ.

ಇಲ್ಲಿನ ಗ್ರೇಟರ್‌ ನೋಯ್ಡಾದಲ್ಲಿ ರವಿವಾರ ನಡೆದ ಮೂರನೇ ಟ್ವೆಂಟಿ-20 ಪಂದ್ಯದಲ್ಲಿ ಅಫ್ಘಾನಿಸ್ಥಾನ ತಂಡವು ಅಯರ್‌ಲ್ಯಾಂಡ್‌ ತಂಡವನ್ನು 28 ರನ್ನುಗಳಿಂದ ಸೋಲಿಸಿದೆ. ಇನ್ನು ಉಭಯ ತಂಡಗಳು ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖೀಯಾಗಲಿವೆ. 50 ಓವರ್‌ಗಳ ಈ ಏಕದಿನ ಸರಣಿಯ ಮೊದಲ ಪಂದ್ಯ ಮಾ. 15ರಂದು ನಡೆಯಲಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಅಫ್ಘಾನಿಸ್ಥಾನ ತಂಡವು ಆರಂಭಿಕ ಮೊಹಮ್ಮದ್‌ ಶಾಜಾದ್‌ ಮತ್ತು ಮೊಹಮ್ಮದ್‌ ನಬಿ ಅವರ ಉಪಯುಕ್ತ ಆಟದಿಂದಾಗಿ 20 ಓವರ್‌ಗಳಲ್ಲಿ 8 ವಿಕೆಟಿಗೆ 233 ರನ್ನುಗಳ ಉತ್ತಮ ಮೊತ್ತ ಪೇರಿಸಿತು. ಕೊನೆಯ ಹಂತದಲ್ಲಿ ಸ್ಫೋಟಕ ಆಟವಾಡಿದ ನಬಿ ಕೇವಲ 30 ಎಸೆತಗಳಲ್ಲಿ 89 ರನ್‌ ಸಿಡಿಸಿದರು. 6 ಬೌಂಡರಿ ಮತ್ತು 9 ಸಿಕ್ಸರ್‌ ಸಿಡಿಸಿದ ಅವರು ಇನ್ನಿಂಗ್ಸ್‌ನ ಅಂತಿಮ ಎಸೆತದಲ್ಲಿ ರನೌಟಾದರು. ಇದರಿಂದಾಗಿ ಅಘಾ^ನಿಸ್ಥಾನ ಉತ್ತಮ ಮೊತ್ತ ಗಳಿಸುವಂತಾಯಿತು.

ಗೆಲ್ಲಲು ಕಠಿನ ಗುರಿ ಪಡೆದ ಅಯರ್‌ಲ್ಯಾಂಡ್‌ ಉತ್ತಮ ಆರಂಭ ಪಡೆಯಿತು. ಆರಂಭಿಕರಾದ ಪಾಲ್‌ ಸ್ಟರ್ಲಿಂಗ್‌ ಮತ್ತು ಸ್ಟುವರ್ಟ್‌ ಥಾಮ್ಸನ್‌ ಮೊದಲ ವಿಕೆಟಿಗೆ 4.2 ಓವರ್‌ಗಳಲ್ಲಿ 65 ರನ್‌ ಪೇರಿಸಿದ್ದರು. ಆದರೆ ಈ ಜೋಡಿ ಮುರಿದ ಬಳಿಕ ತಂಡ ಕುಸಿಯತೊಡಗಿತು. ಅಂತಿಮವಾಗಿ 19.2 ಓವರ್‌ಗಳಲ್ಲಿ 205 ರನ್ನಿಗೆ ಸರ್ವಪತನಗೊಂಡಿತು.ಸ್ಫೋಟಕ ಆಟವಾಡಿದ ಮೊಹಮ್ಮದ್‌ ನಬಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಸರಣಿಯುದ್ದಕ್ಕೂ ಉತ್ತಮ ನಿರ್ವಹಣೆ ನೀಡಿದ ರಶೀದ್‌ ಖಾನ್‌ ಸರಣಿಶ್ರೇಷ್ಠ ಪ್ರಶಸ್ತಿ ಗೆದ್ದರು.

ಸಂಕ್ಷಿಪ್ತ ಸ್ಕೋರು 
ಅಫ್ಘಾನಿಸ್ಥಾನ 8 ವಿಕೆಟಿಗೆ 233 (ಮೊಹಮ್ಮದ್‌ ಶಾಜಾದ್‌ 72, ಉಸ್ಮಾನ್‌ ಘಾನಿ 23, ಮೊಹಮ್ಮದ್‌ ನಬಿ 89, ಕೆವಿನ್‌ ಓ’ಬ್ರಿàನ್‌ 45ಕ್ಕೆ 4, ಜೇಕಬ್‌ ಮುಲ್ಡರ್‌ 32ಕ್ಕೆ 2); ಅಯರ್‌ಲ್ಯಾಂಡ್‌ 19.2 ಓವರ್‌ಗಳಲ್ಲಿ 205 ಆಲೌಟ್‌ (ಪಾಲ್‌ ಸ್ಟರ್ಲಿಂಗ್‌ 49, ಸ್ಟುವರ್ಟ್‌ ಥಾಮ್ಸನ್‌ 43, ಗ್ಯಾರಿ ವಿಲ್ಸನ್‌ 59, ಆಮಿರ್‌ ಹಂಝ 39ಕ್ಕೆ 2, ಕರೀಂ ಜನಾತ್‌ 34ಕ್ಕೆ 2, ರಶೀದ್‌ ಖಾನ್‌ 28ಕ್ಕೆ 3). 

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.