ನಡಾಲ್‌-ಫೆಡರರ್‌ ಸೆಮಿಫೈನಲ್‌ ಸೆಣಸಾಟ


Team Udayavani, Mar 17, 2019, 12:30 AM IST

q-7.jpg

ಇಂಡಿಯನ್‌ ವೆಲ್ಸ್‌: ಇಂಡಿಯನ್‌ ವೆಲ್ಸ್‌ ಕೂಟದ ಕ್ವಾರ್ಟರ್‌ ಪೈನಲ್‌ ಪಂದ್ಯಗಳಲ್ಲಿ ಜಯ ಸಾಧಿಸಿರುವ ಟೆನಿಸ್‌ ದಿಗ್ಗಜರಾದ ರಫೆಲ್‌ ನಡಾಲ್‌, ರೋಜರ್‌ ಫೆಡರರ್‌ ಈಗ ಸೆಮಿಫೈನಲ್‌ನಲ್ಲಿ ಪರಸ್ಪರ ಎದುರಾಗಲಿದ್ದಾರೆ. ಇಲ್ಲಿ ನಡೆದ ಪುರುಷರ ವಿಭಾಗದ ಪಂದ್ಯದಲ್ಲಿ ನಡಾಲ್‌ ಭಾರೀ ಹೋರಾಟ ನೀಡಿದ ರಶ್ಯದ ಕರೆನ್‌ ಕಶನೋವ್‌ ಅವರನ್ನು 7-6 (7-2), 7-6 (7-2) ಸೆಟ್‌ಗಳಿಂದ ಸೋಲಿಸಿದರು. ಇನ್ನೊಂದು ಪಂದ್ಯದಲ್ಲಿ ಫೆಡರರ್‌ ಪೋಲೆಂಡ್‌ನ‌ ಹ್ಯೂಬರ್ಟ್‌ ಹರ್ಕಾಝ್ ವಿರುದ್ಧ 6-4, 6-4 ಅಂತರದ ಜಯ ಸಾಧಿಸಿದರು.

ಎರಡೂ ಸೆಟ್‌ಗಳಲ್ಲೂ ಕರೆನ್‌ ಅವರಿಂದ ನಡಾಲ್‌ ತೀವ್ರ ಪೈಪೋಟಿ ಎದುರಿಸಿದರು. ಮೊದಲ ಸೆಟ್‌ನ ಆರಂಭದಲ್ಲಿ ನಡಾಲ್‌ ಮುನ್ನಡೆಯಲ್ಲಿದ್ದರೂ ಕರೆನ್‌ ದಿಟ್ಟ ಉತ್ತರ ನೀಡಿ ಆಟದ ಕುತೂಹಲವನ್ನು ಹೆಚ್ಚಿಸಿತೊಡಗಿದರು. ಸ್ಪರ್ಧೆ ಟೈ ಬ್ರೇಕರ್‌ಗೆ ವಿಸ್ತರಿಸಲ್ಪಟ್ಟಿತು. ಇಲ್ಲಿ ನಡಾಲ್‌ಗೆ ಅದೃಷ್ಟ ಒಲಿಯಿತು. ದ್ವಿತೀಯ ಸೆಟ್‌ನಲ್ಲೂ ಇವರಿಬ್ಬರ ನಡುವೆ ತೀವ್ರ ಹೋರಾಟ ನಡೆಯಿತು. ಈ ಸೆಟ್‌ ಕೂಡ ಟೈ ಬ್ರೇಕರ್‌ಗೆ ಸಾಗಿತು. ಇಲ್ಲಿಯೂ ನಡಾಲ್‌ ಅನುಭವ ನೆರವಿಗೆ ಬಂತು.

“ನನ್ನ ಯೋಜನೆ ಹಾಗೂ ಗುರಿ ನಾಳಿನ ಪಂದ್ಯಕ್ಕೆ ಸಿದ್ಧವಾಗುವುದು. ನನ್ನ ಮತ್ತು ಫೆಡರರ್‌ ವೃತ್ತಿಜೀವನದಲ್ಲಿ ಏನೇ ನಡೆದಿದ್ದರೂ ಇದಕ್ಕೆ ಹೊರತಾದ ಉತ್ತಮ ಬಾಂಧವ್ಯ ಹೊಂದಿದ್ದೇವೆ. ನಾವಿಬ್ಬರೂ ಮತ್ತೂಮ್ಮೆ ಅತ್ಯಂತ ಪ್ರಮುಖ ಸಂಗತಿಗಾಗಿ ಹೋರಾಡಲಿದ್ದೇವೆ’ ಎಂದಿದ್ದಾರೆ ನಡಾಲ್‌. 

ಫೆಡರರ್‌ಗೆ ಸುಲಭ ಜಯ
ಇನ್ನೊಂದು ಸೆಮಿಫೈನಲ್‌ನಲ್ಲಿ ರೋಜರ್‌ ಫೆಡರರ್‌ ಪೋಲೆಂಡ್‌ನ‌ ಹ್ಯೂಬರ್ಟ್‌ ಹರ್ಕಾಝ್ ಅವರನ್ನು ನೇರ ಗೇಮ್‌ಗಳಿಂದ ಸುಲಭದಲ್ಲಿ ಸೋಲಿಸಿದರು. “ನಡಾಲ್‌ ಎದುರಿನ ಆಟ ಈ ಕೋರ್ಟ್‌ನಲ್ಲಿ ಬೇರೆಯೇ ಶಕ್ತಿ ತುಂಬಲಿದೆ. ಪ್ರಾಮಾಣಿಕವಾಗಿ ಹೇಳುವುದಾದರೇ ಕಳೆದ ಐದು ಪಂದ್ಯಗಳು ಇಲ್ಲಿ ಗಣನೆ ಬರಲಿದೆ ಎಂಬ ಬಗ್ಗೆ ನಾನು ಯೋಚಿಸಿಲ್ಲ’ ಎಂದು ಫೆಡರರ್‌ ಹೇಳಿದ್ದಾರೆ. ನಡಾಲ್‌ 5 ಬಾರಿಯ ಇಂಡಿಯನ್‌ ವೆಲ್ಸ್‌ ಚಾಂಪಿಯನ್‌ ಫೆಡರರ್‌ ವಿರುದ್ಧ 39ನೇ ಪಂದ್ಯವನ್ನಾಡಲು ಸಿದ್ಧರಾಗಿದ್ದಾರೆ. ಕಳೆದ 38 ಮುಖಾಮುಖೀಯಲ್ಲಿ ನಡಾಲ್‌ 23-15 ಜಯ ದಾಖಲೆ ಹೊಂದಿದ್ದರೂ, ಹಾರ್ಡ್‌ ಕೋರ್ಟ್‌ ಕೂಟಗಳಲ್ಲಿ ನಡಾಲ್‌ ವಿರುದ್ಧ ಫೆಡರರ್‌ 11-9 ಜಯದ ದಾಖಲೆ ಹೊಂದಿದ್ದಾರೆ.

ಬಿಯಾಂಕಾ-ಕೆರ್ಬರ್‌ ಪ್ರಶಸ್ತಿ ಕಾದಾಟ
“ಇಂಡಿಯನ್‌ ವೆಲ್ಸ್‌’  ವನಿತೆಯರ ಸಿಂಗಲ್ಸ್‌ ಪ್ರಶಸ್ತಿಗಾಗಿ ಬಿಯಾಂಕಾ ಆ್ಯಂಡ್ರಿಸ್ಕೂ ಮತ್ತು ಆ್ಯಂಜೆಲಿಕ್‌ ಕೆರ್ಬರ್‌ ಕಾದಾಟ ನಡೆಸಲಿದ್ದಾರೆ. ಸೆಮಿಫೈನಲ್‌ ಸಮರದಲ್ಲಿ ಬಿಯಾಂಕಾ ಉಕ್ರೇನಿನ ಎಲಿನಾ ಸ್ವಿಟೋಲಿನಾ ಅವರನ್ನು 6-3, 2-6, 6-4 ಸೆಟ್‌ಗಳಿಂದ ಸೋಲಿಸುವಲ್ಲಿ ಯಶಸ್ವಿಯಾದರು. 20 ವರ್ಷದ ಬಳಿಕ, “ಇಂಡಿಯನ್‌ ವೆಲ್ಸ್‌ ಟೆನಿಸ್‌’ ಕೂಟದ ಫೈನಲ್‌ ಪ್ರವೇಶಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಬಿಯಾಂಕಾ ಪಾತ್ರರಾಗಿದ್ದಾರೆ. ಬಿಯಾಂಕಾಗೆ ಈಗ ಕೇವಲ 18 ವರ್ಷ. 1999ರಲ್ಲಿ ಇಂಡಿಯನ್‌ ವೆಲ್ಸ್‌ ಪ್ರಶಸ್ತಿ ಜಯಿಸಿದ ಸೆರೆನಾ ವಿಲಿಯಮ್ಸ್‌ಗೆ ಆಗ ಕೇವಲ 17 ವರ್ಷ. 

ಬಿಯಾಂಕಾ 6ನೇ ಶ್ರೇಯಾಂಕಿತೆ ಸ್ವಿಟೋಲಿನಾ ಅವರನ್ನು ಸೋಲಿಸಲು 2 ಗಂಟೆ 12 ನಿಮಿಷ ತೆಗೆದುಕೊಂಡರು. ಮೊದಲ ಸೆಟ್‌ನ ಆರಂಭದಲ್ಲಿ 0-3 ಅಂಕಗಳ ಹಿನ್ನಡೆಯಲ್ಲಿದ್ದ ಬಿಯಾಂಕಾ ಅನಂತರ ಆಕ್ರಮಣ ಆಟಕ್ಕಿಳಿದರು. ಸ್ವಿಟೋಲಿನಾ ದ್ವಿತೀಯ ಸೆಟ್‌ನಲ್ಲೂ ಮೇಲುಗೈ ಸಾಧಿಸಿ ಹೋರಾಟವನ್ನು ಸಮಬಲಕ್ಕೆ ತಂದರು. ಆದರೆ ನಿರ್ಣಾಯಕ ಸೆಟ್‌ನಲ್ಲಿ ಮತ್ತೆ ಆಕ್ರಮಣ ಆಟಕ್ಕಿಳಿದ ಬಿಯಾಂಕಾ ಪಂದ್ಯವನ್ನು ತಮ್ಮದಾಗಿಸಿಕೊಂಡರು. 

ಬೆಲಿಂಡಾ ಬೆನ್ಸಿಕ್‌ ಪರಾಭವ
ಇನ್ನೊಂದು ಸೆಮಿಫೈನಲ್‌ನಲ್ಲಿ 3 ಬಾರಿಯ ಗ್ರ್ಯಾನ್‌ಸ್ಲಾಮ್‌ ಚಾಂಪಿಯನ್‌ ಆ್ಯಂಜೆಲಿಕ್‌ ಕೆರ್ಬರ್‌ ಸ್ವಿಸ್‌ ತಾರೆ ಬೆಲಿಂಡಾ ಬೆನ್ಸಿಕ್‌ ಅವರನ್ನು 6-4, 6-2 ನೇರ ಸೆಟ್‌ಗಳಿಂದ ಸೋಲಿಸಿದರು. ಕೆರ್ಬರ್‌ ಇಂಡಿಯನ್‌ ವೆಲ್ಸ್‌ ಫೈನಲ್‌ ಪ್ರವೇಶಿಸಿದ್ದು ಇದೇ ಮೊದಲು.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.