Cricket: ಕೇವಲ 33 ಎಸೆತಗಳಲ್ಲಿ ಶತಕ ಬಾರಿಸಿ T20Iಯಲ್ಲಿ ವಿಶ್ವ ದಾಖಲೆ ಬರೆದ ನಮೀಬಿಯಾ ಆಟಗಾರ


Team Udayavani, Feb 27, 2024, 4:54 PM IST

Cricket: ಕೇವಲ 33 ಎಸೆತಗಳಲ್ಲಿ ಶತಕ ಬಾರಿಸಿ T20Iಯಲ್ಲಿ ವಿಶ್ವ ದಾಖಲೆ ಬರೆದ ನಮೀಬಿಯಾ ಆಟಗಾರ

ಕಠ್ಮಂಡು: ನೇಪಾಳ ವಿರುದ್ಧದ ಅಂತಾರಾಷ್ಟ್ರೀಯ ಟಿ-20 ಪಂದ್ಯದಲ್ಲಿ ನಮೀಬಿಯಾ ತಂಡದ 22 ವರ್ಷದ ಯುವ ಆಟಗಾರನೊಬ್ಬ ಅತ್ಯಂತ ವೇಗದ ಶತಕವನ್ನು ಬಾರಿಸುವ ಮೂಲಕ ವಿಶ್ವ ದಾಖಲೆಯನ್ನು ಬರೆದಿದ್ದಾನೆ.

ನಮೀಬಿಯಾದ ಜಾನ್ ನಿಕೋಲ್ ಲಾಫ್ಟಿ-ಈಟನ್ ನೇಪಾಳ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ವೇಗದ ಶತಕವನ್ನು ಬಾರಿಸಿ ಹೊಸ ದಾಖಲೆಯನ್ನು ಬರೆದಿದ್ದಾರೆ.

ನೇಪಾಳ- ನಮೀಬಿಯಾ ಹಾಗೂ ನೆದರ್ಲ್ಯಾಂಡ್ಸ್ ನಡುವಿನ ತ್ರಿಕೋನ ಟಿ-20 ಸರಣಿಯ ಮೊದಲ ಪಂದ್ಯ ಮಂಗಳವಾರ(ಫೆ.27 ರಂದು) ನೇಪಾಳ – ನಮೀಬಿಯಾ ನಡುವೆ ನಡೆಯಿತು.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ನಮೀಬಿಯಾ 20 ಓವರ್‌ ಗಳಲ್ಲಿ 206/4 ಗಳಿಸಿತು. ಆರಂಭಿಕರಾದ ಮೈಕಲ್ ವ್ಯಾನ್ ಲಿಂಗೆನ್ 19 ಎಸೆತಗಳಲ್ಲಿ 20 ರನ್‌ ಮತ್ತು ಮಲನ್ ಕ್ರುಗರ್ 48 ಎಸೆತಗಳಲ್ಲಿ 59 ರನ್‌ ಗಳಿಸಿದರು. 62 ಕ್ಕೆ 3 ವಿಕೆಟ್‌ ಕಳೆದುಕೊಂಡ ಬಳಿಕ ಕ್ರಿಸ್‌ ಗೆ ಬಂದ ನಿಕೋಲ್ ಲಾಫ್ಟಿ-ಈಟನ್ 11 ಬೌಂಡರಿ, 8 ಸಿಕ್ಸರ್‌ ಬಾರಿಸಿ 33 ಎಸೆತಗಳಲ್ಲಿ ಶತಕವನ್ನು ಸಿಡಿಸಿದರು. 101 ರನ್‌ ಗಳಿಸಿ ಅಬಿನಾಶ್ ಬೋಹರಾ ಎಸೆತದಲ್ಲಿ ಗುಲ್ಸನ್ ಝಾ ಬಿ ಅವರಿಗೆ ಕ್ಯಾಚ್‌ ಕೊಟ್ಟು ಕೊನೆಯ ಓವರ್‌ ನಲ್ಲಿ ಔಟಾದರು.

ನೇಪಾಳ ವಿರುದ್ಧ ಶತಕ ಬಾರಿಸಿದ ನಂತರ ಲಾಫ್ಟಿ-ಈಟನ್ ಈಗ ವೇಗದ T20I ಶತಕದೊಂದಿಗೆ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಈ ಹಿಂದೆ 2023 ರಲ್ಲಿ ಏಷ್ಯನ್ ಗೇಮ್ಸ್‌ನಲ್ಲಿ ಮಂಗೋಲಿಯಾ ವಿರುದ್ಧ 34 ಎಸೆತಗಳಲ್ಲಿ ನೇಪಾಳದ ಕುಶಾಲ್ ಮಲ್ಲ ಶತಕವನ್ನು ಬಾರಿಸಿ ದಾಖಲೆ ಬರೆದಿದ್ದರು.

ಈ ಶತಕವನ್ನು ಬಾರಿಸುವ ವೇಳೆ ನೇಪಾಳದ ಕುಶಾಲ್‌ ಮಲ್ಲ ಅವರು ಮೈದಾನದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದರು.

ಈ ಹಿಂದೆ ದಕ್ಷಿಣ ಆಫ್ರಿಕಾದ ಡೇವಿಡ್‌ ಮಿಲ್ಲರ್‌ 2017 ರ ಅಕ್ಟೋಬರ್ ನಲ್ಲಿ ಪಾಚೆಫ್‌ಸ್ಟ್ರೂಮ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ 36 ಎಸೆತಗಳಲ್ಲಿ 101 ರನ್ ಬಾರಿಸಿದ್ದರು. 2017ರ ಡಿಸೆಂಬರ್‌ನಲ್ಲಿ ಇಂದೋರ್‌ನಲ್ಲಿ ಶ್ರೀಲಂಕಾ ವಿರುದ್ಧ ರೋಹಿತ್‌ ಶರ್ಮಾ 43 ಎಸೆತಗಳಲ್ಲಿ 118 ರನ್ ಗಳಿಸಿದ್ದರು. ಜೆಕ್ ಗಣರಾಜ್ಯದ ಸುದೇಶ್ ವಿಕ್ರಮಶೇಖರ ಅವರು ಆಗಸ್ಟ್ 2019 ರಲ್ಲಿ ಇಲ್ಫೋವ್ ಕೌಂಟಿಯಲ್ಲಿ ನಡೆದ ಕಾಂಟಿನೆಂಟಲ್ ಕಪ್‌ನಲ್ಲಿ ಟರ್ಕಿ ವಿರುದ್ಧ 36 ಎಸೆತಗಳಲ್ಲಿ 104 ರನ್‌ ಗಳಿಸಿದ್ದರು.

 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.