ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ


Team Udayavani, May 23, 2022, 10:30 PM IST

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

ಪ್ಯಾರಿಸ್‌: ಮಾಜಿ ನಂಬರ್‌ ವನ್‌ ಜಪಾನಿನ ನವೋಮಿ ಒಸಾಕಾ ಮಾತ್ರವಲ್ಲದೇ ಹಾಲಿ ಚಾಂಪಿಯನ್‌ ಮತ್ತು ದ್ವಿತೀಯ ಶ್ರೇಯಾಂಕದ ಕ್ರೆಜಿಸಿಕೋವಾ ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌ ಕೂಟದ ಮೊದಲ ಸುತ್ತಿನಲ್ಲಿಯೇ ಸೋಲನ್ನು ಕಂಡಿದ್ದಾರೆ.

ಬಹಳಷ್ಟು ಅನಗತ್ಯ ತಪ್ಪುಗಳನ್ನು ಮಾಡಿದ ಒಸಾಕಾ ಅವರನ್ನು ಅಮೆರಿಕದ ಅಮಂಡಾ ಅನಿಸಿಮೋವಾ 7-5, 6-4 ಸೆಟ್‌ಗಳಿಂದ ಸುಲಭವಾಗಿ ಮಣಿಸಿದರು. ಅನಿಸಿಕೋವಾ 2019ರಲ್ಲಿ ಇಲ್ಲಿ ಸೆಮಿಫೈನಲ್‌ ತಲುಪಿದ್ದರು.
ಒಸಾಕಾ ಕಳೆದ ವರ್ಷ ಕಡ್ಡಾಯ ಮಾಧ್ಯಮ ಬದ್ಧತೆಯ ಗೌರವ ಪಾಲಿಸಲು ನಿರಾಕರಿಸಿದ್ದರಿಂದ ಅವರಿಗೆ ದಂಡ ವಿಧಿಸಲಾಗಿತಲ್ಲದೇ ಆ ವರ್ಷ ಫ್ರೆಂಚ್‌ ಓಪನ್‌ ಆಡದಂತೆ ನಿಷೇಧ ಹೇರಲಾಗಿತ್ತು. ಖನ್ನತೆಯಿಂದ ಬಳಲುತ್ತಿದ್ದ ಕಾರಣ ಮಾಧ್ಯಮದ ಜತೆ ಮಾತನಾಡಲು ಸಾಧ್ಯವಾಗಿರಲಿಲ್ಲ ಎಂದು ಅವರು ಆಬಳಿಕ ತಿಳಿಸಿದ್ದರು.

ಹಾಲಿ ಚಾಂಪಿಯನ್‌ಗೆ ಸೋಲು
ಹಾಲಿ ಚಾಂಪಿಯನ್‌ ಆಗಿರುವ ಬಾಬೊìರಾ ಕ್ರೆಜಿಸಿಕೋವಾ ಮೂರು ಸೆಟ್‌ಗಳ ಹೋರಾಟದಲ್ಲಿ ಸೋತು ಹೊರಬಿದ್ದಿದ್ದಾರೆ. ಅವರು ಫ್ರಾನ್ಸ್‌ನ ಹದಿಹರೆಯದ ಡಿಯಾನೆ ಪೆರ್ರಿ ಅವರ ಕೈಯಲ್ಲಿ 1-6, 6-2, 6-3 ಸೆಟ್‌ಗಳಿಂದ ಸೋಲನ್ನು ಕಂಡರು. ಮೊಣಕೈ ಗಾಯದಿಂದಾಗಿ ಅವರು ಕಳೆದ ಫೆಬ್ರವರಿ ಬಳಿಕ ಇಷ್ಟರವರೆಗೆ ಟೆನಿಸ್‌ನಿಂದ ದೂರ ಉಳಿದಿದ್ದರು.

ಫ್ರೆಂಚ್‌ ಓಪನ್‌ ಫೇವರಿಟ್‌ ಇಗಾ ಸ್ವಿಯಾಟೆಕ್‌ ಸುಲಭ ಗೆಲುವಿನೊಂದಿಗೆ ದ್ವಿತೀಯ ಸುತ್ತಿಗೇರಿದ್ದಾರೆ. ಉಕ್ರೈನಿನ ಅರ್ಹತಾ ಆಟಗಾರ್ತಿ ಲೆಸಿಯಾ ಟಿಸುರೆಂಕೊ ಅವರನ್ನು 6-2, 6-0 ಸೆಟ್‌ಗಳಿಂದ ಉರುಳಿಸಿದ ಅವರು ತನ್ನ ಸತತ ಗೆಲುವಿನ ಅಭಿಯಾನವನ್ನು 29 ಪಂದ್ಯಗಳಿಗೆ ವಿಸ್ತರಿಸಿದರು.

ವಿಶ್ವದ ನಂಬರ್‌ ವನ್‌ ಆಟಗಾರ್ತಿ ಯಾಗಿರುವ ಸ್ವಿಯಾಟೆಕ್‌ ಕಳೆದ ಐದು ಕೂಟಗಳಲ್ಲಿ ಪ್ರಶಸ್ತಿ ಜಯಿಸಿದ್ದಲ್ಲದೇ ಮೂರನೇ ಪ್ರಯತ್ನದಲ್ಲಿ ಎರಡನೇ ಫ್ರೆಂಚ್‌ ಓಪನ್‌ ಗೆಲ್ಲುವ ಗುರಿ ಇಟ್ಟುಕೊಂಡಿದ್ದಾರೆ. ಕಳೆದ ಫೆಬ್ರವರಿಯಿಂದ ಅಜೇಯ ಸಾಧನೆ ಮುಂದುವರಿಸಿರುವ ಸ್ವಿಯಾಟೆಕ್‌ ಡಬ್ಲ್ಯುಟಿಎ ಟೂರ್‌ನಲ್ಲಿ ಎರಡನೇ ದೀರ್ಘ‌ ಪಂದ್ಯಗಳ ಗೆಲುವಿನ ದಾಖಲೆಯನ್ನು ಹೊಂದಿದ್ದಾರೆ. 2013ರಲ್ಲಿ ಸತತ 34 ಪಂದ್ಯ ಗೆದ್ದಿರುವ ಸೆರೆನಾ ವಿಲಿಯಮ್ಸ್‌ ಮೊದಲ ಸ್ಥಾನದಲ್ಲಿದ್ದಾರೆ.

ಡೊಮಿನಿಕ್‌ ಥೀಮ್‌ಗೆ ಸೋಲು
ಎರಡು ಬಾರಿಯ ರನ್ನರ್‌ ಅಪ್‌ ಡೊಮಿನಿಕ್‌ ಥೀಮ್‌ ಅವರು ಬೊಲಿವಿಯಾದ ಹುಗೊ ಡೆಲ್ಲೀನ್‌ ಅವರ ಕೈಯಲ್ಲಿ 6-3, 6-2, 6-4 ಸೆಟ್‌ಗಳಿಂದ ಸೋಲನ್ನು ಕಂಡಿದ್ದಾರೆ. 2020ರ ಯುಎಸ್‌ ಚಾಂಪಿಯನ್‌ ಆಗಿದ್ದ ಥೀಮ್‌ ಗಾಯದ ಸಮಸ್ಯೆಯಿಂದಾಗಿ ಹಲವು ಪಂದ್ಯಗಳಲ್ಲಿ ಸೋಲನ್ನು ಕಂಡಿದ್ದಾರೆ.

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.