ಕ್ರಿಕೆಟ್‌ ತಂಡದ ನಾಯಕತ್ವ ವಿಚಾರದಲ್ಲಿ ಅನಾವಶ್ಯಕ ವಿವಾದ ಸಲ್ಲದು


Team Udayavani, Jan 19, 2022, 6:00 AM IST

ಕ್ರಿಕೆಟ್‌ ತಂಡದ ನಾಯಕತ್ವ ವಿಚಾರದಲ್ಲಿ ಅನಾವಶ್ಯಕ ವಿವಾದ ಸಲ್ಲದು

ಭಾರತೀಯ ಕ್ರಿಕೆಟ್‌ ಮೂರು ವಿಭಾಗದ ನಾಯಕತ್ವ ವಿಚಾರದಲ್ಲಿ ಅನಾವಶ್ಯಕವಾಗಿ ವಿವಾದಗಳು, ಚರ್ಚೆಗಳು ನಡೆಯುತ್ತಿವೆ. ಮಹೇಂದ್ರ ಸಿಂಗ್‌ ಧೋನಿ ಅವರ ಕಡೆಯಿಂದ ವಿರಾಟ್‌ ಕೊಹ್ಲಿ ಅವರಿಗೆ ಕ್ರಿಕೆಟ್‌ ತಂಡದ ನಾಯಕತ್ವ ಯಾವುದೇ ವಿವಾದಗಳು ಇಲ್ಲದೇ ಬಂದಿತ್ತು. ಆದರೆ ಈಗ ವಿರಾಟ್‌ ಕೊಹ್ಲಿ ಅವರಿಂದ ಉಳಿದವರಿಗೆ ನಾಯಕತ್ವ ವಹಿಸುವ ವಿಚಾರದಲ್ಲಿ ಮಾತ್ರ ಕ್ರಿಕೆಟ್‌ ಅಭಿಮಾನಿಗಳಿಗೆ ಬೇಸರವಾಗುವ ರೀತಿಯಲ್ಲಿ ವರ್ತಿಸಲಾಗುತ್ತಿದೆ.

ಏಕದಿನ ಮತ್ತು ಟೆಸ್ಟ್‌ ಪಂದ್ಯಗಳಲ್ಲಿ ವಿರಾಟ್‌ ಕೊಹ್ಲಿ ಅವರ ಸಾಧನೆ ಅದ್ಭುತವಾಗಿದೆ. ಆದರೆ ಟಿ20ಯಲ್ಲಿ ಮಾತ್ರ ಅವರು ವಿಫ‌ಲರಾಗುತ್ತಿದ್ದಾರೆ ಎಂಬ ಆರೋಪಗಳು ಮೊದಲಿನಿಂದಲೂ ಕೇಳಿಬರುತ್ತಿದ್ದವು. ಅಲ್ಲದೆ ಕೊಹ್ಲಿ ನಾಯಕತ್ವದ ಬೆಂಗಳೂರು ರಾಯಲ್‌ ಚಾಲೆಂಜರ್ಸ್‌ ತಂಡ ಒಂದು ಬಾರಿಯೂ ಪ್ರಶಸ್ತಿ ಗೆಲ್ಲದೆ ನಿರಾಸೆ ಮೂಡಿಸಿದೆ. ಜತೆಗೆ ರೋಹಿತ್‌ ಶರ್ಮ ನಾಯಕತ್ವದಲ್ಲೇ ಮುಂಬೈ ಇಂಡಿಯನ್ಸ್‌ ತಂಡ 5 ಬಾರಿ ಐಪಿಎಲ್‌ ಪ್ರಶಸ್ತಿ ಎತ್ತಿಹಿಡಿದಿದೆ. ಹೀಗಾಗಿ ಟಿ20 ತಂಡದ ನಾಯಕತ್ವವನ್ನು ಕೊಹ್ಲಿಯವರಿಂದ ಪಡೆದು, ರೋಹಿತ್‌ ಶರ್ಮ ಅವರಿಗೆ ನೀಡಬೇಕು ಎಂಬ ಒತ್ತಾಯಗಳು ಕೇಳಿಬಂದಿದ್ದವು. ಈ ಎಲ್ಲ ಬೆಳವಣಿಗೆಗಳ ಅನಂತರ ವಿರಾಟ್‌ ಕೊಹ್ಲಿ ಅವರು ಟಿ20 ವಿಶ್ವಕಪ್‌ಗ್ೂ ಮುನ್ನವೇ ಟಿ20 ತಂಡದ ನಾಯಕತ್ವದಿಂದ ದೂರ ಸರಿಯುವುದಾಗಿ ಪ್ರಕಟಿಸಿದರು.

ಆದರೆ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತಂಡವನ್ನು ಪ್ರಕಟಿಸುವ ವೇಳೆ ಭಾರತೀಯ ಕ್ರಿಕೆಟ್‌ ತಂಡದ ಆಯ್ಕೆದಾರರು ವಿರಾಟ್‌ ಕೊಹ್ಲಿ ಅವರನ್ನು ಏಕದಿನ ನಾಯಕತ್ವದಿಂದ ದಿಢೀರನೆ ತೆಗೆದುಹಾಕಿ, ರೋಹಿತ್‌ ಶರ್ಮ ಅವರಿಗೆ ವಹಿಸಿದರು. ಇದು ವಿರಾಟ್‌ ಕೊಹ್ಲಿ ಅವರ ಬೇಸರಕ್ಕೂ ಕಾರಣವಾಗಿತ್ತು. ಆಗ ವೈಟ್‌ಬಾಲ್‌ ಕ್ರಿಕೆಟ್‌(ಟಿ20-ಏಕದಿನ ಕ್ರಿಕೆಟ್‌)ನಲ್ಲಿ ಒಬ್ಬರೇ ನಾಯಕರಿರಬೇಕು. ಟೆಸ್ಟ್‌ಗೆ ಬೇರೆಯವರಿದ್ದರೂ ಆಗುತ್ತದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಅವರು ಹೇಳಿದ್ದರು. ಅಲ್ಲದೆ, ಈ ಬಗ್ಗೆ ಕೊಹ್ಲಿ ಅವರ ಜತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗಿತ್ತು ಎಂದಿದ್ದರು. ಇದನ್ನು ಸ್ವತಃ ಕೊಹ್ಲಿ ಅವರೇ ತಳ್ಳಿಹಾಕಿ, ಇಂಥ ಚರ್ಚೆಯೇ ನಡೆದಿರಲಿಲ್ಲ ಎಂದಿದ್ದರು.

ಇದಾದ ಬಳಿಕ ಈಗಷ್ಟೇ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿ ಮುಗಿದಿದ್ದು, ಇದರಲ್ಲಿ ಭಾರತ 2-1 ಅಂತರದಲ್ಲಿ ಸೋತಿದೆ. ಈ ಸೋಲನ್ನು ನೇರವಾಗಿ ವಿರಾಟ್‌ ಕೊಹ್ಲಿ ಅವರ ತಲೆಗೇ ಕಟ್ಟಲಾಗಿದೆ. ಇದರಿಂದ ಬೇಸತ್ತ ಕೊಹ್ಲಿ ಟೆಸ್ಟ್‌ ನಾಯಕತ್ವವನ್ನೂ ಬಿಟ್ಟಿದ್ದಾರೆ. ಎಲ್ಲೋ ಒಂದು ಕಡೆ ತಮ್ಮ ಪ್ರತಿಯೊಂದು ನಡೆಯನ್ನೂ ಟೀಕಿಸಿದ್ದರಿಂದ ಅವರು ಈ ನಿರ್ಧಾರಕ್ಕೆ ಮುಂದಾಗಿದ್ದಾರೆ ಎಂಬ ಮಾತುಗಳಿವೆ.

ಹಿಂದೊಮ್ಮೆ ಮಹೇಂದ್ರ ಸಿಂಗ್‌ ಧೋನಿ ಅವರು ಮೂರು ತಂಡಗಳಿಗೂ ಒಬ್ಬನೇ ನಾಯಕನಿರಬೇಕು. ಒಂದೊಂದಕ್ಕೂ ಒಬ್ಬೊಬ್ಬ ನಾಯಕನಿರುವುದು ಒಳ್ಳೆಯದಲ್ಲ ಎಂದು ಹೇಳಿದ್ದರು. ಈ ಕಾರಣಕ್ಕಾಗಿಯೇ ಅವರು ಏಕಕಾಲದಲ್ಲೇ ಮೂರು ನಾಯಕತ್ವ ಬಿಟ್ಟು, ಕೊಹ್ಲಿ ಅವರಿಗೆ ವಹಿಸಿದ್ದರು. ಈಗ ಹೊಸದಾಗಿ ಏಕದಿನ-ಟಿ20ಗೆ ಒಬ್ಬರು,

ಟೆಸ್ಟ್‌ಗೆ ಒಬ್ಬರನ್ನು ನಾಯಕರನ್ನಾಗಿ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಆದರೆ ಆಯ್ಕೆಯ ವಿಚಾರದಲ್ಲಿ ಮಾತ್ರ ಕೆಲವು ವಿವಾದಗಳನ್ನೂ ಎಳೆದು ತರಲಾಗುತ್ತಿದೆ. ಸಾರ್ವಜನಿಕವಾಗಿ ಈ ಎಲ್ಲ ಚರ್ಚೆಗಳನ್ನು ಬದಿಗಿಟ್ಟು, ಸಮರ್ಥ ನಾಯಕನನ್ನು ಹುಡುಕುವ ಹೊಣೆಗಾರಿಕೆ ಬಿಸಿಸಿಐ ಮುಂದಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.