ಪಂತ್ ವಿಶ್ವಕಪ್ ಆಡಲು ಆಶೀಷ್ ನೆಹ್ರಾ ನೀಡುವ ಐದು ಕಾರಣಗಳು!


Team Udayavani, Feb 15, 2019, 10:35 AM IST

nehra.jpg

ಹೊಸದೆಹಲಿ: ಕ್ರಿಕೆಟ್ ವಿಶ್ವಕಪ್ ಗೆ ಕ್ಷಣಗಣನೆ ಆರಂಭವಾಗಿದ್ದು, ಎಲ್ಲಾ ದೇಶಗಳು ತಮ್ಮ ತಂಡವನ್ನು ಅಂತಿಮಗೊಳಿಸುವ ತಯಾರಿಯಲ್ಲಿವೆ. ಭಾರತ ತಂಡ ಕೂಡಾ ತನ್ನ ತಂಡವನ್ನು ಬಹುತೇಕ ಅಂತಿಮಗೊಳಿಸಿದ್ದು, ಕೆಲವು ಸ್ಥಾನಗಳ ಆಯ್ಕೆ ಮಾತ್ರ ಬಾಕಿ ಇದೆ. ಪ್ರಮುಖ ಕೀಪರ್ ಆಗಿ ಮಹೇಂದ್ರ ಸಿಂಗ್ ಧೋನಿ ತಂಡದಲ್ಲಿದ್ದು ಇನ್ನೊಬ್ಬರಿಗಾಗಿ ದಿನೇಶ್ ಕಾರ್ತಿಕ್ ಮತ್ತು ರಿಷಭ್ ಪಂತ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಮಾಜಿ ವೇಗಿ ಆಶೀಷ್ ನೆಹ್ರಾ ಈಗ ರಿಷಭ್ ಪಂತ್ ಗೆ ಮಣೆ ಹಾಕಿದ್ದು, ಪಂತ್ ಆಯ್ಕೆಗೆ ಐದು ಕಾರಣಗಳನ್ನು ನೀಡಿದ್ದಾರೆ.

2011ರ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿರುವ ಆಶೀಷ್ ನೆಹ್ರಾ, ರಿಷಭ್ ಪಂತ್ ರ ಆಟವನ್ನು ಡೆಲ್ಲಿ ತಂಡದಲ್ಲಿ ಕೂಡಾ ಗಮನಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ರಿಷಭ್ ಬ್ಯಾಟ್ ಬೀಸುವ ರೀತಿಯಿಂದ ಎಲ್ಲರೂ ಪ್ರಭಾವಿತರಾಗಿದ್ದು ವಿಶ್ವಕಪ್ ತಂಡದಲ್ಲಿ ಆಡಬೇಕೆಂದು ಆಶಿಸುತ್ತಿದ್ದಾರೆ. 

ಪಂತ್ ಆಯ್ಕೆಗೆ ನೆಹ್ರಾ ನೀಡುವ ಐದು ಕಾರಣಗಳು
1.ಭಾರತದ ಬ್ಯಾಟಿಂಗ್ ಕ್ರಮಾಂಕ ಗಮನಿಸುವುದಾದರೆ ಆರಂಭಿಕ ಶಿಖರ್ ಧವನ್ ಹೊರತುಪಡಿಸಿ ನಂತರದ ಏಳು ಬ್ಯಾಟ್ಸಮನ್ ಗಳು ಬಲಗೈ ಆಟಗಾರರು. ಹಾಗಾಗಿ ಎಡಗೈ ಆಟಗಾರನಾಗಿರುವ ಪಂತ್ ಸೇರ್ಪಡೆಯಿಂದ ಬಲಗೈ – ಎಡಗೈ ಸಂಯೋಜನೆ ಉತ್ತಮ ಕೆಲಸ ಮಾಡಬಹುದು. 

2. ಪಂತ್ ಯಾವ ಕ್ರಮಾಂಕದಲ್ಲೂ ಆಡಬಲ್ಲ ಆಟಗಾರ. ಆರಂಭಿಕ ಆಟಗಾರನಾಗಿ ಆಡುವ ಕ್ಷಮತೆಯನ್ನೂ ಹೊಂದಿದ್ದಾರೆ. ಹಾಗಾಗಿ ನಾಯಕ ಕೊಹ್ಲಿಗೆ ಆಡುವ ಬಳಗ ಆಯ್ಕೆ ಮಾಡುವಾಗ ಆಟಗಾರರ ಆಯ್ಕೆ ಸುಲಭವಾಗಬಹುದು.

3. ಪಂತ್ ಹೊಡೆಯುವ ಸಿಕ್ಸರ್ ಗಳು ಅವರ ಆಯ್ಕೆಗೆ ನೆಹ್ರಾ ನೀಡುವ ಮೂರನೇ ಕಾರಣ. ಸದ್ಯ ತಂಡದಲ್ಲಿ ರೋಹಿತ್ ಶರ್ಮಾ ಬಿಟ್ಟರೆ ಪಂತ್ ಮಾತ್ರ ಅನಾಯಾಸವಾಗಿ ದೊಡ್ಡ ಸಿಕ್ಸ್ ಗಳನ್ನು ಸಿಡಿಸುವ ಕ್ಷಮತೆ ಹೊಂದಿದ್ದಾರೆ. ಹಾಗಾಗಿ ಪಂತ್ ಆಯ್ಕೆ ಸೂಕ್ತ.

4. ಭಾರತ ತಂಡದಲ್ಲಿ ಸದ್ಯ ಏಕಾಂಗಿಯಾಗಿ ಪಂದ್ಯ ಗೆಲ್ಲಿಸಿಕೊಡಬಲ್ಲ ಮೂವರು ಆಟಗಾರರು ಇದ್ದಾರೆ. ಅವರೆಂದರೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್ಪ್ರೀತ್ ಬುಮ್ರಾ. ಈ ಪಟ್ಟಿಗೆ ರಿಷಭ್ ಪಂತ್ ರನ್ನು ಸೇರಿಸಬಹುದು. ಯಾಕೆಂದರೆ ಪಂತ್ ತಂಡಕ್ಕೆ ಏಕಾಂಗಿಯಾಗಿ ಪಂದ್ಯ ಗೆಲ್ಲಿಸುಕೊಡುವ ಕ್ಷಮತೆ ಹೊಂದಿದ್ದಾರೆ ಎನ್ನುತ್ತಾರೆ ಮಾಜಿ ವೇಗಿ ನೆಹ್ರಾ.


5. ಅಂಬಾಟಿ ರಾಯುಡು, ಕೆದಾರ್ ಜಾಧವ್ ಮತ್ತು ದಿನೇಶ್ ಕಾರ್ತಿಕ್ ಉತ್ತಮ ಆಟಗಾರರು. ಆದರೆ ಇವರೆಲ್ಲರ ಆಟದ ವೈಖರಿ ಒಂದೇ ರೀತಿಯದ್ದು. ಪಂತ್ ತಂಡದಲ್ಲಿ ಸ್ಥಿರ ಪ್ರದರ್ಶನ ನೀಡುವ  ಸಾಮರ್ಥ್ಯ ಹೊಂದಿದ್ದಾರೆ ಹಾಗಾಗಿ ವಿಶ್ವಕಪ್ ತಂಡದಲ್ಲಿ ರಿಷಭ್ ಪಂತ್ ಆಡಬೇಕು ಎಂದು ನೆಹ್ರಾ ಅಭಿಪ್ರಾಯಪಡುತ್ತಾರೆ. 

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.