ಪರಿಪೂರ್ಣ ಯಾರ್ಕರ್ ಎಸೆಯಲು ನೆಟ್ ಅಭ್ಯಾಸ ಸಹಕಾರಿ: ಅರ್ಷದೀಪ್ ಸಿಂಗ್
Team Udayavani, May 24, 2022, 5:40 PM IST
ಮುಂಬಯಿ: ಚೊಚ್ಚಲ ಬಾರಿ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಕ್ಕೆ ರೋಮಾಂಚನಗೊಂಡಿರುವ ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರು ಶಕ್ತಿಶಾಲಿಯಾಗಿ ಹೊಡೆಯುವ ಪಂಜಾಬ್ ಕಿಂಗ್ಸ್ ತಂಡದ ಬ್ಯಾಟ್ಸ್ಮನ್ಗಳಿಗೆ ನೆಟ್ನಲ್ಲಿ ಬೌಲಿಂಗ್ ನಡೆಸಿದ್ದರಿಂದ ಪರ್ಫೆಕ್ಟ್ ಯಾರ್ಕರ್ ಎಸೆಯಲು ನೆರವಾಯಿತು ಎಂದಿದ್ದಾರೆ.
ಈ ಐಪಿಎಲ್ ಋತುವಿನಲ್ಲಿ ಡೆತ್ ಓವರ್ಗಳಲ್ಲಿ ಅರ್ಷದೀಪ್ ಸಿಂಗ್ ಗಮನಾರ್ಹ ಬೌಲಿಂಗ್ ದಾಳಿ ಸಂಘಟಿಸಿ ಗಮನ ಸೆಳೆದಿದ್ದಾರೆ. 7.70 ಸರಾಸರಿಯಲ್ಲಿ ಅವರು 10 ವಿಕೆಟ್ ಕಿತ್ತ ಸಾಧನೆ ಮಾಡಿದ್ದಾರೆ.
ಯಾರ್ಕರ್ ಎಸೆತಗಳಿಂದ ಗಮನ ಸೆಳೆದ ಅವರು ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಭಾರತೀಯ ತಂಡಕ್ಕೆ ಆಯ್ಕೆಯಾಗಲು ಸಹಕಾರಿಯಾಯಿತು. ರವಿವಾರ ನಡೆದ ಸನ್ರೈಸರ್ ಹೈದರಾಬಾದ್ ವಿರುದ್ಧದ ಈ ಬಾರಿಯ ಐಪಿಎಲ್ನ ಕೊನೆಯ ಲೀಗ್ ಪಂದ್ಯದ ವೇಳೆ ಅರ್ಷದೀಪ್ ಅವರಿಗೆ ಭಾರತೀಯ ತಂಡಕ್ಕೆ ಆಯ್ಕೆಯಾದ ಸುದ್ದಿ ಸಿಕ್ಕಿದೆ. ಈ ಪಂದ್ಯದಲ್ಲಿ ಪಂಜಾಬ್ ಗೆಲುವು ಸಾಧಿಸಿ ಸಂಭ್ರಮಿಸಿತ್ತು.
ಕಳೆದ ವರ್ಷ ಶ್ರೀಲಂಕಾ ವಿರುದ್ಧದ ಸರಣಿ ವೇಳೆ ಯುವ ಆಟಗಾರ ಅರ್ಷದೀಪ್ ಅವರು ಭಾರತೀಯ ತಂಡಕ್ಕೆ ನೆಟ್ ಬೌಲರ್ ಆಗಿ ಕರ್ತವ್ಯ ಸಲ್ಲಿಸಿದ್ದರು.
ಪಂಜಾಬ್ ಕಿಂಗ್ಸ್ ತಂಡದ ಆಟಗಾರರಾದ ಜಾನಿ ಬೇರ್ಸ್ಟೋ, ಶಿಖರ್ ಧವನ್, ಲಿಯಮ್ ಲಿವಿಂಗ್ಸ್ಟೋನ್ ಅವರಿಗೆ ನೆಟ್ನಲ್ಲಿ ಬೌಲಿಂಗ್ ಮಾಡಿದ್ದರಿಂದ ಭಾರತೀಯ ತಂಡಕ್ಕೆ ಆಯ್ಕೆಯಾಗಲು ಸಾಧ್ಯವಾಯಿತು ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್
MUST WATCH
ಹೊಸ ಸೇರ್ಪಡೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ