ಆಸೀಸ್‌ ಕ್ರಿಕೆಟಿಗರ ನೆಟ್‌ ತಾಲೀಮ್‌


Team Udayavani, Feb 16, 2017, 3:45 AM IST

assis.jpg

ಮುಂಬಯಿ: ಟೀಮ್‌ ಇಂಡಿಯಾ ವಿರುದ್ಧದ ಟೆಸ್ಟ್‌ ಸರಣಿಗಾಗಿ ಪ್ರವಾಸಿ ಆಸ್ಟ್ರೇಲಿಯ ಆಟಗಾರರು ಬುಧವಾರ ಇಲ್ಲಿನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಕಠಿನ ತಾಲೀಮ್‌ನಲ್ಲಿ ತೊಡಗಿಸಿಕೊಂಡರು. ಹೆಚ್ಚಿನ ಆಟಗಾರರು ವಿಕೆಟ್‌ ನಡುವಣ ಓಟಕ್ಕೆ ಹೆಚ್ಚಿನ ಗಮನ ಹರಿಸಿದರು. 

ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಪಾಲ್ಗೊಳ್ಳಲು ಆಸ್ಟ್ರೇಲಿಯ ತಂಡ ಎರಡು ದಿನಗಳ ಹಿಂದೆ ಭಾರತಕ್ಕೆ ಆಗಮಿಸಿತ್ತು. ಸರಣಿಯ ಮೊದಲ ಟೆಸ್ಟ್‌ ಪುಣೆಯಲ್ಲಿ ಫೆ. 23ರಿಂದ ಆರಂಭವಾಗಲಿದೆ. ಪುಣೆಗೆ ತೆರಳುವ ಮೊದಲು ಆಸ್ಟ್ರೇಲಿಯ ತಂಡವು ಫೆ. 17ರಿಂಧ ಆರಂಭವಾಗುವ ತ್ರಿದಿನ ಅಭ್ಯಾಸ ಪಂದ್ಯದಲ್ಲಿ ಭಾರತ “ಎ’ ತಂಡವನ್ನು ಎದುರಿಸಲಿದೆ.

ಮೊದಲ ಅಭ್ಯಾಸ ಅವಧಿಯಲ್ಲಿ ಡೇವಿಡ್‌ ವಾರ್ನರ್‌, ನಾಯಕ ಸ್ಟೀವನ್‌ ಸ್ಮಿತ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌ ಮತ್ತು ಉಸ್ಮಾನ್‌ ಖ್ವಾಜ ಸಹಿತ ಹೆಚ್ಚಿನೆಲ್ಲ ಆಟಗಾರರು ನೆಟ್‌ನಲ್ಲಿ ಅಭ್ಯಾಸ ನಡೆಸಿದರು. ವಿಕೆಟ್‌ ನಡುವಣ ಓಟಕ್ಕೂ ಹೆಚ್ಚಿನ ಗಮನ ಹರಿಸಿದರು. ಕೆಲವು ಆಟಗಾರರು ಸ್ಲಿಪ್‌ ಕ್ಯಾಚ್‌ ಅಭ್ಯಾಸದಲ್ಲಿ ತೊಡಗಿದರು.

ಸ್ಪಿನ್‌ಗೆ ನೆರವು ನೀಡುವ ಪಿಚ್‌ನಲ್ಲಿ ಭಾರತದ ಸ್ಪಿನ್‌ ದಾಳಿಯನ್ನು ಎದುರಿಸುವ ಸಲುವಾಗಿ ಆಸ್ಟ್ರೇಲಿಯ ಆಟಗಾರರು ಗಂಭೀರವಾಗಿ ತಾಲೀಮ್‌ನಲ್ಲಿ ಭಾಗವಹಿಸಿದರು. ತಂಡದ ಸ್ಪಿನ್‌ ಸಲಹೆಗಾರ ಶ್ರೀರಾಮ್‌ ಶ್ರೀಧರನ್‌ ಮತ್ತು ಸ್ಪಿನ್‌ ಬೌಲರ್‌ಗಳ ದಾಳಿಯನ್ನು ಹೆಚ್ಚಾಗಿ ಆಟಗಾರರು ಎದುರಿಸಿದರು. 

ವಿರಾಟ್‌ ಕೊಹ್ಲಿ ನೇತೃತ್ವದ ಟೀಮ್‌ ಇಂಡಿಯಾ ಸದ್ಯ ಪ್ರಚಂಡ ಫಾರ್ಮ್ನಲ್ಲಿದ್ದು ಸತತ 19 ಪಂದ್ಯಗಳಲ್ಲಿ ಗೆದ್ದ ಸಾಧನೆ ಮಾಡಿದೆ. 2012ರ ಬಳಿಕ ತಂಡವು ತವರಿನಲ್ಲಿ ಅಜೇಯ ಸಾಧನೆ ಹೊಂದಿದ್ದು ಇಂಗ್ಲೆಂಡ್‌, ನ್ಯೂಜಿಲ್ಯಾಂಡ್‌ ಮತ್ತು ಬಾಂಗ್ಲಾದೇಶವನ್ನು ಸೋಲಿಸಿದ ಹಿರಿಮೆ ಹೊಂದಿದೆ.

ಭಾರತದಲ್ಲಿ ಆಡುವುದು ನಮ್ಮ ಪಾಲಿನ ಬಲುದೊಡ್ಡ ಸವಾಲು. ಒಂದು ವೇಳೆ ನಾವು ಕಠಿನ ಪರಿಶ್ರಮ ವಹಿಸಿ ಸರಣಿ ಗೆದ್ದರೆ ಇದೊಂದು ಬಲುದೊಡ್ಡ ಸಾಧನೆಯಾಗಲಿದೆ ಮತ್ತು 10-120 ವರ್ಷಗಳ ಹಿಂದೆ ನಾವು ಮಾಡಿದ ಸಾಧನೆಯನ್ನು ಅವಲೋಕಿಸಬಹುದು. ಇದೊಂದು ಬಲುದೊಡ್ಡ ಸಂದರ್ಭ ಎಂದು ಸ್ಮಿತ್‌ ಹೇಳಿದ್ದಾರೆ.

ಬಾರ್ಡರ್‌-ಗಾವಸ್ಕರ್‌ ಟ್ರೋಫಿಯ ಮೊದಲ ಟೆಸ್ಟ್‌ ಪುಣೆಯ ಮಹಾರಾಷ್ಟ್ರ ಕ್ರಿಕೆಟ್‌ ಅಸೋಸಿಯೇಶಭ್‌ ಕ್ರೀಡಾಂಗಣದಲ್ಲಿ ಫೆ. 23ರಿಂದ 27ರ ವರೆಗೆ ನಡೆಯಲಿದೆ. ಇದು ಪುಣೆ ಆತಿಥ್ಯ ವಹಿಸಲಿರುವ ಮೊದಲ ಟೆಸ್ಟ್‌ ಆಗಿದೆ. ದ್ವಿತೀಯ ಟೆಸ್ಟ್‌ ಮಾ. 4ರಿಂದ 8ರ ವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜರಗಲಿದೆ.

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.