ಮೊದಲ ಟೆಸ್ಟ್‌ಗೆ ಟಿಮ್‌ ಸೌಥಿ ಇಲ್ಲ


Team Udayavani, Nov 30, 2017, 6:20 AM IST

Tim.jpg

ವೆಲ್ಲಿಂಗ್ಟನ್‌: ಪ್ರವಾಸಿ ವೆಸ್ಟ್‌ಇಂಡೀಸ್‌ ವಿರುದ್ಧ ಶುಕ್ರವಾರದಿಂದ ಆರಂಭವಾಗುವ ಮೊದಲ ಟೆಸ್ಟ್‌ ಪಂದ್ಯಕ್ಕೆ ನ್ಯೂಜಿಲ್ಯಾಂಡ್‌ ತಂಡದಿಂದ ಟಿಮ್‌ ಸೌಥಿ ಹೊರಗುಳಿಯಲಿದ್ದಾರೆ. ಅವರ ಬದಲಿಗೆ ಬ್ಯಾಟ್ಸ್‌ಮನ್‌ ಜಾರ್ಜ್‌ ವರ್ಕರ್‌ ಮತ್ತು ವೇಗಿ ಲಾಕೀ ಫೆರ್ಗ್ಯುಸನ್‌ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಸೌಥಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಅವರು ಕುಟುಂಬದ ಜತೆ ಇರುವುದು ಪ್ರಾಮುಖ್ಯವೆಂದು ಭಾವಿಸಿದ್ದೇವೆ. ಕ್ರಿಕೆಟ್‌ಗಿಂತ ಹೆಚ್ಚು  ಮುಖ್ಯ ಅದುವೇ ಆಗಿದೆ. ಹಾಗಾಗಿ ಟಿಮ್‌ ಅವರ ನಿರ್ಧಾರವನ್ನು ಬೆಂಬಲಿಸುತ್ತೇವೆ ಎಂದು ಆಯ್ಕೆಗಾರ ಗ್ಯಾವಿನ್‌ ಲಾರ್ಸೆನ್‌ ಹೇಳಿದ್ದಾರೆ. ಅವರ ಬದಲಿಗೆ ಜಾರ್ಜ್‌ ವರ್ಕರ್‌ ಟೆಸ್ಟ್‌ ತಂಡವನ್ನು ಸೇರಿಕೊಳ್ಳಲಿದ್ದಾರೆ. ಸೌಥಿ ಅವರ ಅನುಪಸ್ಥಿತಿಯ ಹಿನ್ನೆಲೆಯಲ್ಲಿ ಮಂಗಳವಾರವೇ ಫೆರ್ಗ್ಯುಸನ್‌ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು.

ಕಳೆದ ಕೆಲವು ಋತುಗಳಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ವರ್ಕರ್‌ ಅವರ ಪ್ರಚಂಡ ಫಾರ್ಮ್ ಅನ್ನು ಗಮನಿಸಿ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಈ ವರ್ಷ ಆಡಿದ 9 ಪ್ರಥಮ ದರ್ಜೆ ಪಂದ್ಯಗಳಲ್ಲಿ ವರ್ಕರ್‌ 49.13 ಸರಾಸರಿಯಂತೆ 737 ರನ್‌ ಗಳಿಸಿದ್ದಾರೆ. ಟೆಸ್ಟ್‌ನಲ್ಲಿ ಅವರಿನ್ನೂ ನ್ಯೂಜಿಲ್ಯಾಂಡ್‌ ತಂಡವನ್ನು ಪ್ರತಿನಿಧಿಸಿಲ್ಲ. ಆದರೆ ಆರು ಏಕದಿನ ಪಂದ್ಯಗಳನ್ನಾಡಿದ್ದಾರೆ. 2015ರಲ್ಲಿ ಜಿಂಬಾಬ್ವೆ ವಿರುದ್ದ ಟ್ವೆಂಟಿ20 ಪಂದ್ಯಕ್ಕೆ ಪಾದಾರ್ಪಣೆಗೈದಿದ್ದರು.

ಬಿಜೆ ವಾಟಿಗ್‌ ಬದಲಿಗೆ ತಂಡಕ್ಕೆ ಆಯ್ಕೆಯಾಗಿರುವ ವಿಕೆಟ್‌ಕೀಪರ್‌ ಟಾಮ್‌ ಬ್ಲಿಂಡೆಲ್‌ ಕೂಡ ಟೆಸ್ಟ್‌ಗೆ ಪಾದಾರ್ಪಣೆಗೈಯುವ ನಿರೀಕ್ಷೆಯಲ್ಲಿದ್ದಾರೆ.

ಗೆಲುವಿನ ನಿರೀಕ್ಷೆಯಲ್ಲಿ ವಿಂಡೀಸ್‌
ಕಳೆದ 22 ವರ್ಷಗಳ ಬಳಿಕ ನ್ಯೂಜಿಲ್ಯಾಂಡ್‌ ನೆಲದಲ್ಲಿ ಮೊದಲ ಗೆಲುವು ದಾಖಲಿಸುವ ನಿರೀಕ್ಷೆಯನ್ನು ವೆಸ್ಟ್‌ಇಂಡೀಸ್‌ ಇಟ್ಟುಕೊಂಡಿದೆ. ಟಿಮ್‌ ಸೌಥಿ ಮತ್ತು ವಾಟಿÉಂಗ್‌ ತಂಡದಲ್ಲಿ ಇಲ್ಲದಿರುವುದು ವಿಂಡೀಸ್‌ನ ಗೆಲುವಿನ ನಿರೀಕ್ಷೆಗೆ ಕಾರಣವಾಗಿದೆ. ಕೇನ್‌ ವಿಲಿಯಮ್ಸನ್‌ ಮತ್ತು ರಾಸ್‌ ಟಯ್ಲರ್‌ ಅವರನ್ನು ಬೇಗನೇ ಉರುಳಿಸಿದರೆ ನಾವು ಯಶಸ್ಸು ಸಾಧಿಸಬಹುದು ಎಂದು ವೆಸ್ಟ್‌ಇಂಡೀಸ್‌ ನಾಯಕ ಜಾಸನ್‌ ಹೋಲ್ಡರ್‌ ಹೇಳಿದ್ದಾರೆ.

ಎಂಟು ತಿಂಗಳ ಬ್ರೇಕ್‌ ಬಳಿಕ ನ್ಯೂಜಿಲ್ಯಾಂಡ್‌ ಟೆಸ್ಟ್‌ ಪಂದ್ಯಕ್ಕೆ ಮರಳುತ್ತಿದೆ. ಇದೇ ವೇಳೆ ಇಂಗ್ಲೆಂಡ್‌ ವಿರುದ್ಧ 2-1 ಅಂತರದ ಸರಣಿ ಸೋಲು ಮತ್ತು ಜಿಂಬಾಬ್ವೆ ವಿರುದ್ಧ 1-0 ಗೆಲುವಿನ ಬಳಿಕ ವೆಸ್ಟ್‌ಇಂಡೀಸ್‌ ಇಲ್ಲಿಗೆ ಆಗಮಿಸಿದ್ದು ಗೆಲುವಿನ ಉತ್ಸಾಹದಲ್ಲಿದೆ.

1995ರ ಫೆಬ್ರವರಿ ಬಳಿಕ ನ್ಯೂಜಿಲ್ಯಾಂಡ್‌ ವಿರುದ್ಧ ವೆಸ್ಟ್‌ಇಂಡೀಸ್‌ ಗೆಲುವು ದಾಖಲಿಸಿಲ್ಲ. 1995ರಲ್ಲಿ ವೆಸ್ಟ್‌ಇಂಡೀಸ್‌ ಬಾಸಿನ್‌ ರಿಸರ್ವ್‌ನಲ್ಲಿ ನಡೆದ ಪಂದ್ಯದಲ್ಲಿ ಇನ್ನಿಂಗ್ಸ್‌ ಮತ್ತು 322 ರನ್ನುಗಳಿಂದ ನ್ಯೂಜಿಲ್ಯಾಂಡ್‌ ತಂಡವನ್ನು ಸೋಲಿಸಿತ್ತು. ಬ್ರ್ಯಾನ್‌ ಲಾರಾ (147) ಮತ್ತು  ಜಿಮ್ಮಿ ಆ್ಯಡಮ್ಸ್‌ (151) ಅವರ ಸೊಗಸಾದ ಶತಕದಿಂದಾಗಿ ವೆಸ್ಟ್‌ಇಂಡೀಸ್‌ 5 ವಿಕೆಟಿಗೆ 660 ರನ್‌ ಪೇರಿಸಿ ಮೊದ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿಕೊಂಡಿತ್ತು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.