ಕೇನ್‌ ವಿಲಿಯಮ್ಸನ್‌, ಟೇಲರ್‌ ಶತಕ: ನ್ಯೂಜಿಲ್ಯಾಂಡಿಗೆ 1-0 ಸರಣಿ ಗೆಲುವು 


Team Udayavani, Dec 3, 2019, 11:45 PM IST

newzeland

ಹ್ಯಾಮಿಲ್ಟನ್‌: ನಾಯಕ ಕೇನ್‌ ವಿಲಿಯಮ್ಸನ್‌ (ಅಜೇಯ 104), ರಾಸ್‌ ಟೇಲರ್‌ (ಅಜೇಯ 105) ಅವರ ವೈಭವದ ಶತಕದಾಟದ ನೆರವಿನಿಂದ ಪ್ರವಾಸಿ ಇಂಗ್ಲೆಂಡ್‌ ಎದುರಿನ ಹ್ಯಾಮಿಲ್ಟನ್‌ ಟೆಸ್ಟ್‌ ಪಂದ್ಯ ಡ್ರಾದಲ್ಲಿ ಅಂತ್ಯಕಂಡಿದೆ. ಈ ಫ‌ಲಿತಾಂಶದಿಂದಾಗಿ ನ್ಯೂಜಿಲ್ಯಾಂಡ್‌ ತಂಡವು ಇಂಗ್ಲೆಂಡ್‌ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್‌ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ.

ನಾಲ್ಕನೇ ದಿನದಾಟಕ್ಕೆ 96 ರನ್ನಿಗೆ 2 ವಿಕೆಟ್‌ ಕಳೆದುಕೊಂಡಿದ್ದ ಕಿವೀಸ್‌ ಅಂತಿಮ ದಿನ ಪ್ರಚಂಡ ಬ್ಯಾಟಿಂಗ್‌ ನಡೆಸಿತು. ಯಾವುದೇ ವಿಕೆಟ್‌ ಕಳೆದು ಕೊಳ್ಳದೆ 241ರನ್‌ ಗಳಿಸಿದ ವೇಳೆ ಮಳೆ ಸುರಿದಿದ್ದರಿಂದ ಪಂದ್ಯವನ್ನು ಡ್ರಾದಲ್ಲಿ ಅಂತ್ಯಗೊಳಿಸಲಾಯಿತು.
ಶತಕ ವೈಭವ
ವಿಲಿಯಮ್ಸನ್‌ ಮತ್ತು ಟೇಲರ್‌ ಅವರ ಅಜೇಯ ಶತಕ ಅಂತಿಮ ದಿನದ ಆಕರ್ಷಣೆಯಾಗಿತ್ತು. ಇಂಗ್ಲೆಂಡ್‌ ದಾಳಿಯನ್ನು ಪುಡಿಗಟ್ಟಿದ ಅವರಿಬ್ಬರು ಮುರಿಯದ ಮೂರನೇ ವಿಕೆಟಿಗೆ 213 ರನ್ನುಗಳ ಜತೆಯಾಟ ನೀಡಿದರು. ಮಳೆಯಿಂದಾಗಿ ಇವರಿಬ್ಬರ ಆಟಕ್ಕೆ ಬ್ರೇಕ್‌ ಸಿಕ್ಕಿತು. ಆಗ 234 ಎಸೆತ ಎದುರಿಸಿದ್ದ ವಿಲಿಯಮ್ಸನ್‌ 11 ಬೌಂಡರಿ ನೆರವಿನಿಂದ ಅಜೇಯ 104 ರನ್‌ ಗಳಿಸಿದರೆ ಟೇಲರ್‌ 11 ಬೌಂಡರಿ ಮತ್ತು 2 ಸಿಕ್ಸರ್‌ ನೆರವಿನಿಂದ 105 ರನ್‌ ಗಳಿಸಿ ಔಟಾಗದೆ ಉಳಿದರು. ಇದಕ್ಕಾಗಿ 186 ಎಸೆತ ಎದುರಿಸಿದ್ದರು.
ಸಂಕ್ಷಿಪ್ತ ಸ್ಕೋರ್‌
ನ್ಯೂಜಿಲ್ಯಾಂಡ್‌ ದ್ವಿತೀಯ ಇನ್ನಿಂಗ್ಸ್‌ 241ಕ್ಕೆ 2 (ವಿಲಿಯಮ್ಸನ್‌ ಅಜೇಯ 104, ಟೇಲರ್‌ ಅಜೇಯ 105, ವೋಕ್ಸ್‌ 12ಕ್ಕೆ 1, ಕರನ್‌ 56ಕ್ಕೆ 1). ಇಂಗ್ಲೆಂಡ್‌-476 (ರೂಟ್‌ 226, ಬರ್ನ್ಸ್ 101, ಪೋಪ್‌ 75, ವ್ಯಾಗ್ನರ್‌ 124ಕ್ಕೆ 5, ಸೌಥಿ 90ಕ್ಕೆ 2). ಪಂದ್ಯ ಶ್ರೇಷ್ಠ: ಜೋ ರೂಟ್‌; ಸರಣಿಶ್ರೇಷ್ಠ: ನೀಲ್‌ ವ್ಯಾಗ್ನರ್‌.

ಟೇಲರ್‌ ಟೆಸ್ಟ್‌ನಲ್ಲಿ 7 ಸಾವಿರ ರನ್‌
ಹ್ಯಾಮಿಲ್ಟನ್‌ ಟೆಸ್ಟ್‌ನಲ್ಲಿ ಅಮೋಘ ಶತಕ ಸಿಡಿಸಿದ ರಾಸ್‌ ಟೇಲರ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ 7 ಸಾವಿರ ರನ್‌ ಪೂರ್ತಿಗೊಳಿಸಿದ ನ್ಯೂಜಿಲ್ಯಾಂಡಿನ ಎರಡನೇ ಆಟಗಾರ ಎಂದೆನಿಸಿಕೊಂಡಿದ್ದಾರೆ. ಸ್ಟೀಫ‌ನ್‌ ಫ್ಲೆಮಿಂಗ್‌ ಮೊದಲ ಆಟಗಾರ. ಫ್ಲೆಮಿಂಗ್‌ 189 ಇನ್ನಿಂಗ್ಸ್‌ ಆಡಿ 7 ಸಾವಿರ ರನ್‌ ಪೂರ್ತಿಗೊಳಿಸಿದ್ದರು. ಟೇಲರ್‌ ಈ ಮೈಲುಗಲ್ಲು ಸ್ಥಾಪಿಸಲು 169 ಇನ್ನಿಂಗ್ಸ್‌ ತೆಗೆದುಕೊಂಡರು.
ಒಟ್ಟಾರೆ ಟೆಸ್ಟ್‌ ಕ್ರಿಕೆಟ್‌ನಲ್ಲಿ ಟೇಲರ್‌ ಈ ಸಾಧನೆಗೈದ 51ನೇ ಕ್ರಿಕೆಟಿಗರಾಗಿದ್ದಾರೆ. ಆಸ್ಟ್ರೇಲಿಯದ ಸ್ಟೀವನ್‌ ಸ್ಮಿತ್‌ ಅತೀವೇಗವಾಗಿ ಈ ಸಾಧನೆಗೈದ ಆಟಗಾರರಾಗಿದ್ದಾರೆ. ಅವರು ಪಾಕಿಸ್ಥಾನ ವಿರುದ್ಧದ ಟೆಸ್ಟ್‌ನಲ್ಲಿ ಈ ಸಾಧನೆ ದಾಖಲಿಸಿದ್ದರು. ಅದು ಅವರ 126ನೇ ಇನ್ನಿಂಗ್ಸ್‌ ಆಗಿತ್ತು. ಭಾರತದ ವೀರೇಂದ್ರ ಸೆಹವಾಗ್‌ ಮತ್ತು ಸಚಿನ್‌ ತೆಂಡುಲ್ಕರ್‌ ಅನುಕ್ರಮವಾಗಿ 134ನೇ ಮತ್ತು 136ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.